ಮಕ್ಕಳಿಗೆ ಪದವಿ ಜೊತೆಗೆ ಉದ್ಯೋಗ ಕೊಡಿಸುವುದು ಮುಖ್ಯ: ಪ್ರೊ.ನಾಗೇಂದ್ರ

KannadaprabhaNewsNetwork |  
Published : Jun 16, 2025, 02:06 AM IST
15ಕೆಎಂಎನ್ ಡಿ21 | Kannada Prabha

ಸಾರಾಂಶ

ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲು ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಲ್ಲಿ ಬಿ.ಇ. ಮತ್ತು ಪಾಲಿಟೆಕ್ನಿಕ್ ಜೊತೆಗೆ ಪದವಿ ಪಡೆದ ವಿದ್ಯಾರ್ಥಿಗಳೂ ಸಹ ಬಯೋಕಾನ್ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬಹುದು. ಈಗಾಗಲೇ 146 ಮಂದಿ ತಾಂತ್ರಿಕ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಕ್ಕಳಿಗೆ ಪದವಿ ಕೊಡಿಸುವುದಷ್ಟೆ ಅಲ್ಲದೇ, ಉದ್ಯೋಗ ಕೊಡಿಸುವುದೂ ಸಹ ಮುಖ್ಯವಾಗಿದೆ ಎಂದು ಕಾವೇರಿ ತಾಂತ್ರಿಕ ಶಿಕ್ಷಣ ಸಂಸ್ಥೆ ಮಾಜಿ ಕಾರ್ಯದರ್ಶಿ ಪ್ರೊ.ನಾಗೇಂದ್ರ ತಿಳಿಸಿದರು.

ಬಯೋಕಾನ್ ಸಂಸ್ಥೆ ವತಿಯಿಂದ ಕಾಲೇಜಿನ ಆವರಣದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳು ದೊಡ್ಡ ದೊಡ್ಡ ನಗರಗಳಲ್ಲಿ ಉದ್ಯೋಗ ಪಡೆಯುವುದು ಕಷ್ಟ. ಹಾಗಾಗಿ ನಾವು ನಮ್ಮ ಕಾಲೇಜು ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಂಡು ಹೆಚ್ಚು ಮಂದಿಗೆ ಉದ್ಯೋಗ ಸಿಗುವಂತೆ ಮಾಡಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲು ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಲ್ಲಿ ಬಿ.ಇ. ಮತ್ತು ಪಾಲಿಟೆಕ್ನಿಕ್ ಜೊತೆಗೆ ಪದವಿ ಪಡೆದ ವಿದ್ಯಾರ್ಥಿಗಳೂ ಸಹ ಬಯೋಕಾನ್ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬಹುದು. ಈಗಾಗಲೇ 146 ಮಂದಿ ತಾಂತ್ರಿಕ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಬಯೋಕಾನ್ ಸಂಸ್ಥೆ ವಿಶ್ವದಲ್ಲೇ ಹೆಸರು ಮಾಡಿದೆ. ಇಲ್ಲಿ ಕೆಲಸ ಪಡೆಯುವುದು ಕಷ್ಟವಾಗಿದೆ ಎಂದರು.

ಸಂಸ್ಥೆ ಅಧ್ಯಕ್ಷ ಡಾ.ಬಿ.ಜಿ.ಸಂಗಮೇಶ್ವರ ಮಾತನಾಡಿ, ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ಬಯೋಕಾನ್ ಕಂಪನಿ ವತಿಯಿಂದ ನಡೆಯುತ್ತಿರುವ ಉದ್ಯೋಗ ಮೇಳಕ್ಕೆ ಸುಮಾರು 200ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಮಂಡ್ಯ, ಮೈಸೂರು, ಕೇರಳ, ತಮಿಳುನಾಡು ಭಾಗದಿಂದಲೂ ವಿದ್ಯಾರ್ಥಿಗಳು ಬಂದಿದ್ದಾರೆ. ಎಲ್ಲರಿಗೂ ಉದ್ಯೋಗ ದೊರೆಯಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಈ ವೇಳೆ ಸಂಸ್ಥೆ ಕಾರ್ಯದರ್ಶಿ ಡಾ.ಗಂಗಾಧರಗೌಡ, ಪ್ರಾಂಶುಪಾಲ ಪ್ರೊ.ಎ.ಎಸ್ ಶ್ರೀಕಂಠಪ್ಪ, ಉಪ ಪ್ರಾಂಶುಪಾಲರಾದ ಆರ್.ಮಂಜುನಾಥ್, ಪ್ಲೇಸ್ ಮೆಂಟ್ ಆಫೀಸರ್ ಪ್ರೊ. ಅಮೋಸ್ ಇದ್ದರು.

ಸೊಸೈಟಿ ಚುನಾವಣೆ: ಕಾಂಗ್ರೆಸ್ ಬೆಂಬಲಿಗರ ಮೇಲುಗೈ

ಮಂಡ್ಯ: ತಾಲೂಕಿನ ಹೊಸ ಬೂದನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯಭೇರಿ ಬಾರಿಸಿದ್ದಾರೆ.

ಒಟ್ಟು 11 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ 9 ಅಭ್ಯರ್ಥಿಗಳು ಹಾಗೂ ಜೆಡಿಎಸ್ ಬೆಂಬಲಿತ ಇಬ್ಬರು ಗೆಲುವು ಸಾಧಿಸಿದ್ದಾರೆ.

ಸಾಲಗಾರ ಕ್ಷೇತ್ರದ ಸಾಮಾನ್ಯ ಕ್ಷೇತ್ರದಿಂದ ಬಿ.ಎನ್.ರಘು, ಕೆ.ಪುನೀತ್, ಬಿ.ಎಸ್.ಅರುಣ್ ಕುಮಾರ್, ಬಿ.ಎಸ್.ಮಂಜು, ಬಿ.ಟಿ.ಸುರೇಶ್, ಬಿ.ಎನ್.ರಾವಳಯ್ಯ (ಹಿಂದುಳಿದ ವರ್ಗ ಎ), ಬಿ.ಸಿ.ರಾಜಶೇಖರ (ಹಿಂದುಳಿದ ವರ್ಗ ಬಿ), ಬಿ.ಎಂ.ಮಂಚದಾಸು (ಪ.ಜಾತಿ), ಎನ್.ಪಲ್ಲವಿ (ಪ. ಪಂಗಡ), ವೀರಮ್ಮ (ಮಹಿಳಾ ಮೀಸಲು), ಬಿ.ಸಿ.ಲತಾ (ಮಹಿಳಾ ಮೀಸಲು). ಸಾಲಗಾರರಲ್ಲದ ಕ್ಷೇತ್ರದಿಂದ ಬಿ.ಎಸ್.ಚೈತ್ರೇಶ್ ಇವರು ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ