ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮದ್ದೂರು ಹಾಗೂ ಎಚ್.ಕೆ.ವೀರಣ್ಣಗೌಡ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 140ನೇ ಜನ್ಮ ಜಯಂತಿಯಲ್ಲಿ ಮಾತನಾಡಿದರು.
ಮಂಡ್ಯ, ಮೈಸೂರು, ಬೆಂಗಳೂರು ಪ್ರಾಂತ್ಯದ ಜನ ಸುಭಿಕ್ಷತೆಯಿಂದ ಬದುಕಲು ನಾಲ್ವಡಿಯವರ ತಾಯಿ ಹಾಗೂ ಮಡದಿಯ ತ್ಯಾಗ ನಿಜಕ್ಕೂ ಪ್ರಶಂಷನೀಯವಾಗಿದೆ. ಆದರೆ, ಒಡೆಯರ್ ಅವರ ಸಾಧನೆ ಕೇವಲ ದಿನಾಚರಣೆಗೆ ಮಾತ್ರ ಸೀಮಿತವಾಗಬಾರದು ಎಂದರು.ಇಡೀ ಭಾರತದಲ್ಲಿ ಅಪ್ರತಿಮ ಸಾಧನೆ ಮಾಡಿ ಸಾಮಾನ್ಯ ಜನರು ನೆಮ್ಮದಿಯಿಂದ ಬದುಕಲು ದಾರಿದೀಪವಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಇಂದಿಗೂ ಸಹಾ ಭಾರತ ರತ್ನ ಪ್ರಶಸ್ತಿಯನ್ನು ನೀಡದೆ ಇರುವುದು ಬೇಸರದ ಸಂಗತಿ. ಮುಂದಾದರೂ ಸಹ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಕರಾಗಿ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಬೇಕೆಂದು ತಿಳಿಸಿದರು.
ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆರ್.ಸಂದೀಪ್ ನಾಲ್ವಡಿ ಕೃಷ್ಣರಾಜ ಒಡೆಯರ್ ಜೀವನ ಸಾಧನೆ ಕುರಿತು ಮಾತನಾಡಿ, ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಹೊಂದಿದ್ದ ನಾಲ್ವರಿ ಮಹಾರಾಜರು ಚಿಕ್ಕವಯಸ್ಸಿನಲ್ಲೇ ಅಪ್ರತಿಮ ಪಾಂಡಿತ್ಯ, ದೂರದೃಷ್ಟಿ, ಸೇವಾ ಮನೋಭಾವನೆ, ತ್ಯಾಗ ಮುಂತಾದ ಹಲವು ವಿಚಾರಗಳನ್ನು ತಿಳಿದಿದ್ದರು. ಅವರು ಕಡೆಯ ದಿನಗಳಲ್ಲಿ ಅನುಭವಿಸಿದ ಕಷ್ಟ ಕಾರ್ಪಣ್ಯಗಳು ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಗೌರವ ಸಲ್ಲಿಸಲಾಯಿತು.