ಕನ್ನಡಪ್ರಭ ವಾರ್ತೆ ಚಳ್ಳಕೆರೆ
ನಗರದ ಎಚ್ಪಿಪಿಸಿ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಡು, ನುಡಿ, ನೆಲ, ಜಲ ಸಂಸ್ಕೃತಿ ಸಂಪ್ರದಾಯಗಳ ರಕ್ಷಣೆಗಾಗಿ ಕಳೆದ 112 ವರ್ಷಗಳ ಹಿಂದೆ ಸ್ಥಾಪನೆಗೊಂಡ ಕನ್ನಡ ಸಾಹಿತ್ಯ ಪರಿಷತ್ನ ಅವಿರತ ಸೇವೆ ಅವಿಸ್ಮರಣೀಯ. ಕಥೆ, ಕಾದಂಬರಿಗಳನ್ನು ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಿದೆ. ಕನ್ನಡ ನಾಡು, ನುಡಿ ವಿಚಾರಗಳನ್ನು ಬೆಳೆಸುವ ದೃಷ್ಟಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಕಸಾಪ ಇಂದು ಕನ್ನಡಭಾಷೆ ರಕ್ಷಣೆಗೆ ಟೊಂಕಕಟ್ಟಿ ನಿಂತಿದ್ದು, ಭಾಷೆ ಉಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಇಂಗ್ಲಿಷ್ ಸಂಸ್ಕೃತಿಯಿಂದ ಹೊರಬಂದು ತಾಯಿ ಭಾಷೆ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡುವ ಸಂಸ್ಕೃತಿ ನಮ್ಮಲ್ಲಿ ಬೆಳೆಯಬೇಕಿದೆ ಎಂದರು.ಇಂದಿನ ವಿದ್ಯಾರ್ಥಿಗಳು ಕನ್ನಡಾಭಿಮಾನದಿಂದ ದೂರವಾಗುತ್ತಿರುವುದು ಆತಂಕದ ಸಂಗತಿ. ಇತ್ತೀಚೆಗೆ ನಡೆದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದು ಬೇಸರದ ಸಂಗತಿ ಎಂದರು.
ಮಾತೃಭಾಷೆಗೆ ಮೊದಲ ಸ್ಥಾನ ನೀಡುವ ಇತರೆ ರಾಜ್ಯಗಳಂತೆ ಕನ್ನಡಕ್ಕೂ ಸಹ ಮೊದಲ ಸ್ಥಾನ ನೀಡುವ ಸಂಸ್ಕೃತಿ ಯುವ ಮನಸುಗಳಲ್ಲಿ ಬೆಳೆಯಬೇಕಿದೆ. ಪುಸ್ತಕ ಓದುವುದು, ಗ್ರಂಥಗಳ ಅಧ್ಯಯನ ಮಾಡುವುದು, ಮಹಾನ್ ಕವಿಗಳ ವಿಚಾರವಂತಿಕೆಯನ್ನು ಅರ್ಥೈಸಿಕೊಳ್ಳುವ ಪರಿಪಾಠ ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕು. ವೈಜ್ಞಾನಿಕ ಕಥೆ, ಕಾದಂಬರಿಗಳನ್ನು ಹೆಚ್ಚು ಹೆಚ್ಚು ಅಭ್ಯಾಸ ಮಾಡುವುದರಿಂದ ಸಾಮಾಜಿಕ ವ್ಯವಸ್ಥೆ ಬಗ್ಗೆ ಅರಿಯಲು ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ನೃತ್ಯನಿಕೇತನ ಸಂಚಾಲಕ ಯು.ಎಸ್.ವಿಷ್ಣುಮೂರ್ತಿರಾವ್, ಶಿಕ್ಷಕ ಎಚ್.ಮಂಜುನಾಥ ಮಾತನಾಡಿದರು. ಕರ್ನಾಟಕ ರಕ್ಷಣ ವೇದಿಕೆ (ಪ್ರವೀಣ್ ಶೆಟ್ಟಿಬಣ) ಅಧ್ಯಕ್ಷ ಪಿ.ಮಂಜುನಾಥ, ಕಸಾಪ ಈರಣ್ಣ, ಎಂ.ಎನ್.ಮೃತ್ಯುಂಜಯ, ಬಸವರಾಜು, ನಾಗರಾಜು, ಜಗನ್ನಾಥ ಮುಂತಾದವರು ಉಪಸ್ಥಿತರಿದ್ದರು.