ಮಕ್ಕಳಿಗೆ ಸಂಸ್ಕಾರ ಕಲಿಸುವುದು ಅವಶ್ಯ

KannadaprabhaNewsNetwork |  
Published : Jan 22, 2026, 02:45 AM IST
೨೧ ವೈಎಲ್‌ಬಿ ೦೧ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿಯ ಹಠಯೋಗಿ ಶ್ರೀ ಹುಚ್ಚಿರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ರಥೋತ್ಸವ ಅದ್ಧೂರಿಯಾಗಿ ನಡೆಯಿತು. | Kannada Prabha

ಸಾರಾಂಶ

ಭಗವಂತನ ಕೃಪೆಗೆ ಪಾತ್ರರಾಗಲು ನಿರ್ಮಲವಾದ ಭಕ್ತಿ ಹೇಗೆ ಶ್ರೇಷ್ಠವೋ ಹಾಗೆಯೇ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸಬೇಕು

ಯಲಬುರ್ಗಾ: ಮಕ್ಕಳಿಗೆ ಶಿಕ್ಷಣ ಕಲಿಸುವುದರ ಜತೆಗೆ ಸಂಸ್ಕಾರ ಕಲಿಸುವ ಅವಶ್ಯಕತೆ ಇದೆ ಎಂದು ಕುದರಿಮೋತಿ-ಚಿಕ್ಕಮ್ಯಾಗೇರಿ ಮೈಸೂರು ಸಂಸ್ಥಾನ ಮಠದ ಶ್ರೀವಿಜಯ ಮಹಾಂತ ಸ್ವಾಮೀಜಿ ಹೇಳಿದರು.

ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹಠಯೋಗಿ ಶ್ರೀಹುಚ್ಚಿರೇಶ್ವರ ಜಾತ್ರಾ ಮಹೋತ್ಸವ ಹಾಗೂ ನೂತನ ರಥೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಧರ್ಮ ಚಿಂತನಾ ಗೋಷ್ಠಿಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಚಿಕ್ಕಮ್ಯಾಗೇರಿ ಗ್ರಾ‌ಮದಲ್ಲಿ ಹುಚ್ಚಿರೇಶ್ವರರ ನೂತನ ರಥೋತ್ಸವ ನಿರ್ಮಾಣ ಮಾಡಿರುವುದು ನಿಜಕ್ಕೂ ಸಂತಸದ‌ ಸಂಗತಿ. ಭಗವಂತನ ಕೃಪೆಗೆ ಪಾತ್ರರಾಗಲು ನಿರ್ಮಲವಾದ ಭಕ್ತಿ ಹೇಗೆ ಶ್ರೇಷ್ಠವೋ ಹಾಗೆಯೇ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸಬೇಕು ಎಂದರು.

ಶ್ರೀಧರ ಮುರಡಿ ಹಿರೇಮಠದ ಶ್ರೀಬಸವಲಿಂಗೇಶ್ವರ ಸ್ವಾಮೀಜಿ, ಭೂ ಕೈಲಾಸ ಮೇಲುಗದ್ದುಗೆಮಠದ ಶ್ರೀಗುರುಶಾಂತವೀರ ಸ್ವಾಮೀಜಿ, ಮಕ್ಕಳ್ಳಿಯ ಶ್ರೀ ಶಿವಾನಂದ ಸ್ವಾಮೀಜಿ, ಈಶ್ವರಿ ವಿಶ್ವ ವಿದ್ಯಾಲಯದ ಯೋಗಿನಿ ಅಕ್ಕ, ಗೀತಾ ಅಕ್ಕ ಸಾನ್ನಿಧ್ಯ ವಹಿಸಿದ್ದರು.

ಕುಕನೂರು ತಾಲೂಕಿನ ಬುದಗುಂಪಾದ ಶರಣ‌ ಶ್ರೀಶಿವಬಸವೇಶ್ವರ ಸೇವಾ ಸಮಿತಿ ಹಾಗೂ ಸದ್ಭಕ್ತರು ನಂದಿ ಕೋಲು ಹಾಗೂ ಹಗ್ಗದ ಸೇವೆಗೈದರು. ಸಂಜೆ ವೇಳೆ ಅಪಾರ ಭಕ್ತರ ಸಮ್ಮುಖದಲ್ಲಿ ನೂತನ ರಥೋತ್ಸವ ಅದ್ಧೂರಿಯಾಗಿ ಜರುಗಿತು.

ಹುಡೇಜಾಲಿಯ ಪತ್ರಿ ಬಸವೇಶ್ವರ ಹಿರೇಮಠದ ಶ್ರೀ ವೀರಯ್ಯ ತಾತನವರು ಕಳೆದ ಐದು ದಿನಗಳಿಂದ ಹುಚ್ಚಿರೇಶ್ವರ ಜೀವನ ಚರಿತ್ರೆ ಕುರಿತು ಪುರಾಣ ಪ್ರವಚನ ಪಠಣಗೈದರು. ಗಾಯಕ ಮಂಗಳೇಶ ಶ್ಯಾಗೋಟಿ, ತಬಲಾ ವಾದಕ ನೀಲಕಂಠಪ್ಪ ರೊಡ್ಡರ ಸಂಗೀತ ಸೇವೆ ಸಲ್ಲಿಸಿದರು. ಈ ಸಂದರ್ಭ ಚಿಕ್ಕಮ್ಯಾಗೇರಿ ಹಾಗೂ ಸುತ್ತ ಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ