ಕಿಡಿಗೇಡಿಯನ್ನು ಬಂಧಿಸಿದರೆ ಸಾಲದು, ಕಠಿಣ ಶಿಕ್ಷೆಯಾಗಬೇಕು: ಎನ್.ರಾಜಶೇಖರ್

KannadaprabhaNewsNetwork |  
Published : Dec 09, 2024, 12:48 AM IST
ಪೋಟೋ 5 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೆಲಮಂಗಲ ತಾಲ್ಲೂಕು ಅಧ್ಯಕ್ಷ ಎನ್.ರಾಜಶೇಖರ್ | Kannada Prabha

ಸಾರಾಂಶ

ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಹಿಂದೂ, ಮುಸ್ಲಿಂ, ಕ್ರೈಸ್ತರೆನ್ನದೇ ಎಲ್ಲಾ ಧರ್ಮ, ಜಾತಿಯವರೆಗೂ ಅನ್ನ, ಆಶ್ರಯ, ಶಿಕ್ಷಣ ನೀಡಿದ್ದಾರೆ.

ದಾಬಸ್‍ಪೇಟೆ: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರನ್ನು ಇಡೀ ದೇಶವೇ ಆರಾಧಿಸುತ್ತದೆ, ಅವರ ಪುತ್ಥಳಿಗೆ ಹಾನಿ ಮಾಡಿದ ಕಿಡಿಗೇಡಿಯನ್ನು ಬಂಧಿಸಿದರೆ ಸಾಲದು, ಕಠಿಣ ಶಿಕ್ಷೆಯಾಗಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನೆಲಮಂಗಲ ತಾಲೂಕು ಅಧ್ಯಕ್ಷ ಎನ್.ರಾಜಶೇಖರ್ ಆಗ್ರಹಿಸಿದರು. ಸ್ವಾಮೀಜಿ ಪುತ್ಥಳಿ ಹಾನಿಮಾಡಿದ ಕುರಿತು ಮಾತನಾಡಿದ ಅವರು, ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಹಿಂದೂ, ಮುಸ್ಲಿಂ, ಕ್ರೈಸ್ತರೆನ್ನದೇ ಎಲ್ಲಾ ಧರ್ಮ, ಜಾತಿಯವರೆಗೂ ಅನ್ನ, ಆಶ್ರಯ, ಶಿಕ್ಷಣ ನೀಡಿದ್ದಾರೆ. ಅಂತಹ ಪೂಜ್ಯರ ಪುತ್ಥಳಿಯನ್ನು ಅನ್ಯಧರ್ಮದ ಕಿಡಿಗೇಡಿಯೊಬ್ಬ ಹಾನಿ ಮಾಡಿರುವುದು ಹೇಯಕೃತ್ಯ, ಆತನಿಗೆ ನ್ಯಾಯಾಲಯ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಯಾರೂ ಸಹ ಆತನ ತಪ್ಪನ್ನು ಕ್ಷಮಿಸುವುದಿಲ್ಲ. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಇಂತಹ ಹೀನ ಕೃತ್ಯವನ್ನು ಖಂಡಿಸುತ್ತದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ