ಮಹಾಪುರುಷರನ್ನು ಜಾತಿಗೆ ಸೀಮಿತಗೊಳಿಸೋದು ಸಲ್ಲದು: ಉತ್ತಮ

KannadaprabhaNewsNetwork |  
Published : Aug 21, 2024, 12:34 AM ISTUpdated : Aug 21, 2024, 12:35 AM IST
ಪಟ್ಟಣದ ತಾಲೂಕು ಕಛೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ರವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಿದ ಗಣ್ಯರು | Kannada Prabha

ಸಾರಾಂಶ

ದಾರ್ಶನಿಕರು, ಮಹಾಪುರುಷರನ್ನು ಒಂದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಅವರು ಮನುಕುಲದ ಉದ್ದಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ ಚನ್ನಗಿರಿಯಲ್ಲಿ ಹೇಳಿದ್ದಾರೆ.

- ಚನ್ನಗಿರಿ ತಾಲೂಕು ಕಚೇರಿಯಲ್ಲಿ ದೇವರಾಜ ಅರಸು ಜನ್ಮದಿನ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ದಾರ್ಶನಿಕರು, ಮಹಾಪುರುಷರನ್ನು ಒಂದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಅವರು ಮನುಕುಲದ ಉದ್ದಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಬಿ.ಕೆ.ಉತ್ತಮ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ, ಅರಸು ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ದೇವರಾಜ ಅರಸು ಮುಖ್ಯಮಂತ್ರಿಯಾಗಿ 8 ವರ್ಷ ಅಧಿಕಾರ ನಡೆಸಿದ್ದರು. ಅವರ ಆಡಳಿತ ಅವಧಿಯಲ್ಲಿ ಶೋಷಿತರು, ದಲಿತರು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಭೂ ರಹಿತರಿಗೆ ಭೂಮಿ ಮಾಲೀಕತ್ವ ದೊರಕಿಸಿಕೊಟ್ಟ ಧೀಮಂತ ನಾಯಕರಾಗಿದ್ದರು ಎಂದರು.

ಜಾತಿ ಹಿನ್ನಲೆ, ಆರ್ಥಿಕ ಬಲ ಇಲ್ಲದೇ ರಾಜಕೀಯಕ್ಕೆ ಬಂದಿದ್ದ ಅವರಸು, 2 ಬಾರಿ ಮುಖ್ಯಮಂತ್ರಿಯಾಗಿದ್ದರು. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿಯೇ ತಮ್ಮ ಜೀವನ ಮುಡುಪಾಗಿಟ್ಟಿದ್ದರು. ತಮಗಾಗಿಯೇ ಬದುಕದೇ ಸಮಾಜದ ಉದ್ದಾರಕ್ಕಾಗಿ ಜೀವಿಸಿದವರು ಎಂದರು.

ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗಾ ಮಾತನಾಡಿ, ರಾಜ್ಯ ಕಂಡ ಅಪರೂಪದ ರಾಜಕಾರಣಿ ದೇವರಾಜ ಅರಸು. ತಳ ಸಮುದಾಯದ ಜನರ ಕಲ್ಯಾಣಕ್ಕಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದರು. ಶೋಷಿತ ಸಮುದಾಯ ಪ್ರಸ್ತುತ ದಿನಗಳಲ್ಲಿ ನೆಮ್ಮದಿಯಿಂದ ಜೀವಿಸುವಂತೆ ಮಾಡಿದ ಮಹಾಪುರುಷರು ಎಂದರು.

ಸಮಾರಂಭದಲ್ಲಿ ತಾಲೂಕು ಹಿಂದುಳಿದ ಜಾತಿಗಳ ಒಕ್ಕೂಟ ಅಧ್ಯಕ್ಷ ಸಿ.ಸಿದ್ದಪ್ಪ, ತಿಪ್ಪೇಶಪ್ಪ, ವೀರಶೈವ ಸಮಾಜದ ಗೌರವ ಅಧ್ಯಕ್ಷ ರಾಜಶೇಖರಯ್ಯ, ಗಂಗಾಧರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಶಿಧರ್, ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಶಾಂತಕುಮಾರ್ ಎಚ್. ಮುದಿಹಾಳ್ ಮೊದಲಾದವರು ಹಾಜರಿದ್ದರು.

- - - -20ಕೆಸಿಎನ್‌ಜಿ1:

ಚನ್ನಗಿರಿ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಾಜಿ ಸಿಎಂ ಡಿ.ದೇವರಾಜ ಅರಸು 109ನೇ ಜನ್ಮದಿನ ಕಾರ್ಯಕ್ರಮದಲ್ಲಿ ಗಣ್ಯರು ಅರಸು ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ, ಗೌರವ ಸಮರ್ಮಿಸಿದರು.

PREV