ಸೌಲಭ್ಯ ಕಲ್ಪಿಸದೇ ಆಶ್ರಯ ಮನೆ ವಿತರಿಸಲು ಹೊರಟಿದ್ದು ಸರಿಯಲ್ಲ

KannadaprabhaNewsNetwork |  
Published : Dec 12, 2024, 12:31 AM IST
ಪೊಟೋ: 9ಎಸ್‌ಎಂಜಿಕೆಪಿ06 ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ಮಾತನಾಡಿದರು. | Kannada Prabha

ಸಾರಾಂಶ

It is not right to distribute shelter homes without providing facilities

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಗೋವಿಂದಾಪುರ, ಗೋಪಿಶೆಟ್ಟಿ ಕೊಪ್ಪ ಆಶ್ರಯ ಬಡಾವಣೆಗಳಲ್ಲಿ ಯಾವುದೇ ಮೂಲ ಸೌಲಭ್ಯ ಕಲ್ಪಿಸದೇ ಮನೆ ವಿತರಿಸಲು ಶಾಸಕರು ಹೊರಟಿದ್ದು ಸರಿಯಲ್ಲ, ಇದು ಬಡವರಿಗೆ ಮಾಡುತ್ತಿರುವ ಅನ್ಯಾಯ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮನೆಗಳ ಹಂಚಿಕೆಗೆ ಸಂಬಂಧಿಸಿದಂತೆ ಕುವೆಂಪು ರಂಗಮಂದಿರದಲ್ಲಿ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಇಲ್ಲಿ ಶಿಷ್ಟಾಚಾರವನ್ನು ಕೂಡ ಅವರು ಮರೆತಿದ್ದಾರೆ. ಶಿಷ್ಟಾಚಾರದ ಪ್ರಕಾರ ಸಚಿವ ಮಧು ಬಂಗಾರಪ್ಪ ಹಾಗೂ ಜಮೀರ್ ಅಹಮ್ಮದ್ ಅವರನ್ನು ಸಭೆಗೆ ಕರೆಯಬೇಕಿತ್ತು. ಅವರನ್ನು ಆಹ್ವಾನಿಸಿಯೂ ಇಲ್ಲ. ಅವರಿಗೆ ಹೇಳಿಯೂ ಇಲ್ಲ ಎಂದು ದೂರಿದರು.

ಇಷ್ಟಾದ ಮೇಲೆ ಶಾಸಕರು ನಮಗೆ ಹಕ್ಕುಚ್ಯುತಿ ಉಲ್ಲಂಘನೆಯಾಗಿದೆ ಎಂದು ಹೇಳುತ್ತಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ವಸತಿ ಸಚಿವ ಜಮೀರ್ ಅಹಮ್ಮದ್ ಅವರೊಂದಿಗೆ ಮಾತನಾಡಿ ಸದ್ಯಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲು 15 ಕೋಟಿ ರು. ಕೊಡಿಸಲು ಮುಂದಾಗಿದ್ದರು. ಆದರೆ, ಸೌಜನ್ಯಕ್ಕೂ ಅವರನ್ನು ಕರೆಯದೇ ಶಾಸಕ ಚನ್ನಬಸಪ್ಪ ಅವರು ಫಲಾನುಭವಿಗಳನ್ನು ಆಯ್ಕೆ ಮಾಡಲು ಮುಂದಾಗಿರುವುದು ಹಕ್ಕುಚ್ಯುತಿ ಉಲ್ಲಂಘನೆಯಾಗಿದೆ ಎಂದು ತಿರುಗೇಟು ನೀಡಿದರು.

ಚನ್ನಬಸಪ್ಪ ಅವರು ಮಾಜಿ ಶಾಸಕ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಸ್ಪರ್ಧೆಗೆ ಬಿದ್ದಂತೆ ಕಾಣುತ್ತಿದೆ. ಹಾಗಾಗಿ ಅವಸರದಲ್ಲಿ ಈ ಕಾರ್ಯಕ್ಕೆ ಮುಂದಾಗಿದ್ದಾರೆ. ತಮ್ಮ ಬೆಂಬಲಿಗರಿಗೆ ಮನೆಗಳನ್ನು ಕೊಡಿಸಲು ಆಯುಕ್ತರ ಮೇಲೆ ಒತ್ತಡ ಹಾಕಿ ಅಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿದ್ದರೂ ಏಕಾಏಕಿ ಮನೆಗಳ ಹಂಚಿಕೆ ಸಭೆ ಏರ್ಪಡಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರು ಇವರಿಗೆ ಲೆಕ್ಕಕ್ಕೇ ಇಲ್ಲದಂತಾಗಿದೆ. ಆದ್ದರಿಂದ ಜಿಲ್ಲಾ ಕಾಂಗ್ರೆಸ್ ಆಯುಕ್ತರಿಗೆ ಈ ಸಭೆ ನಡೆಸುತ್ತಿರುವುದು ಸರಿಯಲ್ಲ ಎಂದು ಹೇಳಿತ್ತು ಎಂದು ತಿಳಿಸಿದರು.

ಈಗ ಮಧು ಬಂಗಾರಪ್ಪನವರು ಈ ಸಭೆಯನ್ನು ರದ್ದು ಮಾಡಿದ್ದಾರೆ ಎಂದು ಶಾಸಕ ಚನ್ನಬಸಪ್ಪ ಹೇಳುತ್ತಿರುವುದು ಸರಿಯಲ್ಲ. ತಮ್ಮವರನ್ನು ಎತ್ತಿ ಕಟ್ಟಿ ಪ್ರತಿಭಟನೆಗೆ ಹೊರಟಿದ್ದು ಶಾಸಕರ ಷಡ್ಯಂತ್ರವಾಗಿದೆ ಎಂದರು.

ಈ ಆಶ್ರಯ ಬಡಾವಣೆಗಳಲ್ಲಿ ಅನರ್ಹರಿಗೆ ಮನೆ ಹಂಚಲಾಗಿದೆ. ಬಹುದೊಡ್ಡ ಅಕ್ರಮ ನಡೆದಿದೆ. ನೈಜ ಫಲಾನುಭವಿಗಳನ್ನು ಬಿಟ್ಟು ಬಿಜೆಪಿ ಹಾಗೂ ಆರ್.ಎಸ್.ಎಸ್.ನಲ್ಲಿ ಸಕ್ರಿಯವಾಗಿರುವವರಿಗೆ ಮನೆ ಹಂಚಲಾಗಿದೆ. ಮೊದಲು ಇದು ತನಿಖೆಯಾಗಬೇಕು. ಸರ್ಕಾರ ಕೂಡಲೇ ತನಿಖೆ ನಡೆಸಿ ಅನರ್ಹರಿಗೆಹಂಚಿಕೆಯಾಗಿರುವ ಮನೆಗಳನ್ನು ರದ್ದುಪಡಿಸಿ ನಂತರ ಹಂಚಿಕೆ ಮಾಡಲಿ ಎಂದು ಒತ್ತಾಯಿಸಿದರು.

ಈ ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಬೇಕು. ರಸ್ತೆ ಸೌಲಭ್ಯ, ನೀರಿನ ವ್ಯವಸ್ಥೆ ಇಲ್ಲ. ತರಾತುರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಸೌಲಭ್ಯದ ನಂತರ ಮನೆ ವಿತರಣೆ ಮಾಡಲಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್.ರವಿಕುಮಾರ್, ಚಂದ್ರಭೂಪಾಲ್, ರಮೇಶ್ ಹೆಗ್ಡೆ, ಜಿ.ಡಿ.ಮಂಜುನಾಥ್, ನಾಗರಾಜ್ ಕಂಕಾರಿ, ಶಿವಣ್ಣ, ಎಚ್.ಸಿ. ಯೋಗೀಶ್ ಮುಂತಾದವರಿದ್ದರು.

---------------------------

ಪೊಟೋ: 9ಎಸ್‌ಎಂಜಿಕೆಪಿ06

ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ಮಾತನಾಡಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ