ಭ್ರಷ್ಟಾಚಾರಕ್ಕೆ ಪ್ರಚೋದನೆ ಕೊಡುವುದು ಸರಿಯಲ್ಲ: ಡಾ. ಮೋಹನರಾವ್ ನಾಲ್ವಡೆ

KannadaprabhaNewsNetwork |  
Published : Feb 03, 2026, 02:30 AM IST
ಭಟ್ಕಳದ ಶ್ರೀ ಜ್ಞಾನೇಶ್ವರಿ ಬಿಇಡಿ ಕಾಲೇಜಿನಲ್ಲಿ ಕಾನೂನಿನ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ಪ್ರತಿಯೊಬ್ಬರೂ ಕಾನೂನಿನ ಅರಿವು ಪಡೆಯುವುದು ಅಗತ್ಯವಿದೆ. ಭ್ರಷ್ಟಾಚಾರದ ನಿರ್ಮೂಲನೆಗೆ ಪ್ರತಿಯೊಬ್ಬರೂ ಮುಂದಾಗಬೇಕು.

ಭಟ್ಕಳ ಜ್ಞಾನೇಶ್ವರಿ ಬಿಇಡಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಭಟ್ಕಳ

ಭ್ರಷ್ಟಾಚಾರಕ್ಕೆ ಸಾರ್ವನಿಕರೇ ಬೆಂಬಲ ಕೊಡುತ್ತಿದ್ದಾರೆ. ಸಾರ್ವಜನಿಕರು ಎಂದಿಗೂ ಭ್ರಷ್ಟಾಚಾರಕ್ಕೆ ಪ್ರಚೋದನೆ ಕೊಡಬಾರದು ಎಂದು ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಡಾ. ಮೋಹನರಾವ್ ನಾಲ್ವಡೆ ತಿಳಿಸಿದರು.

ಪಟ್ಟಣದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಶಾಖೆ, ಭಟ್ಕಳದ ವತಿಯಿಂದ ಏರ್ಪಡಿಸಲಾದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ ಕಾನೂನಿನ ಅರಿವು ಪಡೆಯುವುದು ಅಗತ್ಯವಿದೆ. ಭ್ರಷ್ಟಾಚಾರದ ನಿರ್ಮೂಲನೆಗೆ ಪ್ರತಿಯೊಬ್ಬರೂ ಮುಂದಾಗಬೇಕು. ಕಾನೂನಿನ ಅರಿವು ಇಲ್ಲದೇ ಅಪರಾಧ ಕೃತ್ಯ ಹೆಚ್ಚಾಗುತ್ತಿದೆ. ದೇಶವ್ಯಾಪಿ ನಮ್ಮ ಸಂಸ್ಥೆಯಿಂದ ಶಾಲೆ, ಕಾಲೇಜುಗಳಲ್ಲಿ ಕಾನೂನಿನ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಎಲ್ಲರೂ ನಮ್ಮ ನಮ್ಮ ಕರ್ತವ್ಯ ಮತ್ತು ಕಾನೂನಿನ ತಿಳುವಳಿಕೆ ಹೊಂದಿದರೆ ಯಾವುದೇ ರೀತಿಯ ಸಮಸ್ಯೆ ಉಂಟಾಗದು. ತಳಮಟ್ಟದಲ್ಲಿ ಕಾನೂನಿನ ಅರಿವು ಮೂಡಿಸಿದರೆ ಮಾತ್ರ ಭ್ರಷ್ಟಾಚಾರ ನಿರ್ಮೂಲನ ಸಾಧ್ಯವಾಗುತ್ತದೆ. ದೇಶದಲ್ಲಿ ಡ್ರಗ್ಸ್‌ ಮಾಫಿಯಾ ಹೆಚ್ಚಿದೆ. ಮಾಫಿಯಾ ಮೂಲಕ ಸಮಾಜ, ಕುಟುಂಬ ಒಡೆಯುವುದು ಮತ್ತು ಆರ್ಥಿಕ ಶಕ್ತಿ ಕುಂದುವಂತೆ ಮಾಡಲಾಗುತ್ತಿದೆ ಎಂದ ಅವರು, ಇಂತಹ ದುಷ್ಕೃತ್ಯಕ್ಕೆ ಯುವಕರು ಬಲಿಯಾಗಬಾರದು ಎಂದರು.

ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಸ್ಥಳೀಯ ಶಾಖೆಯ ಅಧ್ಯಕ್ಷ ಸತೀಶಕುಮಾರ ನಾಯ್ಕ ಮಾತನಾಡಿ, ಕಾನೂನು ಸಮಾಜದ ಹಿತಕ್ಕೆ ಬಳಕೆ ಆಗಬೇಕು ಎಂದರು.

ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಂ.ಆರ್. ನಾಯ್ಕ ಮಾತನಾಡಿ, ಅಪರಾಧ ಮುಕ್ತ ಸಮಾಜ ನಿರ್ಮಾಣ ಆಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕಾನೂನಿನ ಜ್ಞಾನ ಹೊಂದಬೇಕು. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಅನೇಕ ಕಾನೂನುಗಳಿವೆ. ಪ್ರತಿ ತಾಲೂಕಿನಲ್ಲೂ ಕಾನೂನು ಸೇವಾ ಪ್ರಾಧಿಕಾರಗಳಿದ್ದು, ಇದನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾನವ ಹಕ್ಕು, ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಟಿ.ಡಿ. ಹೇರಂಭ ಕುಮಟಾ, ಜ್ಞಾನೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿರೇಂದ್ರ ಶಾನಭಾಗ ಮಾತನಾಡಿದರು. ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಸದಸ್ಯ ಇಸ್ಮಾಯಿಲ್ ಹಬೀಬುಲ್ಲಾ ಸ್ವಾಗತಿಸಿದರು. ಉಪಾಧ್ಯಕ್ಷ ಎಸ್.ಎಂ. ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಫಾತೀಮ ತನೀಮ್ ವಂದಿಸಿದರು. ಸದಸ್ಯರಾದ ಅಶೋಕ ಮಹಾಲೆ ಮತ್ತು ವೆಂಕಟೇಶ ನಾಯ್ಕ ನಿರೂಪಿಸಿದರು. ಕುಮಟಾ ಶಾಖೆಯ ಉಪಾಧ್ಯಕ್ಷ ಮಹೇಶ ನಾಯ್ಕ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು, ಉಪನ್ಯಾಸಕರು, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಸ್ಥಳೀಯ ಶಾಖೆಯ ಸದಸ್ಯರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ