ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
1947ರಲ್ಲಿ ಜಗತ್ತು ಬೆರಗುಗೊಳ್ಳುವ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಗೊಂಡಿರುವ ಸ್ವತಂತ್ರ್ಯ ಭಾರತ ಅನಾವರಣಗೊಂಡ ಅವಿಸ್ಮರಣೀಯ ದಿನವಾಗಿದೆ. ಈ ದಿನ ಸರ್ವ ಸ್ವತಂತ್ರವಾಗಬೇಕೆಂದು ಸಂಕಲ್ಪ ಮಾಡಿ ಅನೇಕ ಹೋರಾಟವನ್ನು ಮಾಡಿ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರ ಅವಿರತ ಪರಿಶ್ರಮದಿಂದಾಗಿ ನಾವಿಂದು ಸ್ವಾತಂತ್ರ್ಯದ ಫಲವನ್ನು ಅನುಭವಿಸಿತ್ತಿದ್ದೇವೆ ಎಂದರು.ಜಿಲ್ಲೆಯಲ್ಲೂ ಅನೇಕ ಮಹಾನಿಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜಿಲ್ಲೆಗೆ ಗೌರವ ತಂದಿದ್ದಾರೆ. ಅವರುಗಳಿಗೆ ನಮನಗಳನ್ನು ಸಲ್ಲಿಸೋಣ. ಸ್ವಾತಂತ್ರ್ಯವನ್ನು ಉಳಿಸಿಕೊಂಡು ಜೋಪಾನ ಮಾಡುವುದು ಭಾರತೀಯರಾದ ನಮ್ಮೇಲ್ಲರ ಆದ್ಯ ಕರ್ತವನ್ಯವಾಗಿದೆ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಂತೂ ಜನರಿಗೆ ಅತ್ಯಂತ ಅಚ್ಚುಮೆಚ್ಚಿನ ಕಾರ್ಯಕ್ರಮವಾಗಿದೆ. ಜಿಲ್ಲೆಯಲ್ಲಿ 2,78,080 ಫಲಾನುಭವಿಗಳಿಗೆ ಗೃಹ ಲಕ್ಷ್ಮಿ ಯೋಜನೆಯಿಂದ, 2,73,190 ಫಲಾನುಭವಿಗಳಿಗೆ ಗೃಹ ಜ್ಯೋತಿ ಯೋಜನೆಯಿಂದ, 8,65,861 ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಿಂದ, 10,28,41,088 ಮಹಿಳೆಯರು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಿ ಶಕ್ತಿ ಯೋಜನೆಯಿಂದ 3,558 ನಿರುದ್ಯೋಗಿಗಳು ಯುವನಿಧಿ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ ಎಂದರು.
ಕೊಳ್ಳೇಗಾಲ ಪಶು ಆಸ್ಪತ್ರೆಯನ್ನು ಪಾಲಿಕ್ಲಿನಿಕ್ ಆಗಿ ಮೇಲ್ದರ್ಜೆಗೇರಿಸಲಾಗಿದ್ದು, ಸೋಮಹಳ್ಳಿ, ಗೂಳಿಪುರ, ಗೌಡಹಳ್ಳಿ, ಪಾಳ್ಯ, ಕೊಡಸೋಗೆ, ಕುದೇರು ಗ್ರಾಮಗಳಲ್ಲಿ ಹೊಸದಾಗಿ ಪಶುವೈದ್ಯ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ ಎಂದರು.
ಜೆಜೆಎಂ ಯೋಜನೆಯಡಿ 865 ಜನವಸತಿಗಳಲ್ಲಿ 1021 ಕಾಮಗಾರಿಗಳನ್ನು ಪೂರ್ಣಗೊಳಿಸಿದೆ. 8 ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಪೈಕಿ 4 ಪೂರ್ಣಗೊಂಡಿದ್ದು, 4 ಯೋಜನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಟರ್, ನಗರಸಭಾ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಮಮತಾ, ಸದಸ್ಯೆ ಲೋಕೇಶ್ವರಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಪಂ ಸಿಇಒ ಮೋನಾ ರೋತ್, ಎಸ್ಪಿ ಡಾ.ಬಿ.ಟಿ.ಕವಿತಾ, ಎಡಿಸಿ ಜವರೇಗೌಡ ಇತರರು ಭಾಗವಹಿಸಿದ್ದರು.