ಕನ್ನಡಪ್ರಭ ವಾರ್ತೆ ಸೊರಬ
ಬುಧವಾರ ತಾಲೂಕಿನ ಉದ್ರಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಯುವಕರ ಸಂಘ, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಗ್ರಾಮ ಪಂಚಾಯಿತಿ ಉದ್ರಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 4ನೇ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ರಕ್ತಹೀನತೆ, ವಿವಿಧ ಕಾಯಿಲೆಗಳಿಂದ ಬಳಲುವವರು ಮತ್ತು ಅಪಘಾತದಂತಹ ತುರ್ತು ಸಂದರ್ಭಗಳಿಗೆ ರಕ್ತದ ಅಗತ್ಯತೆ ಇರುತ್ತದೆ. ಪ್ರತಿನಿತ್ಯ ಜನರು ಒಂದಿಲ್ಲೊಂದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಕ್ತದ ಕೊರತೆಯಿಂದ ಸಾಕಷ್ಟು ಜನ ತೊಂದರೆಗೆ ಒಳಗಾಗುತ್ತಿದ್ದಾರೆ. ಯುವಪೀಳಿಗೆ ರಕ್ತದಾನಕ್ಕೆ ಮುಂದಾಗುವುದರೊಂದಿಗೆ ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬಹುದು. ರಕ್ತದಾನ ಮಾಡುವುದರಿಂದ ಮನುಷ್ಯನ ಆಯಸ್ಸು ವೃದ್ಧಿ ಆಗುವುದರೊಂದಿಗೆ ಉತ್ತಮ ಆರೋಗ್ಯ, ಚಟುವಟಿಕೆಯಿಂದ ಇರಬಹುದು. ಹೀಗಾಗಿ, ಪರೋಪಕಾರದ ಧ್ಯೇಯ ಇಟ್ಟುಕೊಂಡು ರಕ್ತದಾನ ಶಿಬಿರಗಳು ಹೆಚ್ಚೆಚ್ಚು ನಡೆಯಬೇಕು ಎಂದು ತಿಳಿಸಿದರು.ಆಯುಷ್ ವೈದ್ಯಾಧಿಕಾರಿ ಡಾ. ಎಂ.ಕೆ. ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ರಕ್ತದಾನ ಶಿಬಿರಗಳೆಂದರೆ ಪ್ರಚಾರ ಗಿಟ್ಟಿಸಿಕೊಳ್ಳುವಂತಹ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು ಕಲ್ಪನೆ. ಮನುಷ್ಯನ ಆರೋಗ್ಯದ ಎಲ್ಲ ಸಮಸ್ಯೆಗಳಿಗೆ ವೈದ್ಯರಿಂದಲೇ ಪರಿಹಾರ ಸಿಗುತ್ತದೆ ಎನ್ನುವುದು ತಪ್ಪು. ಮೂತ್ರಪಿಂಡ, ರಕ್ತ, ಕಣ್ಣು, ಹೃದಯ ಇನ್ನಿತರ ಭಾಗಗಳನ್ನು ಇನ್ನೊಬ್ಬರ ದೇಹಕ್ಕೆ ವರ್ಗಾವಣೆ ಮಾಡಬಹುದಾಗಿದೆ. ಅವುಗಳನ್ನು ದಾನದ ರೂಪವಾಗಿ ನೀಡುವುದು ಪುಣ್ಯದ ಕೆಲಸ. ಈ ಕುರಿತು ಸಂಘ ಸಂಸ್ಥೆಗಳ ಸಹಕಾರ ವೈದ್ಯರಿಗೆ ಮತ್ತು ಆಸ್ಪತ್ರೆಗಳಿಗೆ ಅವಶ್ಯವಿದೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಯಾರೇ ಮುಂದಾದರೂ ಅದಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ. ಇಂದು ನಡೆದ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು.
ಪತ್ರಕರ್ತ ಮಧುಕೇಶ್ವರ 24ನೇ ಬಾರಿಗೆ ರಕ್ತದಾನ ಮಾಡಿದ್ದು, ಸಚಿವ ಮಧು ಬಂಗಾರಪ್ಪ ಅವರಿಗೆ ರಕ್ತದಾನ ಪ್ರಮಾಣಪತ್ರ ನೀಡಿದರು.
- - -
ಬಹುತೇಕ ಜನರಲ್ಲಿ ರಕ್ತ ದಾನದ ಕುರಿತಾಗಿ ವಿವರವಾದ ಮಾಹಿತಿ ಇಲ್ಲ. ಹೀಗಾಗಿ, ಹಣ ಕೊಟ್ಟರೆ ಸಿಗುವಂತಹ ವಸ್ತು ಎಂಬ ಭಾವನೆ ಬಹುತೇಕ ಜನರ ಮನಸ್ಸಿನಲ್ಲಿದೆ. ಹಣ ಕೊಟ್ಟ ಪಡೆದ ರಕ್ತವು ಸಹ ಇನ್ನೊಬ್ಬರ ದೇಹದಿಂದ ಬಂದ ದೇಣಿಗೆ ಎಂಬ ಬಗ್ಗೆ ವಿವರವಾದ ಮಾಹಿತಿಗಳು ಸಾರ್ವಜನಿಕರಲ್ಲಿ ರವಾನೆ ಆಗಬೇಕಾಗಿದೆ
- - - -31ಕೆಪಿಸೊರಬ01: