ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಪಟ್ಟಣದ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 75ನೇ ಗಣರಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಮಾತನಾಡಿದ ಅವರು, ಡಾ.ಅಂಬೇಡ್ಕರ್ ರಚಿಸಿರುವ ಸಂವಿಧಾನ ನಮ್ಮ ದೇಶದ ಪವಿತ್ರ ಗ್ರಂಥಗಳಲ್ಲಿ ಒಂದಾಗಿದೆ. ಸಂವಿಧಾನವನ್ನು ಸಂರಕ್ಷಿಸುವುದು ಹಾಗೂ ಗೌರವಿಸುವುದಲ್ಲದೆ ಅದನ್ನು ಪಾಲನೆ ಮಾಡಬೇಕಾಗಿರುವುದು ನಮ್ಮಲ್ಲರ ಕರ್ತವ್ಯ. ಭಾರತ ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಸರ್ವತೋಮುಖ ಅಭಿವೃದ್ಧಿಯತ್ತ ಸಾಗುತ್ತಿರುವುದಕ್ಕೆ ಕಾರಣವೇ ನಮ್ಮ ದೇಶದ ಸಂವಿಧಾನ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನತೆ ಸಿಗಲು ಮಹನೀಯರು ಸಂವಿಧಾನ ರಚಿಸಿದ್ದಾರೆ. ಆದರೆ ಕೆಲವರು ರಾಜಕೀಯ ಚಪಲಕ್ಕೆ ಇಡೀ ಸಂವಿಧಾನವನ್ನೇ ಬದಲಿಸುತ್ತೇವೆಂದು ಹೇಳಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಪ್ರಪಂಚ ಇರುವವರೆಗೂ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಈ ಅನಿಷ್ಠ ಪದ್ದತಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಪ್ಪಣ್ಣ ಕ್ರೀಡಾ ಕ್ಷೇತ್ರ, ಅಮರ್ ಪೊಲೀಸ್ ಇಲಾಖೆ, ಡಾ.ಯತೀಂದ್ರ ವೈದ್ಯಕೀಯ, ಮಂಜುಳಾ ವೈದ್ಯಕೀಯ, ಪಿ.ಎಸ್.ರಾಜೇಶ್(ಪ್ರಜಾವಾಣಿ) ಪತ್ರಿಕಾ ರಂಗ, ಎಂ.ವಿ. ವೆಂಕಟ ರತ್ನಮ್ಮ ಕಂದಾಯ ಇಲಾಖೆ, ಶಿವಪ್ಪ ಶಿಕ್ಷಣ ಇಲಾಖೆ, ರಮಣಮ್ಮ ಪೌರಕಾರ್ಮಿಕ ಕ್ಷೇತ್ರದ ಸಾಧಕರನ್ನುಸನ್ಮಾನಿಸಲಾಯಿತು.