-ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಜಯಪ್ರಕಾಶ್ ಹೆಗ್ಗೆ
ಕನ್ನಡಪ್ರಭ ವಾರ್ತೆ, ತರೀಕೆರೆಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.ಭಾನುವಾರ ತರೀಕೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಟ್ಟಣದ ಅರಮನೆ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಗೆ ಅವರೊಂದಿಗೆ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಆರೋಗ್ಯಕರ ಸ್ಪರ್ಧೆಯಾಗಲಿ, ಆನಾರೋಗ್ಯಕರ ಸ್ಪರ್ಧೆ ಬೇಡ, ಲೋಕಸಭಾ ಕ್ಷೇತ್ರದಲ್ಲಿ ನಿಂತು ಹೋಗಿರುವ ಎಲ್ಲ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಿಕೊಡುತ್ತೇನೆ.
ತರೀಕೆರೆ ಪಟ್ಟಣದಲ್ಲಿ ವಿಐಎಲ್ ನಿಂತುಹೋಗಿದೆ. ಪಟ್ಟಣದಲ್ಲಿ ಇನ್ನೊಂದು ಉದ್ಯಮ ಸೃಷ್ಠಿಯಾಗಬೇಕು. ಹಿಂದೆ ಅಡಕೆ ಧಾರಣೆ ಕ್ವಿಂಟಾಲ್ ಗೆ ಹತ್ತು ಸಾವಿರ ಇತ್ತು. ಅಮದು ಅಡಕೆಗೆ ಹೆಚ್ಚು ಸುಂಕ ವಿಧಿಸುವಂತೆ ಮಾಡಿದ್ದರಿಂದ ಅಡಕೆ ಧಾರಣೆ 80 ಸಾವಿರಕ್ಕೆ ಹೋಯಿತು. ತಾವು ಸಂಸದರಾಗಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನದಿಂದ ಚಿಕ್ಕಮಗಳೂರಿಗೆ ರೈಲು ಮಾರ್ಗ ತರಲಾಯಿತು, 9 ವರ್ಷ ಕಳೆದಿದೆ ಆದರೆ ಇಲ್ಲಿಯವರೆಗೆ ಚಿಕ್ಕಮಗಳೂರಿಗೆ ಒಂದು ಗೂಡ್ಸ್ ಗಾಡಿಯನ್ನು ತರಲಾಗಿಲ್ಲ. ನಾಯಕರ ಹೆಸರಿನಲ್ಲಿ ಚುನಾವಣೆಗೆ ಹೋಗುವವರು ನಾವಲ್ಲ, ಕೆಲಸ ಮಾಡಿ ಚುನಾವಣೆಗೆ ಹೋಗುವವರು ನಾವು ಎಂದು ಹೇಳಿದರು. 15 ಲಕ್ಷ ಹಣ ಬರಲಿಲ್ಲ, ಕಪ್ಪು ಹಣ ಬರಲಿಲ್ಲ, ಈ ಕಪ್ಪು ಹಣ ಎಲ್ಲಿ ಹೋಯಿತು ಎಂಬ ಬಗ್ಗೆ ಚರ್ಚೆಯಾಗಲಿ, ಉದ್ಯೋಗ ಸೃಷ್ಠಿಯಾಗಲಿಲ್ಲ, ಆದರೆ, ಸುಳ್ಳನ್ನು ಹೇಳಿ ಅದನ್ನು ಸತ್ಯ ಮಾಡುತ್ತಾರೆ. ನಾನು ಯಾರನ್ನೂ ಬೈಯುವುದಿಲ್ಲ, ಬಯ್ಯಲು ಬರುವುದೂ ಇಲ್ಲ, ಸಮಸ್ಯೆಗಳಿಗೆ ಸ್ಪಂದಿಸಬೇಕು, ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ, ಏ. 3 ರಂದು ನಾಮಪತ್ರ ಸಲ್ಲಿಸುತ್ತೇನೆ. ಈ ಬಾರಿ ಬದಲಾವಣೆ ಖಂಡಿತ, ಹೆಚ್ಚಿನ ಮತ ನೀಡಿ ನನ್ನನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಪ್ರಾಮಾಣಿಕರು, ಸಜ್ಜನರು ಜನರ ಕಷ್ಟಗಳಿಗೆ ಮಿಡಿಯುತ್ತಾರೆ. ಅಡಕೆ ಧಾರಣೆ ಕುಸಿದಿತ್ತು, ಆಗ ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಡೆ ಆಮದು ಅಡಕೆಗೆ ಹೆಚ್ಚು ಸುಂಕ ವಿಧಿಸುವಂತೆ ಮಾಡಿ, ಅಡಕೆ ಧಾರಣೆ ಹೆಚ್ಚುವಂತೆ ಮಾಡಿದ್ದರು. ಚಿಕ್ಕಮಗಳೂರಿಗೆ ರೈಲು ತಂದರು, ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಗೃಹಲಕ್ಷ್ಮಿ, ಅನ್ನಭಾಗ್ಯ ಜಾರಿಗೆ ತಂದರು. ಜನರ ಪರವಾಗಿ ಕಾಂಗ್ರೆಸ್ ಸರ್ಕಾರ ಇದೆ, ಬಿಜೆಪಿಯವರು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಬಿಜೆಪಿಯವರಿಗೆ ಸೋಲುವ ಭಯ ಇದೆ. ಕಾಂಗ್ರೆಸ್ ಪಕ್ಷದವರ ಮೇಲೆ ಐಟಿ, ಇಡಿ.ಇತ್ಯಾದಿ ಕೇಸುಗಳನ್ನು ಹಾಕಿ ಕುತಂತ್ರ ಮಾಡಿದರು. ಬಿಜೆಪಿ ದೊಡ್ಡ ಬ್ರಷ್ಠಾಚಾರದ ಸರ್ಕಾರ ಎಂದರು.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಆಂಶುಮಂತ್ ಮಾತನಾಡಿ 10 ವರ್ಷಗಳಲ್ಲಿ ಬಿಜೆಪಿ ಸಂಸದರು ಯಾವ ವಿಚಾರಗಳನ್ನು ಪ್ರತಿಪಾದಿಸಿಲ್ಲ. ಜನರ ಪರವಾಗಿ ಸಂಸದರು ನಿಂತಿಲ್ಲ. ವಿಫಲರಾಗಿದ್ದಾರೆ. ಬಿಜೆಪಿ ಯವರದ್ದು ಅವೈಜ್ಞಾನಿಕ ಆರ್ಥಿಕ ನೀತಿ. ಎಲ್ಲ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಹೇಳಿದರು.ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಯು.ಫಾರೂಕ್ ಮಾತನಾಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್
ಹೆಗ್ಡೆ ಅವರು ಸರಳ ಸಜ್ಜನ ವ್ಯಕ್ತಿ. ಎಲ್ಲ ವರ್ಗದವರಿಗೂ ಸ್ಪಂದಿಸುತ್ತಾರೆ, ನಮ್ಮ ಕಾಂಗ್ರೆಸ್ ಪಕ್ಷ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದೆ ಎಂದು ತಿಳಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಅವರು ಮಾತನಾಡಿ ಅಭಿವೃದ್ಧಿಯೆ ನಮ್ಮ ಮಂತ್ರ, ಅರ್ಥಪೂರ್ಣ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ನಿರ್ವಹಿಸಿದೆ ಎಂದು ಹೇಳಿದರು.ರಾಜ್ಯಸಭಾ ಮಾಜಿ ಸದಸ್ಯ ಆಯನೂರು ಮಂಜುನಾಥ್, ಗ್ಯಾರಂಟಿ ಯೋಜನೆ ಉಸ್ತುವಾರಿ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದಸ್ವಾಮಿ, ಕೆಪಿಸಿಸಿ ಸದಸ್ಯ ಎಚ್.ವಿಶ್ವನಾಥ್ ಮತ್ತಿತರರು ಮಾತನಾಡಿದರು.ಕೆಪಿಸಿಸಿ ಕಾರ್ಯದರ್ಶಿ ಗಫೂರ್, ಸದಸ್ಯ ರವಿಕಿಶೋರ್, ಕಾಂಗ್ರೆಸ್ ಸಮಿತಿ ನಗರಾಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಮಂಜುನಾಥ್ ಲಾಡ್, ಗ್ಯಾರಂಟಿ ಯೋಜನೆ ಉಸ್ತುವಾರಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಮೀವುಲ್ಲಾ ಷರೀಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್, ತಾಲೂಕು ಮಹಿಳಾ ಕಾಂಗ್ರೆಸ್ ಸಮಿತಿ ಅದ್ಯಕ್ಷೆ ಭಾಗ್ಯಲಕ್ಷ್ಮಿ, ಅಲ್ಪಸಂಖ್ಯಾತರ ಘಟಕದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮದ್ ಇರ್ಷಾದ್, ಪ್ರಚಾರ ಸಮಿತಿ ಅಧ್ಯಕ್ಷ ಪರಶುರಾಮ್ ಮುಖಂಡರಾದ ಜಿ.ರಂಗಪ್ಪ, ಜಗದೀಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅದಿಲ್ ಪಾಷ, ಪುರಸಭೆ ಉಪಾಧ್ಯಕ್ಷೆ ದಿವ್ಯ ರವಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.31ಕೆಟಿಆರ್.ಕೆ.1ಃ
ತರೀಕೆರೆಯಲ್ಲಿ ಬ್ಲಾಕ್ ಕಾಂಗ್ಹೆಸ್ ಸಮಿತಿಯಿಂದ ಏರ್ಪಡಿಸಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಜತೆಗಿನದ ಕಾರ್ಯಕರ್ತರ ಸಭೆಯನ್ನು ಚುನಾವಣಾ ಉಸ್ತುವಾರಿ ಮಂಜುನಾಥ ಭಂಡಾರಿ ಉದ್ಘಾಟಿಸಿದರು. ಶಾಸಕ ಜಿ.ಎಚ್.ಶ್ರೀನಿವಾಸ್, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಅಂಶುಮಂತ್ ಮತ್ತಿತರರು ಇದ್ದರು.