ಕನ್ನಡಪ್ರಭ ವಾರ್ತೆ ಮದ್ದೂರು
ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿರುವ ಸಚಿವರ ಕುಮಾರಸ್ವಾಮಿ ಅವರಿಗೆ ತಾಲೂಕಿನ ನಿಡಘಟ್ಟ ಸಮೀಪದ ಖಾಸಗಿ ಹೋಟೆಲ್ ವೊಂದರಲ್ಲಿ ಉಪಾಹಾರ ಸೇವಿಸಿದ ನಂತರ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಕ್ಕರೆ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳೇ ಕಾರಣ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಸಕ್ಕರೆ ಬೆಲೆ ದಿಢೀರ್ ಏರಿಕೆಯಾಗುವುದರಲ್ಲಿ ಇ.20 ಎಥೆನಾಲ್ ಅನ್ನು ಹೆಚ್ಚಿನ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿರುವುದು ಸಕ್ಕರೆ ಬೆಲೆ ದಿಢೀರ್ ಏರಿಕೆಗೆ ಒಂದು ಕಾರಣವಾದರೆ ಹಬ್ಬ, ಹರಿದಿನಗಳ ಕಾಲದಲ್ಲಿ ಸಕ್ಕರೆ ಬೇಡಿಕೆಗೆ ಹೆಚ್ಚಾಗಿ ಕಾರಣವಿರಬಹುದು. ಈ ಬಗ್ಗೆ ಕೇಂದ್ರ ಸರ್ಕಾರ ಶೀಘ್ರ ಗಮನ ಹರಿಸುತ್ತದೆ ಎಂದರು.ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಧೈರ್ಯವಿದ್ದರೆ ನೈಸ್ ರಸ್ತೆ ಟೋಲ್ಗೆ ಕಡಿವಾಣ ಹಾಕಲು ನ್ಯಾಯಾಲಯದಿಂದ ತಡೆಯಾಜ್ಞೆ ತರಲಿ ಎಂದು ಪೌರಾಡಳಿತ ಸಚಿವ ಎಚ್.ಡಿ.ಬಾಲಕೃಷ್ಣ ಸವಾಲಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನೈಸ್ ಸೇರಿದಂತೆ ಅನೇಕ ವಿಚಾರಗಳಲ್ಲಿ ಸರ್ಕಾರ ತಪ್ಪು ಮಾಡಿದಾಗ ಧ್ವನಿ ಎತ್ತುವುದು ನಮ್ಮ ಕರ್ತವ್ಯವಾಗಿದೆ. ಹೀಗಾಗಿ ಬಾಲಕೃಷ್ಣ ಟೋಲ್ ವಸೂಲಿ ವಿರುದ್ಧ ಪ್ರಶ್ನಿಸಿದ ನನ್ನ ವಿರುದ್ಧ ಹೊಟ್ಟೆ ನೋವಿನ ಕಥೆ ಕಟ್ಟುತ್ತಿದ್ದಾರೆ. ಈ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ ಎಂದರು.
ಮದ್ದೂರು ವಡೆ ರುಚಿ ಸವಿದು ಎಚ್ಡಿಕೆ ಮೆಚ್ಚುಗೆ
ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಮದ್ದೂರು ಟಿಫಾನೀಸ್ ಹೋಟೆಲ್ನಲ್ಲಿ ಮದ್ದೂರು ವಡೆ ರುಚಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.
ಮದ್ದೂರು ವಡೆ ರುಚಿಯೊಂದಿಗೆ ತನ್ನದೇ ಆದ ವೈಶಿಷ್ಟವನ್ನು ಹೊಂದಿದೆ. ಮಾಲೀಕ ಜಯಪ್ರಕಾಶ್ ಅವರ ಪೂರ್ವಜ್ಞರು ನೂರು ವರ್ಷಗಳ ಹಿಂದೆಯೇ ಮದ್ದೂರು ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದ ಮದ್ದೂರು ವಡೆ ಈಗ ಪ್ರತಿ ಕುಟುಂಬದ ಮನೆ ಮಾತಾಗಿದೆ. ಅಲ್ಲದೇ, ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮದ್ದೂರು ವಡೆ ಯಾಕೆ ಪಡೆದುಕೊಂಡಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.