ಜಾತಿ ಸಮೀಕ್ಷೆ ಗೊಂದಲ ಬಗೆಹರಿಸುವುದು ಸರ್ಕಾರದ ಜವಾಬ್ದಾರಿ

KannadaprabhaNewsNetwork |  
Published : Sep 20, 2025, 01:00 AM IST
19ಕೆಆರ್ ಎಂಎನ್ 3.ಜೆಪಿಜಿವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಸುದರ್ಶನ್  | Kannada Prabha

ಸಾರಾಂಶ

ರಾಮನಗರ: ಜಾತಿ ಮತ್ತು ಧರ್ಮ ಎಂಬುದು ಬಹಳ ಸೂಕ್ಷ್ಮವಾದ ವಿಚಾರ. ಈಗ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಸುದರ್ಶನ್ ಸಲಹೆ ನೀಡಿದರು.

ರಾಮನಗರ: ಜಾತಿ ಮತ್ತು ಧರ್ಮ ಎಂಬುದು ಬಹಳ ಸೂಕ್ಷ್ಮವಾದ ವಿಚಾರ. ಈಗ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಸುದರ್ಶನ್ ಸಲಹೆ ನೀಡಿದರು.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಹಿಂದುಳಿದ ಜಾತಿಗಳ ಮಹಾ ಒಕ್ಕೂಟ ಆಯೋಜಿಸಿದ್ದ ಡಿ.ದೇವರಾಜ ಅರಸು 110ನೇ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಾತಿ ಮತ್ತು ಧರ್ಮ ವಿಚಾರಗಳನ್ನು ಚರ್ಚೆ ಮಾಡುವಾಗ, ಕಾರ್ಯಕ್ರಮಗಳನ್ನು ರೂಪಿಸುವಾಗ ಹಾಗೂ ಕಾನೂನುಗಳನ್ನು ರಚನೆ ಮಾಡುವ ಸಂದರ್ಭದಲ್ಲಿ ಬಹಳ ದೊಡ್ಡ ಪ್ರಮಾಣದ ಜವಾಬ್ದಾರಿ ಸರ್ಕಾರದ ಮೇಲಿರುತ್ತದೆ. ಈಗ ಸಮೀಕ್ಷೆ ವಿಚಾರವಾಗಿ ಏಕಿಷ್ಟು ಗೊಂದಲಗಳಾಗುತ್ತಿವೆಯೊ ಗೊತ್ತಿಲ್ಲ. ಅವುಗಳನ್ನು ಬಗೆಹರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಸರ್ಕಾರದಲ್ಲಿರುವ ಸಚಿವರೆಲ್ಲರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಪ್ರಾಥಮಿಕ ಅಧಿಸೂಚನೆ ಹೊರಡಿಸಿ :

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಆಗಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. ಯಾವ್ಯಾವ ಸಮುದಾಯಗಳು ಹಿಂದುಳಿದಿವೆ, ಯಾವ ಕ್ಷೇತ್ರಗಳಲ್ಲಿ ಅವಕಾಶದಿಂದ ವಂಚಿತವಾಗಿವೆ. ಅದನ್ನು ಆ ಸಮುದಾಯಗಳು ಪಡೆದುಕೊಳ್ಳಬೇಕಾದರೆ ಅಂಕಿ ಅಂಶಗಳು ಇರಬೇಕಾಗುತ್ತದೆ ಎಂದು ನಿರ್ದೇಶನ ಕೂಡ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಜೆಟ್ ಗಳಲ್ಲಿ ಅನುದಾನಗಳಾಗಲಿ ಅಥವಾ ಕಾರ್ಯಕ್ರಮಗಳನ್ನು ಸಮುದಾಯಗಳಿಗೆ ನೀಡುವಾಗ ಅಂಕಿ ಅಂಶಗಳು ಇರಬೇಕಾಗುತ್ತದೆ. ಅದಕ್ಕಾಗಿ ಸಮೀಕ್ಷೆ ಆಗುವುದು ಅತ್ಯಗತ್ಯವಾಗಿದೆ ಎಂದರು.

ಗ್ರಾಪಂ ಅನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವಾಗ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾರ್ವಜನಿಕರ ಅಭಿಪ್ರಾಯವನ್ನೂ ಸಂಗ್ರಹಿಸುತ್ತೇವೆ. ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ನಗರ ಪಾಲಿಕೆಗಳನ್ನಾಗಿ ಮಾಡುವಾಗ ಪ್ರಾಥಮಿಕ ಅಧಿಸೂಚನೆ ಹೊರಡಿಸಿ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಯಿತು. ಆನಂತರ ಅಂತಿಮ ಅಧಿಸೂಚನೆ ಹೊರಡಿಸಲಾಯಿತು. ಇದನ್ನು ಸಮೀಕ್ಷೆ ವಿಚಾರದಲ್ಲೂ ಪಾಲಿಸಬೇಕಿದೆ ಎಂದು ತಿಳಿಸಿದರು.

ಜಾತಿ ಮತ್ತು ಧರ್ಮ ಅತ್ಯಂತ ಸೂಕ್ಷ್ಮವಾದ ವಿಚಾರ. ಈ ಬಗ್ಗೆ ಸಮೀಕ್ಷೆ ಮಾಡುವಾಗ ಮೊದಲು ಪ್ರಾಥಮಿಕ ಅಧಿಸೂಚನೆ ಹೊರಡಿಸಬೇಕು. ಆಗ ಗೊಂದಲಗಳು ಉಂಟಾಗುವುದಿಲ್ಲ. ಆಮೇಲೆ ಅಂತಿಮ ಅಧಿಸೂಚನೆ ಹೊರಡಿಸಬೇಕು. ಸರ್ಕಾರದ ಜೊತೆ ಸಮಾಲೋಚನೆ ಮಾಡಬೇಕು. ಸಂಬಂಧಿಸಿದ ಸಚಿವರು ಇಲಾಖೆಗಳಲ್ಲಿ ಸಭೆಗಳನ್ನು ನಡೆಸುವುದರ ಜೊತೆಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ಇಂತಹ ಅನಾವಶ್ಯಕ ಗೊಂದಲಗಳು ಸೃಷ್ಟಿಯಾಗುತ್ತವೆ ಎಂದು ಹೇಳಿದರು.

ರಾಜ್ಯದಲ್ಲಿ ಉತ್ತಮವಾದ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರು 16 ಬಜೆಟ್ ಮಂಡಿಸಿದ ದಾಖಲೆ ಬರೆದವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 8 ಬಾರಿ ವಿಧಾನಸೌಧ ಪ್ರವೇಶಿವದರು. ಅನುಭವಿ ರಾಜಕಾರಣಿಗಳು ಸಾಮಾಜಿಕ ನ್ಯಾಯ, ಆಡಳಿತ, ಅಭಿವೃದ್ಧಿ ಪರವಾಗಿ ನಿರ್ಧಾರ ಕೈಗೊಳ್ಳುವಾಗ ಎಚ್ಚರಿಕೆಯ ಹೆಜ್ಜೆಯಿಟ್ಟು, ಅನಾವಶ್ಯಕ ಗೊಂದಲಗಳನ್ನು ನಿವಾರಿಸಬೇಕಿದೆ ಎಂದು ವಿ.ಸುದರ್ಶನ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ರಾಜ್ಯ ಸರ್ಕಾರ ಹಿಂದುಳಿದ ಜಾತಿಗಳ ಸಮೀಕ್ಷೆ ವಿಚಾರವಾಗಿ ತಿಣುಕಾಡುತ್ತಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಸರ್ಕಾರ ಜಾತಿ ಗಣತಿ ನಡೆಸುವ ಧೈರ್ಯ ಮಾಡಬೇಕು. ಸರ್ಕಾರ ಸಣ್ಣಪುಟ್ಟ ಜಾತಿಗಳ ಪರವಾಗಿ ಇರಬೇಕು. ನಾವು ಮುಂದುವರಿದ ಜಾತಿಗಳ ವಿರೋಧಿಗಳಲ್ಲ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಒಟ್ಟಿಗೆ ಹೋಗುವ ಕೆಲಸ ಆಗಬೇಕಿದೆ ಎಂದು ಹೇಳಿದರು.

19ಕೆಆರ್ ಎಂಎನ್ 3.ಜೆಪಿಜಿ

ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಸುದರ್ಶನ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ