ಬಸವತತ್ವ ಪೀಠದ ಸಂಸ್ಥಾಪಕ ಬಸವಮಂದಿರದ ಶ್ರೀ ಮ.ನಿ.ಪ್ರ ಜಯಚಂದ್ರಶೇಖರ ಸ್ವಾಮೀಜಿ 28ನೇ ಸಂಸ್ಮರಣೆ ಶಿವಾನುಭವಗೋಷ್ಠಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ಶರಣರು ಜನಭಾಷೆಯನ್ನು ಧರ್ಮದ ಭಾಷೆಯನ್ನಾಗಿ, ದೇವರ ಭಾಷೆಯನ್ನಾಗಿ ಜನಸಾಮಾನ್ಯರಿಗೆ ಅರ್ಥವಾಗುವಂತೆ ಮಾಡಿದ್ದಾರೆ ಬಸವ ಮಂದಿರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ನುಡಿದರು.ನಗರದ ಬಸವತತ್ವ ಪೀಠದ ಸಂಸ್ಥಾಪಕ ಬಸವಮಂದಿರದ ಶ್ರೀ ಮ.ನಿ.ಪ್ರ ಜಯಚಂದ್ರಶೇಖರ ಸ್ವಾಮೀಜಿ 28ನೇ ಸಂಸ್ಮರಣೆಯ ಶಿವಾನುಭವಗೋಷ್ಠಿಯ ದಿವ್ಯ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.
ಇಂದು ಕೆಲವು ಆಚರಣೆಗಳಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಗೆ ಮೊರೆ ಹೋಗಿ ನಮ್ಮ ತತ್ವ, ತಾತ್ವಿಕತೆಯನ್ನು ಮರೆಯುತ್ತಿರುವುದು ವಿಷಾದನೀಯ. ನಮ್ಮ ಸಂಪ್ರದಾಯ ಮರೆಯಬಾರದು. ಈ ತಿಂಗಳು ಕರ್ನಾಟಕ ರಾಜ್ಯೋತ್ಸವ ಆಚರಣೆ ಆಗಿರುವುದರಿಂದ ಇಂತಹ ಕನ್ನಡ ಕಾರ್ಯಕ್ಕೆ ಒತ್ತು ನೀಡಬೇಕು. ಹೆಸರಾಯಿತು ಕನ್ನಡ, ಉಸಿರಾಯಿತು ಕನ್ನಡ ಎಂದು ಅಂದೆ ಕವಿಗಳು ಹೇಳಿದ್ದರು. ಆದರೆ, ಇಂದು ಕನ್ನಡವನ್ನು ಮರೆಯುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ವೀರಶೈವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಎಂ.ರಾಜಶೇಖರ್, ಉಪಾಧ್ಯಕ್ಷ ಗಿರೀಶ್, ಸಂಘದ ನಿರ್ದೇಶಕರಾದ ಓಂಕಾರಪ್ಪ, ಜಗದೀಶ್, ಯೋಗಾನಂದ, ಹೇಮಂತ್ ಕುಮಾರ್, ನಂದೀಶ್, ಬಿ.ಸಿ. ಭಾರತಿ, ತನುಜಾ ರಾಜೇಶ್, ಶಿವಕುಮಾರ್, ಓಂಕಾರಸ್ವಾಮಿ, ವೀರೇಶ್ ಉಪಸ್ಥಿತರಿದ್ದರು. ಜಯ ಚೆನ್ನೆಗೌಡ ಉಪನ್ಯಾಸ ನೀಡಿದರು.
ಚಿಕ್ಕಮಗಳೂರಿನ ಬಸವತತ್ವ ಪೀಠದ ಸಂಸ್ಥಾಪಕ ಬಸವಮಂದಿರದ ಶ್ರೀ ಮ.ನಿ.ಪ್ರ ಜಯ ಚಂದ್ರಶೇಖರ ಸ್ವಾಮೀಜಿ ಸಂಸ್ಮರಣೆಯ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ವೀರಶೈವ ಪತ್ತಿನ ಸಹಕಾರ ಸಂಘದ ಪದಾಧಿಕಾರಗಳನ್ನು ಗೌರವಿಸಲಾಯಿತು.