ಕನ್ನಡಪ್ರಭ ವಾರ್ತೆ ಶಿಕಾರಿಪುರ
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ವತಿಯಿಂದ ಅಂಗಸಂಸ್ಥೆಗಳ ವಾರ್ಷಿಕ ‘ಕುಮದ್ವತಿ ಸಾಂಸ್ಕೃತಿಕ ಉತ್ಸವ– 2024” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಶಿಕ್ಷಕರು ಶಾಲೆಗಳಲ್ಲಿ ಎಷ್ಟೇ ಓದಿಸಬಹುದು ಆದರೆ, ಮನೆಯಲ್ಲಿ ಪಾಲಕರು ಹೇಳಿಕೊಡುವ ವಿದ್ಯೆ ಬಹಳ ಪ್ರಮುಖವಾದದ್ದು. ಓದುವಾಗ ಮಕ್ಕಳಿಗೆ ಟಿವಿ, ಧಾರವಾಹಿಯ ಗೀಳನ್ನು ಕಡಿಮೆ ಮಾಡಿ ಓದಿನ ಕಡೆ ಹೆಚ್ಚು ಒಲವನ್ನು ಮೂಡಿಸಬೇಕಾಗಿದೆ ಎಂದು ಹೇಳಿದರು.ಪೋಷಕರು ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಓದಿನ ಸಂಧರ್ಭದಲ್ಲಿ ಕಷ್ಟದ ಅರಿವನ್ನು ಮೂಡಿಸಬೇಕು. ಮಗು ಶಾಲೆಯಲ್ಲಿ ಮಾತ್ರವಲ್ಲದೇ ಮನೆಯಲ್ಲಿ ಸಾಂಸ್ಕೃತಿಕವಾಗಿ ಬೆಳೆಯುವಂತೆ ಮಾಡುವುದು ಶಿಕ್ಷಕರ ಮತ್ತು ಪೋಷಕರ ಪ್ರಮುಖ ಕರ್ತವ್ಯವಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ ಕೆ.ಬಿ. ಮಾತನಾಡಿ, ಕೆಲವು ವರ್ಷಗಳ ಹಿಂದೆ ಮಕ್ಕಳ ಕೈಯಲ್ಲಿ ಗೊಂಬೆ ಕೊಡುವ ಪದ್ಧತಿ ಇತ್ತು, ಆದರೆ ಇಂದು ಮೊಬೈಲ್ ಕೊಡುವ ಸಂಪ್ರದಾಯ ಬೆಳೆಯುತ್ತಿದೆ. ಇದರಿಂದ ಮಕ್ಕಳಲ್ಲಿ ಹಠ, ಸಿಟ್ಟು, ಮಾನಸಿಕ ಉದ್ವೇಗಗಳು ಹೆಚ್ಚಾಗುತ್ತಿವೆ. ಇಂದು ಮಕ್ಕಳಲ್ಲಿ ಇನ್ನೋಬ್ಬರೊಂದಿಗೆ ಸ್ಪಂದಿಸುವ ನೈತಿಕ ಗುಣಗಳು ಕಡಿಮೆಯಾಗಿ ಕೇವಲ ವೈಯಕ್ತಿಕ ಹಿತಾಸಕ್ತಿಗಳ ಕಡೆಗೆ ಗಮನ ಹರಿಸುವಂತಾಗುತ್ತಿರುವುದು ದುರಂತ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಶಿವಕುಮಾರ್ ಬಹುಮಾನ ವಿತರಿಸಿದರು.
ಪ್ರಾಸ್ತಾವಿಕವಾಗಿ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಶಿವಕುಮಾರ್ ಜಿ.ಎಸ್. ಮಾತನಾಡಿದರು. ಸಂಸ್ಥೆಯ ಸಮನ್ವಯಾಧಿಕಾರಿ ಕುಬೇರಪ್ಪ.ಕೆ. ಸಂಸ್ಥೆಯ ಮುಖ್ಯಸ್ಥರು, ಪ್ರಾಚಾರ್ಯರು, ಬೋಧಕ, ಬೋಧಕೇತರ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.