ಸಮಾಜ ದ್ರೋಹಿ ಕೃತ್ಯಗಳಿಗೆ ಕಡಿವಾಣ ಹಾಕದಿರುವುದು ಶೋಚನೀಯ

KannadaprabhaNewsNetwork |  
Published : Aug 25, 2024, 02:05 AM IST
24ಕೆಪಿಡಿವಿಡಿ02: | Kannada Prabha

ಸಾರಾಂಶ

ಅರಕೇರಾ ಸಮೀಪದ ಆಲ್ಕೋಡ್ ಮೊರಾರ್ಜಿ ವಸತಿ ಶಾಲೆಯಲ್ಲಿ ಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆ ಕಾರ್ಯಕ್ರಮದಲ್ಲಿ ಮಹೇಶ ನಾಯಕ ಮಾತನಾಡಿದರು.

ಕನ್ನಡಪ್ರಭ ವಾರ್ತೆ ದೇವದುರ್ಗ

ದೇಶದಲ್ಲಿ ಸಂವಿಧಾನ ಜಾರಿಗೊಂಡು 75 ವರ್ಷ ಗತಿಸಿದರೂ ಸಹ ಸಮಾಜ ದ್ರೋಹಿ ಕೃತ್ಯಗಳಿಗೆ ಕಡಿವಾಣ ಹಾಕದೇ ಇರುವುದು ಶೋಚನೀಯ ಸಂಗತಿಯಾಗಿದೆ ಎಂದು ಆಲ್ಕೋಡ್ ಗ್ರಾಪಂ ಅಧ್ಯಕ್ಷ ಮಹೇಶ ನಾಯಕ ಬೇಸರ ವ್ಯಕ್ತಪಡಿಸಿದರು.

ಅರಕೇರಾ ಸಮೀಪದ ಆಲ್ಕೋಡ್ ಮೊರಾರ್ಜಿ ವಸತಿ ಶಾಲೆಯಲ್ಲಿ ಗಬ್ಬೂರಿನ ಸಮತಾ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆ ಶನಿವಾರ ಆಯೋಜಿಸಿದ್ದ ‘ಸಂವಿಧಾನದ ಕಡೆ ವಿದ್ಯಾರ್ಥಿಗಳ ನಡೆ’ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ವಿದ್ಯಾರ್ಥಿಗಳಿಗೆ ದೇಶ ಕಟ್ಟುವ ಶಕ್ತಿ ಇದೆ. ಭವಿಷ್ಯದ ಪ್ರಜೆಗಳಾಗುವ ನೀವು ವಿದ್ಯಾರ್ಥಿ ಹಂತದಲ್ಲಿಯೇ ಸಂವಿಧಾನದ ಮಹತ್ವ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರ ಜೀವನ ಚರಿತ್ರೆ ಅಧ್ಯಯನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ದೇವದುರ್ಗ ಗ್ರಂಥಾಲಯದ ಗ್ರಂಥಪಾಲಕ ಹನುಮಂತ ಅಂಚೆಸೂಗೂರ ಉಪನ್ಯಾಸ ನೀಡಿದರು. ಸಂಸ್ಥೆ ಕಾಯದರ್ಶಿ ಬಸವರಾಜ ಬ್ಯಾಗವಾಟ, ಸಂಚಾಲಕ ಗುರುನಾಥ ಇಂಗಳದಾಳ ಮಾತನಾಡಿದರು. ಗ್ರಾಪಂ ಸದಸ್ಯ ನಾಗರಾಜ ಭೋವಿ ಸಂವಿಧಾನ ಪೀಠಿಕೆ ಬೋಧಿಸಿದರು. ವಸತಿ ಶಾಲೆ ಪ್ರಾಚಾರ್ಯ ಭೀಮರಾಯ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಹಾಗೂ ಶಾಲಾ ಗ್ರಂಥಾಲಯಕ್ಕೆ ಸಂವಿಧಾನದ ಕುರಿತಾದ ಪ್ರಕಟಗೊಂಡ ಪುಸ್ತಕಗಳನ್ನು ವಿತರಿಸಲಾಯಿತು.

ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ಶರಣಬಸವನಾಯಕ, ಮುಖಂಡ ಎಂ.ಕುಪ್ಪಯ್ಯ ಭೋವಿ, ಶಿಕ್ಷಕರಾದ ರುದ್ರಗೌಡ, ವೆಂಕಟೇಶ ದೊರೆ, ರಮೇಶ, ದೀಪಕ, ಮಲ್ಲೇಶ ಪಿ, ಶಾಹೀನಾ, ಪದ್ಮಾ, ಅಮರೇಶ, ಅನ್ನಪೂರ್ಣ, ವಿದ್ಯಾರ್ಥಿ ಪ್ರತಿನಿದಿ ಕಾವೇರಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ