ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಶನಿವಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದಿಂದ ನಿಗದಿಪಡಿಸುವ ಮಾನವ ದಿನಗಳಿಗೆ ಅನುಗುಣವಾಗಿ ಅನುದಾನ ಬಿಡುಗಡೆಯಾಗುತ್ತದೆ. ೧೦೦ ಮಾನವ ದಿನಗಳನ್ನು ಸೃಜನೆ ಮಾಡಬೇಕೆಂದು ಕೂಲಿಕಾರರಿಗೆ ಕೆಲಸ ನೀಡಬಹುದು. ಕೆಲಸ ಕೊಟ್ಟ ಬಳಿಕ ಕೂಲಿ ಪಾವತಿಗೆ ಹಣ ಬಿಡುಗಡೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕಷ್ಟವಾಗುತ್ತದೆ. ಈಗಲೇ ೬ ತಿಂಗಳು ವಿಳಂಬವಾಗಿ ಕೇಂದ್ರದಿಂದ ಅನುದಾನ ಬಿಡುಗಡೆಯಾಗಿದೆ ಎಂದು ಕೂಲಿ ಕಾರ್ಮಿಕ ಮುಖಂಡರಿಗೆ ಮನವರಿಕೆ ಮಾಡಿಕೊಟ್ಟರು.
ಈ ಸಾಲಿನಲ್ಲಿ ೫೨ ಲಕ್ಷ ಮಾನವ ದಿನಗಳ ಸೃಷ್ಟಿಗೆ ಸಿಇಒ ಅವರು ಬೇಡಿಕೆ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅದರಲ್ಲಿ ಅರ್ಧದಷ್ಟನ್ನೂ ನೀಡದೆ ಕೇವಲ ೧೯ ಲಕ್ಷ ಮಾನವ ದಿನಗಳ ಸೃಷ್ಟಿಗೆ ಅನುಮತಿಸಿದೆ. ಅದಕ್ಕೆ ಅನುಗುಣವಾಗಿ ಸಿಇಒ ಅವರು ಜಿಲ್ಲೆಯಲ್ಲಿ ಮಾನವ ದಿನಗಳನ್ನು ಸೃಜಿಸಿದ್ದಾರೆ. ಇದರ ಜೊತೆಗೆ ೧೦೦ ದಿನಗಳ ಕೆಲಸ ನೀಡಬೇಕೆಂಬುದು ಮುಖಂಡರ ಬೇಡಿಕೆಯಾಗಿದೆ. ಇದಕ್ಕೆ ಬೇಡಿಕೆ ಕಡಿಮೆ ಇರುವ ಜಿಲ್ಲೆಗಳಿಂದ ಅನುದಾನವನ್ನು ತರಿಸಿಕೊಳ್ಳುವುದಕ್ಕೆ ಅವಕಾಶವಿದ್ದರೂ, ಅಲ್ಲಿ ಬೇಡಿಕೆ ಕಡಿಮೆ ಇಲ್ಲದಿದ್ದರೆ ಕೂಲಿಯನ್ನು ನೀಡುವುದಕ್ಕೆ ಹೇಗೆ ಸಾಧ್ಯ. ಕಾಯಿದೆಯನ್ನು ಜಾರಿಗೊಳಿಸುವ ಸಮಯದಲ್ಲಿ ವಾಸ್ತವವನ್ನೂ ನಾವು ಆಲೋಚಿಸಬೇಕಲ್ಲವೇ ಎಂದರು.ಹೆಚ್ಚು ಕೂಲಿಗೆ ಬೇಡಿಕೆ ಇರುವ ತಾಲೂಕುಗಳಿಗೆ ಕಡಿಮೆ ಕೂಲಿ ಬೇಡಿಕೆ ಇರುವ ತಾಲೂಕುಗಳಿಂದ ಮನರೇಗಾ ಅನುದಾನ ವರ್ಗಾವಣೆ ಮಾಡಬೇಕೆಂಬ ಮುಖಂಡರ ಬೇಡಿಕೆಗೆ ಸ್ಪಂದಿಸಿದ ಸಚಿವರು, ಕಡಿಮೆ ಕೂಲಿ ಬೇಡಿಕೆ ಇರುವ ತಾಲೂಕುಗಳಿಂದ ಶೇ.೨೦ರಷ್ಟು ಅನುದಾನವನ್ನು ಹೆಚ್ಚು ಬೇಡಿಕೆ ಇರುವ ತಾಲೂಕುಗಳಿಗೆ ವರ್ಗಾಯಿಸಿ ನೂರರಷ್ಟು ಪ್ರಗತಿ ಸಾಧನೆಗೆ ನೆರವಾಗುವಂತೆ ಸಿಇಒ ಅವರಿಗೆ ಸೂಚಿಸಿದರು.
ಗುತ್ತಿಗೆದಾರರಿಗೆ ಕೆಲಸ ನೀಡಿದರೆ ಕಠಿಣ ಕ್ರಮ:
ಕೃಷಿ ಕೂಲಿ ಕಾರ್ಮಿಕರು ಹಲವಾರು ಸಮಸ್ಯೆಗಳನ್ನು ಪರಿಹರಿಸಲು ಮನವಿಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ವರದಿ ನೀಡುವಂತೆ ಸಚಿವರು ತಿಳಿಸಿದರು.
ಪ್ರತ್ಯೇಕ ಸಭೆ ಭರವಸೆ:
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಮಂಡ್ಯ ನಗರ ವ್ಯಾಪ್ತಿಯಲ್ಲಿ ಸುಮಾರು ೨೦೦೦ಕ್ಕೂ ಹೆಚ್ಚು ಜನ ನಿವೇಶನ ರಹಿತ ಬಡವರಿದ್ದು ಅವರಿಗೆ ನಿವೇಶನ ಒದಗಿಸಲು ೩೫ ಎಕರೆ ಭೂಮಿ ಬೇಕಿದ್ದು, ಮಂಡ್ಯ ನಗರ ವ್ಯಾಪ್ತಿಯಲ್ಲಿ ಇರುವುದಿಲ್ಲ. ೧೦ ಕಿಮೀ ವ್ಯಾಪ್ತಿಗೆ ಹೋದರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುತ್ತದೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ನಿವೇಶನ ಒದಗಿಸಲು ಸಮಸ್ಯೆ ಪರಿಹರಿಸಿಕೊಡುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಕೇಂದ್ರದಿಂದ ೧೧ ಲಕ್ಷ ಮಾನವ ದಿನಗಳ ಇಳಿಕೆ: ಕೆ.ಆರ್.ನಂದಿನಿ
ಮನರೇಗಾ ಯೋಜನೆಯಡಿ ಕೇಂದ್ರ ಸರ್ಕಾರ ಪ್ರತಿ ವರ್ಷ ೩೦ ಲಕ್ಷ ಮಾನವ ದಿನಗಳಿಗೆ ಜಿಲ್ಲೆಗೆ ಅನುಮತಿ ನೀಡಲಾಗುತ್ತಿತ್ತು. ಈ ವರ್ಷ ೧೯ ಲಕ್ಷ ಮಾನವ ದಿನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಏಕಾಏಕಿ ೧೧ ಲಕ್ಷ ಮಾನವ ದಿನಗಳನ್ನು ಕಡಿತಗೊಳಿಸಿದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ಸಚಿವರ ಗಮನಕ್ಕೆ ತಂದರು.ಶನಿವಾರ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನರೇಗಾ ವಿಷಯಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಿದರು. ರಾಜ್ಯ ಸರ್ಕಾರ ಇಡೀ ರಾಜ್ಯಕ್ಕೆ ೧೨ ರಿಂದ ೧೩ ಕೋಟಿ ಮಾನವ ದಿನಗಳನ್ನು ಸೃಜನೆ ಮಾಡುವಂತೆ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿತ್ತು. ಆದರೆ, ಕೇಂದ್ರ ೯ ಕೋಟಿ ಮಾನವ ದಿನಗಳ ಸೃಜನೆಗಷ್ಟೇ ಅನುಮತಿ ನೀಡಿದೆ. ಜೊತೆಗೆ ಪ್ರತಿ ಆರ್ಥಿಕ ವರ್ಷದ ಕೊನೆಯಲ್ಲಿ ಶೇ.೫ರಷ್ಟು ಕಾಮಗಾರಿಗಳನ್ನು ಉಳಿಸಿಕೊಳ್ಳುವುದಕ್ಕೂ ಕಡಿವಾಣ ಹಾಕಿರುವುದಾಗಿ ತಿಳಿಸಿದರು.
ಹೀಗೆ ಪ್ರತಿ ವರ್ಷ ಶೇ.೫ರಷ್ಟು ಉಳಿಸುತ್ತಿದ್ದ ಕಾಮಗಾರಿಗಳು ಏಳು ವರ್ಷದಿಂದ ೨೧ ಸಾವಿರ ಕಾಮಗಾರಿಗಳು ಬಾಕಿ ಇವೆ. ೯೮ ಕೋಟಿ ರು. ಸಾಮಗ್ರಿ ವೆಚ್ಚದಲ್ಲಿ ೨೫ ಕೋಟಿ ರು. ನಾನು ಬಂದ ಮೇಲೆ ಬಿಡುಗಡೆಗೊಳಿಸಿರುವುದಾಗಿ ಹೇಳಿದರು.