ಸನ್ಯಾಸತ್ವ ತೆಗೆದುಕೊಳ್ಳಲು ತೀರ್ಮಾನಿಸಿದ್ದೇ ಸಂತೇಬಾಚಹಳ್ಳಿಯಲ್ಲಿ: ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ

KannadaprabhaNewsNetwork |  
Published : Oct 22, 2025, 01:03 AM IST
21ಕೆಎಂಎನ್ ಡಿ20 | Kannada Prabha

ಸಾರಾಂಶ

ಸಂತೇಬಾಚಹಳ್ಳಿಗೆ ಒಂದು ಕೆ.ಪಿ.ಎಸ್. ಶಾಲೆಗೆ ಅನುಮೋದನೆ ಸಿಕ್ಕಿದೆ. ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಹಣ ನೀಡಿ ಕೆಲಸ ಮಾಡುತ್ತಿದ್ದೇನೆ. ಹೋಬಳಿ ಎಲ್ಲಾ ಕೆರೆಗಳನ್ನು ಹೇಮಾವತಿ ನದಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ವಿಪಕ್ಷದಲ್ಲಿದ್ದರೂ ಕೂಡ ಅನುದಾನ ತಂದು ಉತ್ತಮ ಕೆಲಸ ಮಾಡಿದ್ದೇನೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸರ್ಕಾರಿ ಅಧಿಕಾರಿಯಾಗಿದ್ದ ನಾನು ಸನ್ಯಾಸತ್ವ ತೆಗೆದುಕೊಳ್ಳಲು ತೀರ್ಮಾನ ಮಾಡಿದ್ದು ಸಂತೇಬಾಚಹಳ್ಳಿ ಗ್ರಾಮದಲ್ಲಿ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ ಹೇಳಿದರು.

ತಾಲೂಕಿನ ಸಂತೇಬಾಚಹಳ್ಳಿಯಲ್ಲಿ ಬಿ.ಶಿವಪ್ಪರ ನೇತೃತ್ವದಲ್ಲಿ ಗೆಳೆಯರ ಬಳಗ ಯುವಕರ ಸಂಘದ ವತಿಯಿಂದ ಆಯೋಜಿಸಿದ್ದ 67ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, 2010ರಲ್ಲಿ ಕೆ.ಆರ್.ಪೇಟೆ ತಹಸೀಲ್ದಾರ್ ಆಗಿದ್ದ ವೇಳೆ ಇದೇ ಗ್ರಾಮದ ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ನನ್ನ ಗುರುಗಳಾದ ಕೆಂಗೇರಿ ವಿಶ್ವ ಒಕ್ಕಲಿಕ ಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಭಾಗವಹಿಸಿದ್ದರು ಎಂದರು.

ಶ್ರೀಗಳ ಜೊತೆ ನಾನು ಪಕ್ಕದಲ್ಲಿ ಕುಳಿತಿದ್ದೆ. ಆಗ ಅವರು ನನ್ನ ಮಠಕ್ಕೆ ಒಬ್ಬ ಗುರು ಬೇಕು ಎಂದು ಹೇಳಿದರು. ತಕ್ಷಣ ನಾನು ಬರುತ್ತೇನೆ ಎಂದು ಅವರಿಗೆ ಹೇಳಿದೆ. ಅದೇ ರೀತಿ ಕಾಕತಾಳೀಯವೇನೋ ಗೊತ್ತಿಲ್ಲ, ನನಗೆ ಇಂದು ಧೀಕ್ಷೆ ಪಡೆದು ಎಲ್ಲರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದು ಸ್ಮರಿಸಿದರು.

ಗ್ರಾಮದ ಹಿರಿಯರಾದ ಬಿ.ಶಿವಪ್ಪ ಅವರು ತಾವು ಯೌವನಾವಸ್ಥೆಗೆ ಕಾಲಿಟ್ಟ ದಿನದಿಂದ ಇಂದಿನವರೆಗೂ ಕಳೆದ 67 ವರ್ಷಗಳಿಂದ ಯುವಕರನ್ನು ಸಂಘಟಿಸಿ ನಿರಂತರವಾಗಿ ಗಣೇಶೋತ್ಸವ ಆಯೋಜನೆ ಮಾಡುತ್ತಿದ್ದಾರೆ. ಗಣೇಶೋತ್ಸವ ಕೇವಲ ಪ್ರಜಾ ಕಾರ್ಯಗಳಿಗೆ ಸೀಮಿತವಾಗದೆ ಗ್ರಾಮದ ಸಮಸ್ಯೆಗಳ ಪರಿಹಾರದ ವೇದಿಕೆಯಾಗಿದೆ ಎಂದು ತಿಳಿಸಿದರು.

ಈ ಭಾಗದ ಹಳ್ಳಿಗಳು ಮಳೆಯಾಶ್ರಿತ ಪ್ರದೇಶವಾಗಿದೆ. ಇಲ್ಲಿಗೆ ಸುಸ್ತಜ್ಜಿತವಾದ ರಸ್ತೆಗಳಿಲ್ಲ, ಮಂಡ್ಯದಿಂದ ಕೆ.ಆರ್.ಪೇಟೆಗೆ ಕೆಶಿಫ್ ರಸ್ತೆ ಮಾಡಿದರೆ ಅನುಕೂಲವಾಗುತ್ತದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಟಿ.ಮಂಜು ಮಾತನಾಡಿ, ಅತೀವೃಷ್ಟಿಯಿಂದ ಹಾನಿಗೀಡಾಗಿರುವ ಸಂತೇಬಾಚಹಳ್ಳಿ ಹೋಬಳಿಯ ಕೆರೆ- ಕಟ್ಟೆಗಳ ಪುನರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿಲ್ಲ. ಅನುದಾನ ಕೊರತೆಯಿಂದ ಅಭಿವೃದ್ಧಿಗೆ ತಡೆಯಾಗುತ್ತಿದೆ ಎಂದು ವಿಷಾದಿಸಿದರು.

ಕ್ಷೇತ್ರದ ಹತ್ತು ಹಲವು ಅಭಿವೃದ್ಧಿ ಕಾರ್ಯಗಳ ಬಗ್ಗೆ ನಾನು ಸದನದಲ್ಲೂ ಧ್ವನಿಯೆತ್ತಿದ್ದೇನೆ. ನಾನು ಹಣ ಮಾಡಲು ರಾಜಕೀಯಕ್ಕೆ ಬಂದಿಲ್ಲ. ಇರುವ ಅವಕಾಶವನ್ನು ಬಳಕೆಮಾಡಿಕೊಂಡು ಜನರ ಸೇವೆ ಮಾಡುತ್ತಿದ್ದೇನೆ. ಇಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ ಎಂದರು.

ಸಂತೇಬಾಚಹಳ್ಳಿಗೆ ಒಂದು ಕೆ.ಪಿ.ಎಸ್. ಶಾಲೆಗೆ ಅನುಮೋದನೆ ಸಿಕ್ಕಿದೆ. ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಹಣ ನೀಡಿ ಕೆಲಸ ಮಾಡುತ್ತಿದ್ದೇನೆ. ಹೋಬಳಿ ಎಲ್ಲಾ ಕೆರೆಗಳನ್ನು ಹೇಮಾವತಿ ನದಿ ನೀರಿನಿಂದ ತುಂಬಿಸುವ ಗೂಡೇಹೊಸಹಳ್ಳಿ ಏತ ನೀರಾವರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ವಿಪಕ್ಷದಲ್ಲಿದ್ದರೂ ಕೂಡ ಅನುದಾನ ತಂದು ಉತ್ತಮ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತೆಂಡೇಕೆರೆ ಬಾಳೆಹೊನ್ನೂರು ರಂಭಾಪುರಿ ಶಾಖಾ ಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ರಾಜ್ಯ ಆರ್.ಟಿ.ಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಮನ್ಮುಲ್ ನಿರ್ದೇಶಕ ಡಾಲು ರವಿ, ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ವಿಶ್ವನಾಥ್, ಗ್ರಾಪಂ ಅಧ್ಯಕ್ಷೆ ಅನುರಾಧ, ಕೃ.ಪ.ಸ. ಸಂಘದ ಅಧ್ಯಕ್ಷ ಬಿ.ಮೋಹನ್, ಮುಖಂಡರಾದ ಎ.ಎನ್.ಜಾನಕೀರಾಮು, ಎ.ವೈ.ವಿಜಯ್ ಕುಮಾರ್, ಬಿ.ಎಮ್.ಕಿರಣ್, ಬಿ.ಎನ್.ದಿನೇಶ್, ಪುನೀತ್, ಗಣೇಶ್, ಭಾರತೀಪುರ ಪುಟ್ಟಣ್ಣ, ಅಘಲಯ ಶ್ರೀಧರ್, ದಿವಿಕುಮಾರ್, ಆದಿಹಳ್ಳಿ ನಾಗೇಶ್, ಗೆಳೆಯರ ಬಳಗದ ಅಧ್ಯಕ್ಷ ಗೌಡ ಜಯಕುಮಾರ್, ಕಾರ್ಯದರ್ಶಿ ಕೃಷ್ಣ, ಲೋಕೇಶ್, ಉಮೇಶ್ ರಾಜು, ಸೋಮಶೇಖರ್, ಸುರೇಶ್, ಚೇತನ್, ವೆಂಕಟೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಿದ್ದು ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ
ಹುಟ್ಟು ಸಾವಿನ ಮಧ್ಯೆ ಸಾಧನೆ ಮಹತ್ವದ್ದು: ಡಾ.ಮುರುಗೇಶ ನಿರಾಣಿ