ಶಿರಸಿ: ಜಿಎಸ್ಟಿ ಪರಿಷ್ಕರಣೆಯು ಮತ್ತೊಮ್ಮೆ ಚರ್ಚೆಯಾಗಿ ಅನುಷ್ಠಾನಗೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ಸದಸ್ಯ ದೀಪಕ್ ಹೆಗಡೆ ದೊಡ್ಡೂರ ಹೇಳಿದರು.
ಅನೇಕ ವರ್ಷಗಳಿಂದ ಸರ್ಕಾರದ ಕಾರ್ಯಕ್ರಮವನ್ನಾಗಿ ಮೈಸೂರು ದಸರಾ ಆಚರಿಸಿಕೊಂಡು ಬರಲಾಗಿದೆ. ಈ ಬಾರಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಆಯ್ಕೆ ಮಾಡಿದ್ದಾರೆ. ಇದರಲ್ಲೂ ಜಾತಿ, ಧರ್ಮವನ್ನು ತರುವ ಕೆಲಸ ಬಿಜೆಪಿ ಮಾಡುತ್ತಿದೆ. 21ನೇ ಶತಮಾನದಲ್ಲಿ ಅಭಿವೃದ್ಧಿ ಬಯಸುತ್ತಾ ಸಂಕುಚಿತ ಭಾವನೆಯಿಂದ ಹೊರಬಂದು ರಾಷ್ಟ್ರದ ನಿರ್ಮಾಣ ಮಾಡಬೇಕು. ಸಮಾಜವನ್ನು ಬೇರೆ ದಿಕ್ಕಿಗೆ ಎಳೆಯುವ ಪ್ರಯತ್ನವನ್ನು ಬಿಜೆಪಿ ಬಿಡಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ಬಸವರಾಜ ದೊಡ್ಮನಿ, ಗಣೇಶ ದಾವಣಗೆರೆ, ಪ್ರದೀಪ ಶೆಟ್ಟಿ, ಜ್ಯೋತಿ ಪಾಟೀಲ್, ಗೀತಾ ಶೆಟ್ಟಿ, ಜಾಫಿ ಪೀಟರ್ ಇದ್ದರು.ಬಿಜೆಪಿಯವರು ನಮಗೆ ಹಿಂದುತ್ವ ಪಾಠ ಕಲಿಸುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಅಲ್ಲಿನ ಸತ್ಯಾಂಶ ಹೊರತರುವುದೇ ಎಸ್ಐಟಿ ಉದ್ದೇಶ. ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಬಿಜೆಪಿಯವರು ನಮಗೆ ಧಾರ್ಮಿಕ ಭಾವನೆಯ ಪಾಠವನ್ನು ಹೇಳಿಕೊಡುವ ಅವಶ್ಯಕತೆಯಿಲ್ಲ. ಆರೋಪ ಮಾಡುತ್ತಿರುವವರು ಯಾವ ಮೂಲದಿಂದ ಬಂದವರು ಎಂಬುದನ್ನು ನೋಡಬೇಕು ಎನ್ನುತ್ತಾರೆ ಕೆಪಿಸಿಸಿ ಸದಸ್ಯ ದೀಪಕ ಹೆಗಡೆ ದೊಡ್ಡೂರು.