- ತಮಲೇಹಳ್ಳಿ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ । ಎತ್ತಿನಗಾಡಿಯಲ್ಲಿ ಬಂದ ಸಂಸದೆ- - -
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಗಳೂರು, ಹರಪನಹಳ್ಳಿ ಕ್ಷೇತ್ರಗಳು ಅತ್ಯಂತ ಹಿಂದುಳಿದಿದ್ದು, ಅಭಿವೃದ್ಧಿಯಲ್ಲಿ ಕೈ ಹಿಡಿದು ನಡೆಸಿಕೊಂಡು ಹೋಗುವ ಭರವಸೆಯನ್ನು ಚುನಾವಣೆ ಸಂದರ್ಭ ನೀಡಿದ್ದೆ. ಅದೇ ಪ್ರಕಾರವಾಗಿ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ತಾಲೂಕಿನ ತಮಲೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ಕೆರೆಯಲ್ಲಿ ಗಂಗಾ ಪೂಜೆ-ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತರಳಬಾಳು ಶ್ರೀಗಳು 2018ರಲ್ಲಿ ತರಳಬಾಳು ಹುಣ್ಣಿಮೆ ವೇಳೆ 57 ಕೆರೆ ತುಂಬಿಸುವ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. ಆಗ ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಎಸ್.ಮಲ್ಲಿಕಾರ್ಜುನ್ ಇದ್ದರು. ₹660 ಕೋಟಿ ಯೋಜನೆಗೆ ರಾಜ್ಯ ಸರ್ಕಾರ ಘೋಷಿಸಿತ್ತು. ಈಗ ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಈಗಲೂ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಸಚಿವರಾಗಿ ಎಸ್ಎಸ್ಎಂ ಇದ್ದಾರೆ. ಜೊತೆಗೆ ಸಂಸದೆಯಾಗಿ ನಾನು ಇದ್ದೇನೆ. ಶಾಸಕ ಬಿ.ದೇವೇಂದ್ರಪ್ಪ ಸಹ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದರು.ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ, ಚುನಾವಣೆ ವೇಳೆ ಸಂಸದರು ಕಪ್ ನಮ್ದೆ ಅಂದು ಹೇಳಿದ್ದರು. ಈಗ ಕಪ್ ಗೆದ್ದು ಒಂದು ವರ್ಷವಾಗಿದೆ. ಇನ್ನು 4 ವರ್ಷಗಳು ಬಾಕಿ ಇವೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿವೆ. ತಮಲೇಹಳ್ಳಿ ಕೆರೆ ಇತಿಹಾಸದಲ್ಲೇ ಎಂದೂ ಕೋಡಿ ಬಿದ್ದಿರಲಿಲ್ಲ. ಈಗ ಪೂಜೆ ಮಾಡಿರುವುದು ನಮ್ಮೆಲ್ಲರ ಪುಣ್ಯವಾಗಿದೆ ಎಂದರು.
- - -
-3ಜೆಎಲ್ಆರ್.ಚಿತ್ರ1: ಕೆರೆಗೆ ಬಾಗಿನ ಕಾರ್ಯಕ್ರಮವನ್ನು ಸಂಸದೆ ಡಾ.ಪ್ರಭಾ ಉದ್ಘಾಟಿಸಿದರು. -3ಜೆಎಲ್.ಆರ್.ಚಿತ್ರ2: ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದರನ್ನು ಎತ್ತಿನಗಾಡಿಯಲ್ಲಿ ಕರೆತರಲಾಯಿತು.