ಗದಗ: ನರಗುಂದ ನೆಲದಲ್ಲಿ ಹುಟ್ಟಿ ಬೆಳೆದ ಮಹಾನ್ ದೇಶಭಕ್ತ, ಕರ್ನಾಟಕದ ಕೇಸರಿ ಜಗನ್ನಾಥರಾವ್ ಜೋಶಿ ಅವರು ಗೋವಾ ವಿಮೋಚನಾ ಚಳವಳಿಯ ಪ್ರೇರಣಾಶಕ್ತಿಯಾಗಿದ್ದರು ಎಂದು ಬಿಜೆಪಿ ಮುಖಂಡ ಎಂ.ಎಸ್. ಕರಿಗೌಡ್ರ ಹೇಳಿದರು.
ನಾಡಿನ ಒಳಿತಿಗಾಗಿ, ಸಮುದಾಯಗಳ ಸೌಹಾರ್ದತೆಗಾಗಿ ಸಂಘಟನೆ, ಪಕ್ಷ, ಸರ್ಕಾರಗಳ ಪ್ರತಿನಿಧಿಯಾಗಿ ಸಂಪೂರ್ಣ ಸಮರ್ಪಣಾ ಭಾವದಿಂದ ಜನಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದರು ಎಂದರು.
ಹಿರಿಯ ಮುಖಂಡ ಶ್ರೀಪತಿ ಉಡುಪಿ ಮಾತನಾಡಿ, ಕರ್ನಾಟಕದಲ್ಲಿ ಜನಸಂಘ ಹಾಗೂ ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಜಗನ್ನಾಥ ರಾವ್ ಅವರ ಸಂಘಟನಾ ಪ್ರವಾಸ, ಅಧ್ಯಯನ, ಪರಿಶ್ರಮ, ಶ್ರದ್ಧೆ, ಸಂಕಲ್ಪ, ಹೋರಾಟಗಳು ಮಹತ್ತರ ಪಾತ್ರ ವಹಿಸಿವೆ. ಯಾವುದೇ ದೇಶ ಸುಭದ್ರವಾಗಿ ಇರಬೇಕಾದರೆ ಅಲ್ಲಿಯ ಜನರು ವೈಚಾರಿಕ ಹಾಗೂ ಸೈದ್ಧಾಂತಿಕವಾಗಿ ರೂಪಗೊಂಡಾಗ ಮಾತ್ರ ಸಾಧ್ಯ ಎಂಬುದು ಅವರ ನಂಬಿಕೆಯಾಗಿತ್ತು. ಆ ಕಾರಣದಿಂದಲ್ಲೇ ಜಗನ್ನಾಥ ರಾವ್ ಅವರ ಎಲ್ಲ ಕೆಲಸ-ಕಾರ್ಯಗಳು ಆ ದೃಷ್ಟಿಕೋನ ಹೊಂದಿರುತ್ತಿದ್ದವು ಎಂದು ಹೇಳಿದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪುರ ಅಧ್ಯಕ್ಷತೆ ವಹಿಸಿದ್ದರು. ಬಸವಣ್ಣೆಪ್ಪ ಚಿಂಚಲಿ, ಜಗನ್ನಾಥಸಾ ಭಾಂಡಗೆ, ಎಂ.ಎಂ. ಹಿರೇಮಠ, ನಾಗರಾಜ ಕುಲಕರ್ಣಿ, ಕೆ.ಪಿ. ಕೋಟಿಗೌಡ್ರ, ಸುರೇಶ ಮರಳಪ್ಪನವರ, ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ, ಸುಧೀರ ಕಾಟೀಗರ, ಅಶೋಕ ಕುಡತಿನಿ, ಸಂತೋಷ ಅಕ್ಕಿ, ಸಿದ್ದು ಮೊರಬದ, ರಮೇಶ ಸಜ್ಜಗಾರ, ಶಂಕರ ಖಾಕಿ, ದೇವೇಂದ್ರಪ್ಪ ಗೋಟುರ, ಅಪ್ಪಣ್ಣ ಟೆಂಗಿನಕಾಯಿ, ಸ್ವಾತಿ ಅಕ್ಕಿ, ರೇಖಾ ಬಂಗಾರಶೆಟ್ರ, ಕವಿತಾ ಬಂಗಾರಿ, ದೇವೇಂದ್ರಪ್ಪ ಹೂಗಾರ, ಕುಮಾರ ಮಾರನಬಸರಿ, ಸಂತೋಷ ಕಲ್ಯಾಣಿ, ರಾಚಯ್ಯ ಹೊಸಮಠ, ವಿನೋದ ಹಂಸನೂರ ಮುಂತಾದ ಗಣ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.