ಕೃಷಿ ಕ್ಷೇತ್ರದಲ್ಲಿ ಜಗಜೀವನ್ ರಾಮ್‌ ಪಾತ್ರ ಅಪಾರ: ಲೋಕೇಶ್

KannadaprabhaNewsNetwork |  
Published : Jul 07, 2026, 01:45 AM IST
6ಕೆಎಂಎನ್ ಡಿ13 | Kannada Prabha

ಸಾರಾಂಶ

ಜಗಜೀವನ್ ರಾಮ್‌ ಅವರ ಅವಿರತ ಶ್ರಮದಿಂದಾಗಿ ಇಂದು ಭಾರತವು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಅವರ ಆಡಳಿತ ವೈಖರಿ ಮತ್ತು ಆದರ್ಶ ಯುವಪೀಳಿಗೆಗೆ ಮಾದರಿ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಹಸಿರು ಕ್ರಾಂತಿ ಮೂಲಕ ದೇಶವನ್ನು ಆಹಾರ ಸ್ವಾವಲಂಬನೆಯತ್ತ ಕೊಂಡೊಯ್ಯುವಲ್ಲಿ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್‌ ಅವರ ಪಾತ್ರ ಅಪಾರ ಎಂದು ತಹಸೀಲ್ದಾರ್ ಎಸ್.ವಿ.ಲೋಕೇಶ್ ಬಣ್ಣಿಸಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ಸೋಮವಾರ ತಾಲೂಕು ಆಡಳಿತದಿಂದ ಆಯೋಜಿಸಿದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆಯಲ್ಲಿ ಮಾತನಾಡಿ, ಜಗಜೀವನ್ ರಾಮ್‌ ಅವರ ಅವಿರತ ಶ್ರಮದಿಂದಾಗಿ ಇಂದು ಭಾರತವು ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಅವರ ಆಡಳಿತ ವೈಖರಿ ಮತ್ತು ಆದರ್ಶ ಯುವಪೀಳಿಗೆಗೆ ಮಾದರಿಯಾಗಿದೆ ಎಂದರು.

ತೀವ್ರ ಬರಗಾಲ ಮತ್ತು ಆಹಾರದ ಕೊರತೆಯಲ್ಲಿದ್ದ ಭಾರತದಲ್ಲಿ, ಕೃಷಿ ಉತ್ಪಾದನೆ ಹೆಚ್ಚಿಸಿ ಬಿತ್ತನೆ ಬೀಜಗಳು, ರಸಗೊಬ್ಬರಗಳು ಮತ್ತು ಕೀಟನಾಶಕಗಳ ಬಳಕೆಗೆ ಆದ್ಯತೆ ನೀಡಿ ನೀರಾವರಿ ಸೌಲಭ್ಯಗಳ ವಿಸ್ತರಣೆ ಹಾಗೂ ಸುಧಾರಿತ ಕೃಷಿ ಉಪಕರಣಗಳನ್ನು ರೈತರಿಗೆ ತಲುಪಿಸುವ ಮೂಲಕ ಕೃಷಿ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಪಡಿಸಿ ರೈತರ ಉತ್ಪಾದಕತೆ ಹೆಚ್ಚಿಸುವ ಜೊತೆಗೆ ಅವರ ಆದಾಯವನ್ನು ಹೆಚ್ಚಿಸಲು ನೆರವಾದರು ಎಂದು ಬಣ್ಣಿಸಿದರು.

ಕೃಷಿ ಮಂತ್ರಿಯಾಗಿದ್ದಾಗ ದೇಶದಲ್ಲಿ ದೊಡ್ಡ ಬದಲಾವಣೆ ತಂದರು. ಅಮೆರಿಕದಿಂದ ಭಾರತ ದೇಶಕ್ಕೆ ಆಹಾರ ಪದಾರ್ಥಗಳನ್ನು ತರಿಸಿಕೊಳ್ಳುತ್ತಿದ್ದರು. ಕೃಷಿ ಮಂತ್ರಿಯಾಗಿದ್ದಾಗ ಇಡೀ ದೇಶಕ್ಕೆ ಆಹಾರ ಪದಾರ್ಥಗಳ ಕ್ರಾಂತಿ ಮಾಡಿ ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಈ ವೇಳೆ ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್, ಸಿಪಿಐ ಎಸ್.ಜಯಾನಂದ್, ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಇ.ನಂಜಾಮಣಿ, ಪಶು ಆಡಳಿತ ವೈದ್ಯಾಧಿಕಾರಿ ಮಂಜುನಾಥ್, ಸಹಕಾರ ಇಲಾಖೆಯ ರಾಮಕೃಷ್ಣ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

4 ಕೋಟಿಗೂ ಅಧಿಕ ವಿಮೆ ಹಣ ಅರ್ಹ ರೈತರಿಗೆ ವಿತರಣೆ: ಸಿ.ಶಿವಕುಮಾರ್
ರಾಜ್ಯ ಮಟ್ಟದ ಶೃಂಗ ಮಹಾಮಂಡಳ ಉಪಾಧ್ಯಕ್ಷರಾಗಿ ಆರ್.ಎ.ನಾಗಣ್ಣ ಆಯ್ಕೆ