ಧರ್ಮಸ್ಥಳ ‘ಮಂಜೂಷಾ’ ಸೇರಿದ ಜೈಬಾಲಾಜಿ ಹಾಯಿದೋಣಿ

KannadaprabhaNewsNetwork |  
Published : Jun 12, 2024, 12:33 AM IST
ಧರ್ಮಸ್ಥಳ ಮಂಜೂಷಾ ಸೇರಿದ ಜೈಬಾಲಾಜಿ ಹಾಯಿದೋಣಿ | Kannada Prabha

ಸಾರಾಂಶ

ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು ‘ಮಂಜೂಷಾ’ಕ್ಕೆ ಸಮರ್ಪಿಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ ೧೪ ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ ‘ಜೈಬಾಲಾಜಿ’ ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದ ‘ಮಂಜುಷಾ’ ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು.

ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು ‘ಮಂಜೂಷಾ’ಕ್ಕೆ ಸಮರ್ಪಿಸಿದರು.ಈ ಸಂದರ್ಭ ಕೊಂಕಣಿ ಖಾರ್ವಿಸಮಾಜದ ಸುಭಾಷ್ ಖಾರ್ವಿ, ಸುನಿಲ್ ಖಾರ್ವಿ ಮತ್ತು ಸಮಾಜ ಬಾಂಧವರು ಇದ್ದರು.

ದೋಣಿಯ ಮಾಹಿತಿ: ೫೧ ಅಡಿ ಉದ್ದ ಹಾಗೂ ೧೦ ೧/೨ ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ ೨೨ ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. ೨೦ ವರ್ಷಗಳ ಹಿಂದೆ ಇಂತಹ ಹತ್ತು ದೊಣಿಗಳಿದ್ದವು. ಚಿಪ್ಪು, ಮರ, ಹಂಚು ಸಾಗಾಟಕ್ಕೂ ಅವುಗಳು ಬಳಕೆಯಾಗುತ್ತಿದ್ದವು.

ಚಿಪ್ಪು ಸದ್ಯ ನಶಿಸುತ್ತಾ ಬಂದಿರುವುದರಿಂದ ಮುಂದಿನ ಪೀಳಿಗೆಗೆ ಕೊಂಕಣಿ ಖಾರ್ವಿಸಮಾಜದ ಜನಜೀವನ ಹಾಗೂ ಹಾಯಿದೋಣಿ ಬಗ್ಗೆ ಪರಿಚಯ ಮಾಡಿಕೊಳ್ಳಲು ಹಾಯಿ ದೋಣಿ ಮಾರ್ಗದರ್ಶಿಯಾಗಲಿ ಎಂಬ ಉದ್ದೇಶದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅನುಮತಿ ಮತ್ತು ಆಶೀರ್ವಾದಗಳೊಂದಿಗೆ ಇದನ್ನು ‘ಮಂಜೂಷಾ’ಕ್ಕೆ ಸಮರ್ಪಿಸಲಾಗಿದೆ ಎಂದು ಮಾಲಕ ವೆಂಕಟೇಶ್ ಖಾರ್ವಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!