ಜೈ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ: ಮಿಥುನ್ ರೈ

KannadaprabhaNewsNetwork |  
Published : May 15, 2026, 02:45 AM IST
ಜೈ ಚಿತ್ರದ ಶತ ದಿನ ಸಂಭ್ರಮ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆಯಾಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಹೇಳಿದರು.

ಮಂಗಳೂರು: ತುಳು ನಮ್ಮ ಪ್ರಾದೇಶಿಕ ಭಾಷೆಯಾದರೂ ಅದರ ಅಭಿಮಾನದಿಂದ ತುಳು ಸಿನಿಮಾಗಳನ್ನು ನಿರ್ಮಿಸುವ ನಿರ್ಮಾಪಕರು ಕಲಾವಿದರಿಗೆ ಆಸರೆಯಾಗಿದ್ದಾರೆ. ಜೈ ತುಳು ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಚೈತನ್ಯ ನೀಡಿದೆ. ವಿಶ್ವದ ತುಳುವರು ಈ ಸಿನಿಮಾವನ್ನು ಗೆಲ್ಲಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ಎಂ. ರೈ ಹೇಳಿದರು. ಅವರು ಬಜಪೆ ಬಳಿಯ ಮರವೂರಿನ ಶೂಲಿನ್ ಪ್ಯಾಲೇಸ್‌ನಲ್ಲಿ ‘ಜೈ’ ತುಳು ಸಿನಿಮಾದ ನೂರನೇ ದಿನದ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ನಟ, ನಿರ್ದೇಶಕ ರೂಪೇಶ್ ಶೆಟ್ಟಿ ಮಾತನಾಡಿ, ‘ಜೈ’ ಸಹಿತ ತನ್ನ ಎಲ್ಲಾ ಚಿತ್ರಗಳು ಜನರ ಆಶೀರ್ವಾದದಿಂದ ಯಶಸ್ವಿಯಾಗಿದೆ. ಸಣ್ಣ ಆಲ್ಬಂ ಸಾಂಗ್‌ನಿಂದ ನಿರೂಪಕನಾಗಿ ಬಿಗ್‌ಬಾಸ್ ವಿಜೇತನಾಗಿರುವ ತನಗೆ ವಿಶ್ವ ಮಟ್ಟದಲ್ಲಿನ ತುಳುವರು ಅಭಿಮಾನದಿಂದ ಪ್ರೋತ್ಸಾಹ ನೀಡಿದ್ದಾರೆ ಎಂದರು.

ಸಿನಿಮಾ ಕ್ಷೇತ್ರದ ವಿವಿಧ ಸಾಧಕರನ್ನು ಹಾಗೂ ಜೈ ಸಿನಿಮಾಕ್ಕೆ ಸಹಕರಿಸಿದ ಗಣ್ಯರನ್ನು, ಭಾರತ್ ಸಿನಿಮಾದ ಮಾಲಕ ಬಾಲಕೃಷ್ಣ ಶೆಟ್ಟಿ, ಹಾಗೂ ಸುರತ್ಕಲ್ ಸಿನಿ ಗ್ಯಾಲಾಕ್ಸಿನ ಮುಖ್ಯಸ್ಥ ದೀಪಕ್, ಸಿನಿಮಾ ತಂತ್ರಜ್ಞರನ್ನು, ಕಲಾವಿದರನ್ನು ಗೌರವಿಸಲಾಯಿತು.ಉದ್ಯಮಿ ಡಾ.ಆರ್.ಕೆ.ಶೆಟ್ಟಿ, ಚಿತ್ರ ನಿರ್ಮಾಪಕರಾದ ಮುಗ್ರೋಡಿ ಸುಧಾಕರ ಶೆಟ್ಟಿ, ಅನಿಲ್ ಶೆಟ್ಟಿ, ಮಂಜುನಾಥ ಅತ್ತಾವರ್, ಸಮಾಜ ಸೇವಕ ಭಾಸ್ಕರಚಂದ್ರ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ರಜತ್ ಹೆಗ್ಡೆ, ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಡಾ.ಶಿವಚರಣ್ ಶೆಟ್ಟಿ, ನವೀನ್ ಶೆಟ್ಟಿ ಎಡ್ಮೆಮಾರ್, ಲೀಲಾಕ್ಷ ಕರ್ಕೇರ, ಲಕ್ಷ್ಮಣ್ ಕುಂದರ್, ಬಾಳ ಜಗನ್ನಾಥ ಶೆಟ್ಟಿ, ಶ್ಯಾಮ್, ನಾರಾಯಣ ಪೂಜಾರಿ, ಚಿತ್ರ ನಟಿ ಅದ್ವಿತಿ ಶೆಟ್ಟಿ, ನಟ ರಾಜ್ ದೀಪಕ್ ಶೆಟ್ಟಿ, ನವೀನ್ ಶೆಟ್ಟಿ ಆರ್ಯನ್ಸ್ ಮತ್ತಿತರರು ಇದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಬಕವಿಯಲ್ಲಿದೆ ೮೪ ಸದಸ್ಯರನ್ನೊಳಗೊಂಡ ಅವಿಭಕ್ತ ಕುಟುಂಬ!
ಶಿವಂ ಅಸೋಸಿಯೇಟ್ ಕಚೇರಿ ಮೇಲೆ ದಾಳಿ