ಜಗತ್ತಿಗೆ ಅಹಿಂಸೆ, ಶಾಂತಿ ಸಾರಿದ ಜೈನ ಧರ್ಮ

KannadaprabhaNewsNetwork |  
Published : Apr 11, 2025, 12:30 AM IST
೧೦ಕೆಎಲ್‌ಆರ್-೧೩ಕೋಲಾರದ ಟಿ.ಚನ್ನಯ ರಂಗಮಂದಿರದಲ್ಲಿ ಮಹಾವೀರ ಜಯಂತಿ ಕಾರ್ಯಕ್ರಮ ಅಪರ ಜಿಲ್ಲಾಧಿಕಾರಿ ಮಂಗಳಾ ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಜೈನ ಧರ್ಮದ ವಿಚಾರಗಳು ಸಮಾಜಕ್ಕೆ ಮುಟ್ಟುವಂತಾಗಬೇಕು. ಜೈನ ಧರ್ಮದಲ್ಲಿ ಮಹಾವೀರ, ಭರತ ಸೇರಿದಂತೆ ನೂರಾರು ಮಹಾಪುರುಷರು ಹುಟ್ಟಿ ಸಮಾಜಕ್ಕೆ ಉತ್ತಮ ವಿಚಾರಗಳನ್ನು ಸಾರಿದ್ದಾರೆ. ಅವು ಕೃತಿ, ಗ್ರಂಥ, ಓಲೆಗರಿಗಳಿಗೆ ಸೀಮಿತವಾಗದೆ ಪುಸ್ತಕ ರೂಪದಲ್ಲಿ ಬಂದು ಮಕ್ಕಳು ಓದುವಂತಾಗಬೇಕು.

ಕನ್ನಡಪ್ರಭ ವಾರ್ತೆ ಕೋಲಾರಜಗತ್ತಿಗೆ ಶಾಂತಿ, ಅಹಿಂಸೆಯ ಸಂದೇಶ ಸಾರಿದ ಮಹಾಪುರುಷ ಭಗವಾನ್ ಮಹಾವೀರರ ಆದರ್ಶಗಳು ಸಮಾಜ ಎಲ್ಲ ವರ್ಗಗಳಿಗೂ ಅನುಕರಣೀಯ ಎಂದು ಅಪರ ಜಿಲ್ಲಾಧಿಕಾರಿ ಮಂಗಳಾ ತಿಳಿಸಿದರು.ನಗರದ ಟಿ.ಚನ್ನಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಜೈನರ ಸಂಘದ ವತಿಯಿಂದ ನಡೆದ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈನ ಸಿದ್ದಾಂತದಲ್ಲಿ ಋಷಿ ಮುನಿಗಳಿಗೆ ಹೆಚ್ಚಿನ ಗೌರವವಿದೆ. ಸ್ತ್ರೀಯರು ಪುರುಷರಿಗೆ ಸಮಾನರಾಗಿದ್ದಾರೆ ಎಂದು ನುಡಿದರು.ಅಹಿಂಸೆ ಪ್ರತಿಪಾದಿಸುವ ಧರ್ಮ

ಜೈನ ಧರ್ಮ ಎಂದೂ ಹಿಂಸೆಗೆ ಪ್ರೋತ್ಸಾಹ ನೀಡಿಲ್ಲ. ಹಿಂಸೆಯ ಸಂಕಲ್ಪ ಮಾಡುವುದೇ ಪಾಪ ಎಂಬ ಸಂದೇಶ ಮಾಡಿರುವ ಈ ಧರ್ಮ ಸಾಮಾಜಿಕ ಬದಲಾವಣೆಯಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ತಿಳಿಸಿದರು.ನಗರಠಾಣೆ ವೃತ್ತ ನಿರೀಕ್ಷಕ ಸದಾನಂದ ಮಾತನಾಡಿ, ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಜೈನ ಧರ್ಮದ ವಿಚಾರಗಳು ಸಮಾಜಕ್ಕೆ ಮುಟ್ಟುವಂತಾಗಬೇಕು. ಜೈನ ಧರ್ಮದಲ್ಲಿ ಮಹಾವೀರ, ಭರತ ಸೇರಿದಂತೆ ನೂರಾರು ಮಹಾಪುರುಷರು ಹುಟ್ಟಿ ಸಮಾಜಕ್ಕೆ ಉತ್ತಮ ವಿಚಾರಗಳನ್ನು ಸಾರಿದ್ದಾರೆ. ಅವು ಕೃತಿ, ಗ್ರಂಥ, ಓಲೆಗರಿಗಳಿಗೆ ಸೀಮಿತವಾಗದೆ ಪುಸ್ತಕ ರೂಪದಲ್ಲಿ ಬಂದು ಮಕ್ಕಳು ಓದುವಂತಾಗಬೇಕು ಎಂದರು.ಮಹಾವೀರರ ಪ್ರತಿಮೆ ಮೆರವಣಿಗೆ

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಮಹಾವೀರ ಜಯಂತಿ ಪ್ರಯುಕ್ತ ಜೈನ ಸಮುದಾಯದವರು ನಗರದ ನಾನಾ ಬೀದಿಗಳಲ್ಲಿ ಮಹಾವೀರ ಪ್ರತಿಮೆಯನ್ನು ಹೂವಿನ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಮಹಾವೀರ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.

ಭಗವಾನ್ ಮಹಾವೀರರು ಬೋಧಿಸಿದ ಪಂಚಾಮೃತ ತತ್ವಗಳಾದ ಸತ್ಯ, ಅಹಿಂಸೆ, ಅಪರಿಗೃಹ, ಅಶೌರ್ಯ, ಬ್ರಹ್ಮಚಾರ್ಯ ತತ್ವಗಳನ್ನು ಸಾರಲಾಯಿತು. ನೀನು ಬದುಕು ಬದುಕಲು ಬೀಡು. ಲೋಕಕಲ್ಯಾಣಕ್ಕೋಸ್ಕರ ಕಾಲ ಕಾಲಕ್ಕೆ ಮಳೆಯಾಗಿ ಬೆಳೆಯಾಗಲಿ ದುಷ್ಟಶಕ್ತಿಗಳೆಲ್ಲ ಹೋಗಲಿ ಎನ್ನುವ ತತ್ವಗಳನ್ನು ಸಾರಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌