ತುಂಡು ಗುತ್ತಿಗೆ ಪಡೆದವರಿಂದ ಕೃತ್ಯ । ಕಡಿಮೆ ಗುಣಮಟ್ಟದ ಪರಿಕರಗಳ ಬಳಕೆ । ‘ಮನೆ ಮನೆಗೆ ಗಂಗೆ’ ಯೋಜನೆ ಕಾರ್ಯವೂ ಹಿಂದೆ
ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾಡುವ ‘ಮನೆ ಮನೆಗೆ ಗಂಗೆ’ ಯೋಜನೆ ಕಾಮಗಾರಿ ಹಲವು ಗ್ರಾಮಗಳಲ್ಲಿ ಕಳಪೆಯಿಂದ ಕೂಡಿರುವುದು ಗ್ರಾಮಸ್ಥರ ಆಕ್ಷೇಪಕ್ಕೆ ಕಾರಣವಾಗುತ್ತಿದೆ.
ಕಳೆದ 2023ರ ಜ.21 ರಂದು ಪಟ್ಟಣದ ಕ್ರೀಡಾಂಗಣದಲ್ಲಿ ಬಹುಗ್ರಾಮ ಕುಡಿಯುವ ನೀರು ಹಾಗೂ ಜಲಜೀವನ್ ಮಿಷನ್ ಯೋಜನೆಗೆ ಶಂಕುಸ್ಥಾಪನೆಯನ್ನು ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಸಂಸದ ಪ್ರಜ್ವಲ್ ರೇವಣ್ಣ, ಕ್ಷೇತ್ರದ ಶಾಸಕರಾಗಿದ್ದ ಎ.ಟಿ.ರಾಮಸ್ವಾಮಿ ನೆರವೇರಿಸಿದ್ದರು. ಆದರೆ ಚುನಾವಣೆ ನಂತರ ಹಾಲಿ ಶಾಸಕ ಎ.ಮಂಜು ಅವಧಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದು, ಶೇ.50 ರಷ್ಟು ಕಾಮಗಾರಿ ಮುಗಿದ್ದಿದೆ. ಉಳಿದ ಕೆಲಸ ಪ್ರಗತಿಯಲ್ಲಿದೆ.ತಾಲೂಕಿನ ರಾಮನಾಥಪುರ ಹೋಬಳಿಯ ಆನಂದೂರು ಬಳಿ ಕಾವೇರಿ ನದಿಯಿಂದ ತಾಲೂಕು ಮತ್ತು ಹಳ್ಳಿಮೈಸೂರು ಹೋಬಳಿಯ ಒಟ್ಟು 84 ಗ್ರಾಮಗಳಿಗೆ ಶಾಶ್ವತ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಗೆ ಅಂದಾಜು ಮೊತ್ತ 94.24 ಕೋಟಿ ರು. ತಾಲೂಕಿನ ಕೊಣನೂರು ಹೋಬಳಿಯ ಬಾನುಗುಂದಿ ಗ್ರಾಮದ ಬಳಿ ಕಾವೇರಿ ನದಿಯಿಂದ ತಾಲೂಕಿನ ಒಟ್ಟು 260 ಗ್ರಾಮಗಳಿಗೆ ನೀರು ಸರಬರಾಜು ಯೋಜನೆಗೆ ಒಟ್ಟು ಅಂದಾಜು ಮೊತ್ತ 217 ಕೋಟಿ ರು. ಹಾಗೂ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬೋಳಕ್ಯಾತನಹಳ್ಳಿ ಗ್ರಾಮದ ಬಳಿ ಹೇಮಾವತಿ ನದಿಯಿಂದ ತಾಲೂಕಿನ ಗ್ರಾಮಗಳು ಸೇರಿದಂತೆ ಹಳ್ಳಿಮೈಸೂರು ಹೋಬಳಿಯ ಒಟ್ಟು 138 ಗ್ರಾಮಗಳಿಗೆ ಶುದ್ಧಕುಡಿಯುವ ನೀರು ಸರಬರಾಜು ಯೋಜನೆಯ ಮೊತ್ತ 94.71ಕೋಟಿ ರು. ಆಗಿದೆ.
ಕಾಮಗಾರಿ ಕಳಪೆ:
ಕಾಪರ್ ವೈರ್ ಕಳವು:
ನೀರು ಸರಬರಾಜು ಮಾಡುವ ವೇಳೆ ಪೈಪ್ನಲ್ಲಿ ಸಮಸ್ಯೆ ತಿಳಿಯುವ ಸಲುವಾಗಿ ಇಡೀ ಸರಬರಾಜು ಆಗಿರುವ 300 ಅಡಿ ರೋಲ್ನಲ್ಲಿ ಕಾಪರ್ ಅಳವಡಿಸಿರುವುದು ಕಂಡು ಬಂದಿದೆ. ಇದು ಸ್ಸ್ಯೆ ತಿಳಿಯುವ ಡಿಟೆಕ್ಟರ್ ಆಗಿದೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಲಾಗುವುದು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಸರಬರಾಜಿಗೆ ಕೋಟ್ಯಂತರ ರು. ವೆಚ್ಚದ ಯೋಜನೆಯನ್ನು ಜಾರಿಗೆ ತಂದಿವೆ. ಆದರೆ ಅಧಿಕಾರಿಗಳ ಮಟ್ಟದಲ್ಲಿ ಗುಣಮಟ್ಟದಿಂದ ಕೆಲಸ ನಡೆಯುತ್ತಿಲ್ಲ.