- ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಮಿತಿ, ಜೆಸಿಟಿಯು ನೇತೃತ್ವ ।
- ರೈತ, ಕಾರ್ಮಿಕ, ಜನವಿರೋಧಿ ನೀತಿ ಖಂಡಿಸಿ ಜಯದೇವ ವೃತ್ತದಲ್ಲಿ ಘೋಷಣೆ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಶ್ರೀ ಜಯದೇವ ವೃತ್ತದಲ್ಲಿ ರಾಜ್ಯ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿ, ಧೋರಣೆ, ಬೆಲೆ ಏರಿಕೆ ಖಂಡಿಸಿ ಘೋಷಣೆಗಳನ್ನು ಕೂಗಲಾಯಿತು.
ವಿದ್ಯುತ್ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನವಿರೋಧಿ ಕಾರ್ಪೊರೇಟ್ ಪರ ಎಲ್ಲ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿರುವ ಹಿನ್ನೆಲೆ ಎಲ್ಲ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖ ಕಾರ್ಯಕರ್ತರು ಇಂದಿನ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಕಾಂಗ್ರೆಸ್ ಸರ್ಕಾರವೂ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿ 8ರಿಂದ 12 ಗಂಟೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈಗಿನ ಸರ್ಕಾರ ಇಂತಹ ಕಾರ್ಮಿಕ ವಿರೋಧಿ ಕ್ರಮ ರದ್ದುಪಡಿಸುವ ಬದಲು ಏರಿಕೆಗೆ ನೋಟಿಫಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ, ದಲಿತ, ಹಿಂದುಳಿದ ವರ್ಗಗಳ ಬಗರಹುಕುಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ಮೀನ ಮೇಷ ಎಣಿಸುತ್ತಿದೆ ಎಂದು ಆರೋಪಿಸಿದ ಅವರು, ಜನಾಗ್ರಹ ನಿರ್ಣಯಗಳನ್ನು ತಕ್ಷಣವೇ ಈಡೇರಿಸುವಂತೆ ಒತ್ತಾಯಿಸಿದರು.
ಬಂಡವಾಳ ಹೂಡಿಕೆ ಸಮಾವೇಶ ಉದ್ದೇಶ ಕೇವಲ ಕೃಷಿ ಭೂಮಿ ಕಬಳಿಕೆಯಾಗಿದೆ. ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿ ಸಮರ್ಥವಾಗಿ ಬಳಸದೇ, ಮತ್ತೆ ಹೊಸದಾಗಿ ರಿಯಲ್ ಎಸ್ಟೇಟ್ ಹಿತಾಸಕ್ತಿ ರಕ್ಷಣೆಗಾಗಿ ಭೂಸ್ವಾಧೀನ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲಗೊಳಿಸಿ, ಖಾಸಗಿ ಮಾರುಕಟ್ಟೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಪ್ರತಿ ವಲಯದಲ್ಲೂ ನಡೆಸುತ್ತಿರುವ ಜನವಿರೋಧಿ ಕ್ರಮಗಳನ್ನು ಕೈ ಬಿಡಬೇಕು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಹಂತದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
- - -
- ಕೃಷಿ ಪಂಪ್ಸೆಟ್ಗಳಿಗೂ ಪ್ರೀಪೇಯ್ಡ್ ಮೀಟರ್ ಅಳವಡಿಕೆಗೆ ಒತ್ತಡ ಹೇರುವ ಕೆಲಸವಾಗುತ್ತಿದೆ.
- ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿ ನಾಗರಿಕ ಸೌಲಭ್ಯ ಖಾಸಗೀಕರಣಗೊಳಿಸಲಾಗುತ್ತಿದೆ.
- 10 ತಿಂಗಳ ಅತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಹುಚ್ಚು ಆದೇಶ ಹೊರಡಿಸಲಾಗಿದೆ- ದಲಿತರು, ಮಹಿಳೆಯರು, ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗಟ್ಟಲು ಸರ್ಕಾರ ವಿಫಲವಾಗಿದೆ.
- ಕೋಮುವಾದಿ, ಮೂಲಭೂತವಾದಿ ಶಕ್ತಿಗಳ ಉಪಟಳ ಹಿಮ್ಮೆಟ್ಟಿಸಲು ಕಾಂಗ್ರೆಸ್ ಆಡಳಿತ ವಿಫಲವಾಗಿದೆ.- ಶಾಂತಿಯುತ ಪ್ರತಿಭಟನೆಗಳ ಮೇಲೆ ಕಠಿಣ ಕಾನೂನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ.
- - - -20ಕೆಡಿವಿಜಿ15.ಜೆಪಿಜಿ:ದಾವಣಗೆರೆ ಶ್ರೀ ಜಯದೇವ ವೃತ್ತದಲ್ಲಿ ಮಂಗಳವಾರ ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ಪ್ರಶ್ನಿಸಿ ಜಿಲ್ಲೆಯ ಸಂಯುಕ್ತ ಹೋರಾಟ ಕರ್ನಾಟಕ, ಜೆಸಿಟಿಯು ವತಿಯಿಂದ ಪ್ರತಿಭಟಿಸಲಾಯಿತು.