ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಗ್ಯಾರಂಟಿ ಮೂಲಕ ಐದು ವರ್ಷ ಪೂರೈಸಿದರೆ ಸಾಕು ಎಂಬ ಚಿಂತನೆಯಲ್ಲಿದೆ ಎಂದು ಆರೋಪಿಸಿದರು.
ಡಾ। ಬಿ.ಆರ್.ಅಂಬೇಡ್ಕರ್ ಸೋಲಿಗೆ ವೀರ ಸಾವರ್ಕರ್ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದನ್ನು ಅವರು ಸಾಬೀತು ಮಾಡಿದರೆ ನಾನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಒಂದು ವೇಳೆ ಸಾಬೀತು ಮಾಡಲು ವಿಫಲವಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ, ರಾಜಕೀಯ ಸನ್ಯಾಸತ್ವ ಸ್ವೀಕಾರ ಮಾಡಬೇಕು ಎಂದು ಸವಾಲು ಹಾಕಿದರು.ಸಚಿವ ಪ್ರಿಯಾಂಕ್ ಖರ್ಗೆ ಅಂತವರ ಹೇಳಿಕೆ ಸಮರ್ಥಿಸಿ ಸಿದ್ದರಾಮಯ್ಯ ಮಾತನಾಡುವುದು ಬಹಳ ವಿಪರ್ಯಾಸದ ಸಂಗತಿ. ಇಂತಹ ಹಗುರವಾದ ಹೇಳಿಕೆಗಳನ್ನು ಸಿದ್ದರಾಮಯ್ಯ ಕೊಡಬಾರದಿತ್ತು, ಇದು ಅವರ ವ್ಯಕ್ತಿತ್ವಕ್ಕೆ ಗೌರವ ತರುವುದಿಲ್ಲ, ಸಿದ್ದರಾಮಯ್ಯ ನಾವು ಹಾಕಿದ ಸವಾಲನ್ನು ಸ್ವೀಕಾರ ಮಾಡಬೇಕು ಎಂದು ಆಗ್ರಹಿಸಿದರು.
ವಕ್ಫ್ ತಿದ್ದುಪಡಿ ಮಸೂದೆಯನ್ನು ನಾವು ರಾಜ್ಯದಲ್ಲಿ ಜಾರಿ ಮಾಡಲ್ಲ ಎಂಬ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಸಂಸತ್ನಲ್ಲಿ ಸುದೀರ್ಘ ಚರ್ಚೆ ಮಾಡಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಪಾಸ್ ಮಾಡಿದೆ. ವಕ್ಫ್ ಆಸ್ತಿಯನ್ನು ಲೂಟಿ ಮಾಡಲಾಗುತ್ತಿದೆ. ಇದನ್ನು ತಡೆಯಲು ಕೇಂದ್ರದ ನಿರ್ಧಾರವನ್ನು ರಾಜ್ಯಗಳು ಪಾಲನೆ ಮಾಡಲೇ ಬೇಕು ಎಂದು ಅವರು ಹೇಳಿದರು.