ಜನಸ್ಪಂದನ ಕಾರ್ಯಕ್ರಮ: ಜಿಲ್ಲೆಗೆ ಸಂಬಂಧಿಸಿದ 11 ಅರ್ಜಿಗಳಲ್ಲಿ ನಾಲ್ಕು ಇತ್ಯರ್ಥ

KannadaprabhaNewsNetwork |  
Published : Feb 09, 2024, 01:48 AM IST
ಗುರುವಾರ ನಡೆದ ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಬಾಗಲಕೋಟೆಯಿಂದ ವಿಡಿಯೋ ವಚ್ಯರ್ೂಚಲ್ ಮೂಲಕ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಅವರು ಭಾಗಿಯಾಗಿದ್ದರು. | Kannada Prabha

ಸಾರಾಂಶ

ಬಾಗಲಕೋಟೆ: ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ 11 ಅರ್ಜಿಗಳು ಸ್ವೀಕೃತಗೊಂಡಿದ್ದು, ಅದರಲ್ಲಿ ನಾಲ್ಕು ಅರ್ಜಿಗಳನ್ನು ಇತ್ಯರ್ಥಪಡಿಸಲಾಯಿತು. ಗುರುವಾರ ನಡೆದ ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಬಾಗಲಕೋಟೆಯಿಂದ ವಿಡಿಯೋ ವರ್ಚುವಲ್ ಮೂಲಕ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಪಂ ಸಿಇಒ ಶಶಿಧರ ಕುರೇರ್ ಅವರು ಭಾಗಿಯಾಗಿದ್ದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ 11 ಅರ್ಜಿಗಳು ಸ್ವೀಕೃತಗೊಂಡಿದ್ದು, ಅದರಲ್ಲಿ ನಾಲ್ಕು ಅರ್ಜಿಗಳನ್ನು ಇತ್ಯರ್ಥಪಡಿಸಲಾಯಿತು.

ಗುರುವಾರ ನಡೆದ ಮುಖ್ಯಮಂತ್ರಿಗಳ ಜನಸ್ಪಂದನ ಕಾರ್ಯಕ್ರಮದಲ್ಲಿ ಬಾಗಲಕೋಟೆಯಿಂದ ವಿಡಿಯೋ ವರ್ಚುವಲ್ ಮೂಲಕ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಪಂ ಸಿಇಒ ಶಶಿಧರ ಕುರೇರ್ ಅವರು ಭಾಗಿಯಾಗಿ ಬೆಳಗ್ಗೆಯಿಂದ ಸಂಜೆಯವರೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಿಲ್ಲೆಗೆ ಸಂಬಂಧಿಸಿದ ಸ್ವೀಕೃತವಾಗಿ ಅರ್ಜಿಗಳನ್ನು ಆಲಿಸಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಸಂಬಂಧಿಸಿದ ಒಟ್ಟು 11 ಅಹವಾಲುಗಳು ಸ್ವೀಕೃತವಾಗಿದ್ದು, ಇವುಗಳಲ್ಲಿ 4 ಅರ್ಜಿಗಳು ಇತ್ಯರ್ಥಗೊಂಡವು. ಮುಧೋಳ ತಾಲೂಕಿನ ಇಂಗಳಿ ಗ್ರಾಮದ ರಕ್ಷಿತಾ ಲಕ್ಷ್ಮಣ ಮತ್ತು ಇತರರು ಸೇರಿ ಜಮೀನಿಗೆ ದಾರಿ ಮತ್ತು ಸೀಡಿ ಕಾಮಗಾರಿ ಕ್ರೀಯಾಯೋಜನೆಯಲ್ಲಿ ಸೇರಿಸಿಕೊಂಡು ರೈತರಿಗೆ ಅನುಕೂಲ ಮಾಡಿಕೊಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ತಕ್ಷಣ ಇತ್ಯರ್ಥಪಡಿಸಲಾಯಿತು.

ಶಿವಯ್ಯ ಅಯ್ಯಪ್ಪ ಬೂದಿಹಾಳ ಮತ್ತು ರಾಮಪ್ಪ ಲೆಂಕಪ್ಪ ದೊಡ್ಡಮನಿ ಅವರು ಬೀಳಗಿ ಮತ್ತು ಬಾದಾಮಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ನಿವೃತ್ತರಾದ ಹಲವು ಕಾರ್ಯದರ್ಶಿ, ಎಸ್.ಡಿ.ಎ ಹಾಗೂ ಪಿಡಿಒಗಳಿಗೆ ಹಳೆಯ ಪಿಂಚಣಿ ಮಂಜೂರು ಕುರಿತು ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ಪಂಚಾಯತ್‌ ರಾಜ್ ಇಲಾಖೆಯಿಂದ ತಕ್ಷಣ ಇತ್ಯರ್ಥಪಡಿಸಲಾಯಿತು. ಲಕ್ಕಪ್ಪ ಪಾಂಡಪ್ಪ ಬಾರ್ಕಿ ಅವರು ಮುಧೋಳ ತಾಲೂಕಿನ ಮಾಚಕನೂರ ಗ್ರಾಮ ಪಂಚಾಯತಿ ಕಚೇರಿಯ ಸಿಪಾಯಿ ಎಂದು ಅನುಮೋದನೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಸಹ ಇತ್ಯರ್ಥಪಡಿಸಲಾಯಿತು.

ಬೀಳಗಿ ತಾಲೂಕಿನ ಭುವನೇಶ್ವರಿ ಹಿರೇಮಠ ಅಟಲಜೀ ಜನಸ್ನೇಹಿ ಕೇಂದ್ರದಲ್ಲಿ ಬೀಳಗಿ ಕಸಬಾ ಹೆಚ್ಚುವರಿ ಆಪರೇಟರ್ ಆಗಿ ನೇಮಿಸಲು, ಬಾದಾಮಿ ತಾಲೂಕಿನ ರುಕ್ಮಿಣಿ ಚೀಲವೇರಿ ಅವರು ಎಜೆಎಸ್ಕೆ ಕೇಂದ್ರದಲ್ಲಿ ಹೆಚ್ಚುವರಿ ಆಪರೇಟರ್ ಆಗಿ ತೆಗೆದುಕೊಳ್ಳುವ ಕುರಿತು, ರಬಕವಿ ಬನಹಟ್ಟಿಯ ಶೈನಾಜ್‌ ಪೆಂಢಾರಿ ಮತ್ತು ಶೋಭಾ ಕಲಾಲ್‌ ಅವರು ಅಕ್ರಮ ಸಕ್ರಮ ಯೋಜನೆಯಲ್ಲಿ ಮನೆ ಮಂಜೂರು ಮಾಡುವ ಬಗ್ಗೆ, ಇಲಕಲ್ಲಿನ ಶಂಶದ್ ಬೇಗಂ ತಹಶೀಲ್ದಾರ್‌ ನಿವೇಶನ ಮಂಜೂರು ಮಾಡುವ ಕುರಿತು, ಬಾದಾಮಿಯ ರಾಮಚಂದ್ರ ಯಲ್ಲಪ್ಪ ಸಾರ್ವಜನಿಕ ರಸ್ತೆ ಮಧ್ಯೆ ಮನೆ ಕಟ್ಟಿದ್ದು, ತೆರವುಗೊಳಿಸುವ ಕುರಿತು ಒಟ್ಟು 7 ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳನ್ನು ತುರ್ತಾಗಿ ಇತ್ಯರ್ಥ ಪಡಿಸಲಾಗವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜನತಾ ದರ್ಶನದ ವರ್ಚುವಲ್‌ ಕಾರ್ಯಕ್ರಮದಲ್ಲಿ ಜಿಪಂ ಸಿಇಒ, ಎಸ್ಪಿ, ಯುಕೆಪಿ ಮಹಾ ವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆಯಾ ತಾಲೂಕಿನ ತಹಸೀಲ್ದಾರ್ ರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರ್ಸಿಯನ್‌ ಹೇರಿ ಕನ್ನಡ ಕೊಲೆ ಮಾಡಿದ ಟಿಪ್ಪು: ಸಿ.ಟಿ. ರವಿ
ಲೇಡಿಗೋಶನ್‌ : ಗುತ್ತಿಗೆದಾರರ ಬಾಕಿ ಮೊತ್ತ ಲೋಕ ಅದಾಲತ್‌ನಲ್ಲಿ ಇತ್ಯರ್ಥ