ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಸಮೀಪದ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ಜಾತ್ರೆಯ ಅಂಗವಾಗಿ ಭಾನುವಾರ ಜಂಗೀ ಕುಸ್ತಿ ಸೇರಿದಂತೆ ವಿವಿಧ ಕಸರತ್ತಿನ ಸ್ಪರ್ಧೆಗಳು ಗಮನ ಸೆಳೆದವು.
ಸಂಜೆ ಜರುಗಿದ ಜಂಗೀ ಕುಸ್ತಿ ಸ್ಪರ್ಧೆಯಲ್ಲಿ ದ್ಯಾಬೇರಿ, ಮಾಲ, ಸೋಲಾಪುರ, ನಿಪ್ಪಾಣಿ, ಲಚ್ಯಾಣ, ನಿಂಬಾಳ, ಹೊರ್ತಿ, ಚಾಂದಕೋಟೆ, ವಿಜಯಪುರ, ಮಸ್ಕಿ, ಇಂಡಿ, ಸೇರಿದಂತೆ ವಿವಿಧೆಡೆಗಳಿಂದ ಜಟ್ಟಿಗಳು ಭಾಗವಹಿಸಿದ್ದರು. ಜಂಗೀ ಕುಸ್ತಿ ನೋಡುಗರನ್ನು ರೋಮಾಂಚನಗೊಳಿಸಿತು. ಕಡೆ ಕುಸ್ತಿ ದ್ಯಾಬೇರಿಯ ಗೋಪಾಲ ಹಾಗೂ ಉಮದಿಯ ಅಶೋಕ ನಡುವೆ ನಡೆದಿದ್ದು, ದ್ಯಾಬೇರಿಯ ಗೋಪಾಲ ಜಯಶಾಲಿಯಾಗಿ ನಗದು ₹ 5 ಸಾವಿರ ಹಾಗೂ ಬೆಳ್ಳಿ ಕಡಗ ತಮ್ಮದಾಗಿಸಿಕೊಂಡರು.
ಎರಡು ಸ್ಪರ್ಧೆ ನಡೆಯುವ ಸಂದರ್ಭದಲ್ಲಿ ಸತ್ಯಪ್ಪ ಬಂಡಿವಡ್ಡರ, ಅಂಬರೀಶ ಬೆಲ್ಲದ, ಪ್ರಭು ಚವ್ಹಾಣ, ಚಂದ್ರಶೇಖರ ಮುಳವಾಡ, ಚಂದ್ರಶೇಖರ ಮರೋಳ, ಮಹೇಶ ಮುಳವಾಡ, ಶರಣು ಮರೋಳ, ಹೈದರ ಸುತಾರ, ಯಮನೂರಿ, ಪೂಜಾರಿ, ಮಹಾಂತೇಶ ಗೌರಾ, ಬಾಬು ಚಪ್ಪರಬಂದ, ಬಂದೇನವಾಜ್ ವಾಲೀಕಾರ, ಬಸನಗೌಡ ಬಿರಾದಾರ, ಬಸಯ್ಯ ಶೀಕಳವಾಡಿ, ಶಂಕ್ರೆಪ್ಪ ಪೂಜಾರಿ, ಧರ್ಮಣ್ಣ ಪೂಜಾರಿ, ಗಿರಿಯಪ್ಪ ಹೆಬ್ಬಾಳ, ಶಿವಾನಂದ ಬೆಣ್ಣೂರ, ಖಾಜೇಸಾಬ ವಾಲೀಕಾರ, ಶಿವಾನಂದ ಬೆಲ್ಲದ, ಮಂಜುನಾಥ ಮುಳವಾಡ, ಶಿವಪ್ಪ ನಂದಿಹಾಳ, ಮಹಬೂಬ ಲೋದಿ, ಮಲ್ಲಪ್ಪ ಬೊಮ್ಮಣಗಿ, ಚಾಂದು ಚಪ್ಪರಬಂದ, ರಫೀಕ್ ವಾಲೀಕಾರ, ಅಪ್ಪು ಲಮಾಣಿ, ನೇಮು ಲಮಾಣಿ, ಲಕ್ಷ್ಮಣ ಬಂಡಿವಡ್ಡರ, ರಮೇಶ ನಿಡಗುಂದಿ, ರಿಯಾಜ ಅವಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.ರಾತ್ರಿ ನವಲಗುಂದ ತಾಲೂಕಿನ ನಾಗನೂರಿನ ಇಮಾಮಸಾಬ್ ಒಲೆಪ್ಪನವರ ಅವರಿಂದ ಭಾವೈಕ್ಯತೆಯ ಜಾನಪದ ಗೀತೆಗಳು ನಡೆದವು. ಜಾತ್ರೆ ಅಂಗವಾಗಿ ಸೋಮವಾರ ಬೆಳಗ್ಗೆ ೯ ಗಂಟೆಗೆ ೫೫ ಎಚ್ಪಿ ಟ್ರ್ಯಾಕ್ಟರ್ ಜಗ್ಗುವ ಸ್ಪರ್ಧೆ, ರಾತ್ರಿ ೧೦.೩೦ ಗಂಟೆಗೆ ಸಿಡಿದೆದ್ದ ಸೂರ್ಯಚಂದ್ರ ನಾಟಕ ಪ್ರದರ್ಶನವಿದೆ ಎಂದು ಜಾತ್ರಾ ಕಮಿಟಿ ಸದಸ್ಯರು ತಿಳಿಸಿದರು.