- ಹರಿಹರದಲ್ಲಿ 15 ದಿನಗಳ ತರಬೇತಿ ಶಿಬಿರ ಉದ್ಘಾಟನೆ - - - ಕನ್ನಡಪ್ರಭ ವಾರ್ತೆ ಹರಿಹರ
ಹರಿಹರದ ಮೈತ್ರಿ ವನದಲ್ಲಿ ಶನಿವಾರ ಮಾನವ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಗ್ರಾಮಾಡಳಿತ ಅಧಿಕಾರಿಗಳ ಸ್ಪರ್ಧಾತ್ಮಕ ಮಹಿಳಾ ಪರೀಕ್ಷಾರ್ಥಿಗಳಿಗೆ ಆಯೋಜಿಸಿದ್ದ 15 ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಬಡವರು, ಶೋಷಿತರು ಹಾಗೂ ಜಾತಿ ಕಾರಣಕ್ಕಾಗಿ ತುಳಿತಕ್ಕೊಳಗಾದವರ ಏಳಿಗೆಗೆ ಜಾರಕಿಹೊಳಿ ಫೌಂಡೇಶನ್ ನಿರಂತರ ಶ್ರಮಿಸುತ್ತಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ವಸತಿ, ಆಹಾರ ನೀಡಿ ತರಬೇತಿ ನೀಡುತ್ತಿರುವುದು ಸಾಮಾಜಿಕ ಕಳಕಳಿಯ ಪ್ರತೀಕ ಎಂದರು.ಶಿಬಿರಾರ್ಥಿಗಳು ಸಣ್ಣ ಗುರಿ ಬದಲಿಗೆ ದೊಡ್ಡ ಸಾಧನೆ ಮಾಡಲು ಪೂರಕ ಶ್ರಮ ಹಾಕಲು ಮುಂದಾದರೆ ಯಶಸ್ಸು ಸಾಧ್ಯ. ಗ್ರಾಮಾಡಳಿತ ಅಧಿಕಾರಿಯಾಗಿ ಆಯ್ಕೆಯಾದರೆ ರೈತರ ಕೆಲಸಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಮತನಾಡಿ, ಸರ್ಕಾರಿ ಉದ್ಯೋಗ ಪಡೆಯಬೇಕೆಂದರೆ ತೀವ್ರ ಸ್ಪರ್ಧೆ ಇದೆ. ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಶಾಲಾ, ಕಾಲೇಜು ಹಂತದಲ್ಲೇ ಸ್ಪರ್ಧೆಗಳಿಗೆ ಸಜ್ಜುಗೊಳಿಸಬೇಕು. ದಿನಪತ್ರಿಕೆ, ವಾರ, ಮಾಸ ಪತ್ರಿಕೆಗಳನ್ನು ನಿಯಮಿತವಾಗಿ ಓದಬೇಕೆಂದರು.
ಕಾರ್ಯಕ್ರಮದಲ್ಲಿ ಸ್ವಾಗತ ಹಾಗೂ ನಿರೂಪಣೆಯನ್ನು ಮಂಜುನಾಥ್ ಉಕ್ಕಡಗಾತ್ರಿ ನೆರವೇರಿಸಿದರು. ಶಿಬಿರದ ಉಸ್ತುವಾರಿ ಶಿಲ್ಪಾ ಉಪಸ್ಥಿತರಿದ್ದರು.- - - -29ಎಚ್ಆರ್ಆರ್3:
ತರಬೇತಿ ಶಿಬಿರವನ್ನು ಪತ್ರಕರ್ತ ಬಿ.ಎನ್.ಮಲ್ಲೇಶ್ ಉದ್ಘಾಟಿಸಿದರು.