ಬಡತನದಲ್ಲಿ ಹುಟ್ಟಿ ಅರಳಿದ ಮಲ್ಲಿಗೆ ಹೂ ವಸ್ತ್ರಮಠ

KannadaprabhaNewsNetwork |  
Published : Apr 06, 2025, 01:48 AM IST
5ಡಿಡಬ್ಲೂಡಿ6ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠರ ನಿವೃತ್ತಿ ಪ್ರಯುಕ್ತ ಶನಿವಾರ ಜರುಗಿದ ಅಭಿನಂದನೆಯನ್ನು ಉದ್ಘಾಟಿಸಲಾಯಿತು.  | Kannada Prabha

ಸಾರಾಂಶ

ನಿವೃತ್ತಿ ನಂತರ ತನ್ನ ಅನುಭವದ ಆಧಾರದಲ್ಲಿ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಸಾರ್ಥಕತೆ, ಸಮಾಧಾನ ಸಿಗುತ್ತದೆ

ಧಾರವಾಡ: ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಬಡತನದಲ್ಲಿ ಹುಟ್ಟಿ ಅರಳಿದ ಮಲ್ಲಿಗೆಯ ಹೂವು. ಜೀವನದಲ್ಲಿ ದೊಡ್ಡ ಗುರಿ ಇಟ್ಟುಕೊಂಡು ಸಾಧನೆ ಮುಡಿಗೇರಿಸಿಕೊಂಡಿದ್ದಾರೆ. ಅವರ ವ್ಯಕ್ತಿತ್ವ ಇತರರಿಗೆ ಮಾದರಿ ಎಂದು ಶಿರಹಟ್ಟಿ ಸಂಸ್ಥಾನ ಮಠದ ಫಕ್ಕೀರ ಸಿದ್ಧರಾಮ ಸ್ವಾಮಿಗಳು ಹೇಳಿದರು.

ಆಲೂರು ವೆಂಕಟರಾವ್‌ ಸಭಾಭವನದಲ್ಲಿ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠರ ನಿವೃತ್ತಿ ಪ್ರಯುಕ್ತ ಹಾಗೂ ಕನ್ನಡಪ್ರಭ ಮತ್ತು ಏಷ್ಯಾನೇಟ್‌ ಸುವರ್ಣ ನ್ಯೂಸ್‌ ವತಿಯಿಂದ ನೀಡಿದ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ ಪ್ರಶಸ್ತಿ ಪ್ರದಾನ ಹಿನ್ನೆಲೆ ಶನಿವಾರ ಜರುಗಿದ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರ ಸೇವೆಯಲ್ಲಿದ್ದಾಗ ನೀತಿ, ತತ್ವ, ಸಿದ್ದಾಂತಗಳಿಗೆ ಬದ್ಧನಾಗಿ ವೃತ್ತಿ ನಿರ್ವಹಿಸಬೇಕು. ನಿವೃತ್ತಿ ನಂತರ ತನ್ನ ಅನುಭವದ ಆಧಾರದಲ್ಲಿ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಸಾರ್ಥಕತೆ, ಸಮಾಧಾನ ಸಿಗುತ್ತದೆ. ಪರೋಪಕಾರಿ, ಜೀವಪರ ಚಿಂತನೆಯಿಂದ ಜೀವನ ಸಾರ್ಥಕವಾಗುತ್ತದೆ ಎಂದರು.

ಎಸ್.ಬಿ. ವಸ್ತ್ರಮಠ ಅವರು ಆತ್ಮಸಾಕ್ಷಿಯಾಗಿ ಮತ್ತು ಮನಸ್ಸು ಸಾಕ್ಷಿಯಾಗಿ ಬದುಕಿದವರು. ಪ್ರಾಮಾಣಿಕವಾಗಿ ಕಾಯಕ ಮಾಡಿ, ಸುಮಾರು ವರ್ಷದವರೆಗೆ ನ್ಯಾಯಾಧೀಶರಾಗಿ ಕೆಲಸ ಮಾಡಿ, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರಿಗೆ ಬಾಲ್ಯದ ಬಡತನವೇ ಜೀವನದ ಪಾಠ ಕಲಿಸಿದೆ. ಧರ್ಮದ ಮಾರ್ಗದಲ್ಲಿ ನಡೆದು, ವೃತ್ತಿ ಮೌಲ್ಯ ಕಾಪಾಡಿಕೊಂಡು ಬಂದಿದ್ದಾರೆ. ಅವರ ವೃತ್ತಿ ಮತ್ತು ಬದುಕು ಇತರರಿಗೆ ಮಾದರಿ ಆಗಿದೆ ಎಂದು ಸ್ವಾಮೀಜಿ ಶ್ಲಾಘಿಸಿದರು.

ಮುರಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯನು ಭೂಮಿಯ ಹಲವು ವರ್ಷಗಳ ಕಾಲ ಬದುಕುತ್ತಾನೆ. ಹೇಗೆ ಬದುಕಬೇಕು ಎಂಬುವುದು ಬಸವಣ್ಣವರು ತಮ್ಮ ವಚನದಲ್ಲಿ ಹೇಳಿದ್ದಾರೆ. ಆತ್ಮ ಸಾಕ್ಷಿಯಾಗಿ ಹಾಗೂ ಮನಸಾಕ್ಷಿಯಾಗಿ ಬದುಕಬೇಕು. ಆ ಬದುಕನ್ನು ವಸ್ತ್ರಮಠ ತೋರಿಸಿಕೊಟ್ಟಿದ್ದಾರೆ ಎಂದರು.

ಅಭಿನಂದನೆ ಸ್ವೀಕರಿಸಿದ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ, ಅನೇಕ ಕಷ್ಟ-ಸುಖ ನೋಡಿದ್ದೇನೆ. ಒಂದು ರೂಪಾಯಿಯಿಂದ ಹಿಡಿದು ₹500 ವರೆಗಿನ ಚಹಾ ಕುಡಿದಿದ್ದೇನೆ. ಮೊದಲು ಒಂದೇ ರುಪಾಯಿಯಲ್ಲಿ ಜೀವನದ ಸಂತಸ ಕಂಡಿದ್ದು, ಈಗ ಲಕ್ಷಗಟ್ಟಲೇ ಸಂಬಳ ಇದ್ದರೂ ನೆಮ್ಮದಿ ಇಲ್ಲದಾಗಿದೆ. ಬಡತನದಲ್ಲಿ ಬೆಂದ ನಾನು ಮುರಘಾಮಠದಲ್ಲಿ ವಿದ್ಯಾಭ್ಯಾಸ ಮಾಡಿ ವಕೀಲ ವೃತ್ತಿ ಮಾಡಿದ್ದೇನೆ.

ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಧರ್ಮವನ್ನು ಅಷ್ಟೇ ನಂಬಿದ್ದೇನೆ. ಆದ್ದರಿಂದ ಈಗಿನ ಯುವ ವಕೀಲರು ಕಾನೂನು ಮತ್ತು ಧರ್ಮದ ಮಾರ್ಗದಲ್ಲಿ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಕೃಷಿ ಮಾರಾಟ ಇಲಾಖೆಯ ರಾಜ್ಯ ನಿರ್ದೇಶಕ ಶಿವಾನಂದ ಕಾಪಶಿ ಮತ್ತು ನ್ಯಾಯವಾದಿ ಎ.ಸಿ. ಚಾಕಲಬ್ಬಿ ಇದ್ದರು. ದೀಪಾ ಪತ್ತಾರ ಪ್ರಾರ್ಥಿಸಿದರು. ಪ್ರೊ.ಸಿದ್ದಯ್ಯ ವಸ್ತ್ರಮಠ ಸ್ವಾಗತಿಸಿದರು. ವಿನಾಯಕ ವಸ್ತ್ರಮಠ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ