ಜಾತ್ರಾ ಮಹೋತ್ಸವಗಳು ಸಂಸ್ಕೃತಿಯ ಪ್ರತೀಕ

KannadaprabhaNewsNetwork |  
Published : Feb 06, 2025, 12:16 AM IST
5ಶಿರಾ4: ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಗ್ರಾಮದ ಶ್ರೀ ಬಂಡಿರAಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವದಲ್ಲಿ ಶಾಸಕ ಟಿ.ಬಿ.ಜಯಚಂದ್ರ ಪಾಲ್ಗೊಂಡು ಜಾತ್ರೆಯಲ್ಲಿ ಪಾಲ್ಗೊಂಡ ರೈತರಿಗೆ ಊಟ ವಿತರಣೆ ಮಾಡಿದರು. | Kannada Prabha

ಸಾರಾಂಶ

ಜಾತ್ರಾ ಮಹೋತ್ಸವ ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಸಾಕ್ಷಿಕರಿಸುತ್ತವೆ. ಹಸಿದವರಿಗೆ ಅನ್ನ ನೀಡುವುದಕ್ಕಿಂತ ಉತ್ತಮ ಸೇವೆ ಮತ್ತೊಂದಿಲ್ಲ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಜಾತ್ರಾ ಮಹೋತ್ಸವ ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಸಾಕ್ಷಿಕರಿಸುತ್ತವೆ. ಹಸಿದವರಿಗೆ ಅನ್ನ ನೀಡುವುದಕ್ಕಿಂತ ಉತ್ತಮ ಸೇವೆ ಮತ್ತೊಂದಿಲ್ಲ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.ಅವರು ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಗ್ರಾಮದ ಶ್ರೀ ಬಂಡಿರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು, ಜಾತ್ರೆಯಲ್ಲಿ ಪಾಲ್ಗೊಂಡ ರೈತರಿಗೆ ಊಟ ವಿತರಣೆ ಮಾಡಿ ಮಾತನಾಡಿದರು. ತಾವರೆಕೆರೆ ಜಾತ್ರೆಯಲ್ಲಿ ಉತ್ತಮ ರಾಸುಗಳು ಪಾಲ್ಗೊಂಡಿರುವ ಕಾರಣ ರಾಜ್ಯದ ನಾನಾ ಮೂಲೆಗಳಿಂದ ರಾಸುಗಳನ್ನು ಕೊಳ್ಳಲು ರೈತರು ಈ ಜಾತ್ರೆಗೆ ಬರುತ್ತಾರೆ, ಇವರಿಗೆ ಊಟ ನೀಡುತ್ತಿರುವ ಎಂಆರ್ ಶಶಿಧರ್ ಗೌಡ ಮತ್ತು ಸ್ನೇಹಿತರ ಸೇವೆ ಜನ ಮೆಚ್ಚುವಂತದ್ದು, ಧಾರ್ಮಿಕ ಉತ್ಸವಗಳು ಪರಸ್ಪರ ಸ್ನೇಹ ಸಂಬಂಧಗಳನ್ನು ಗಟ್ಟಿಗೊಳಿಸಿ ಒಗ್ಗಟ್ಟನ್ನು ತಂದುಕೊಡುತ್ತವೆ. ಶ್ರೀ ಬಂಡಿರಂಗನಾಥ ಸ್ವಾಮಿ ರಥ ಸುಗಮವಾಗಿ ಸಾಗಿದ ರೀತಿ ಪ್ರತಿಯೊಬ್ಬರ ಜೀವನ ದಲ್ಲಿರುವ ಕಷ್ಟಗಳು ದೂರವಾಗಿ ಪ್ರತಿಯೊಬ್ಬರ ಜೀವನ ಸುಭಿಕ್ಷೆ ಮೂಡಲಿ ಆಶಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಿಶಾನ್ ಮೂಹಮ್ಮದ್, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಆರ್. ಶಶಿಧರ್ ಗೌಡ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವು ಚಂಗಾವರ, ಸಂಕಾಪುರ ಚಿದಾನಂದ, ಪಿಡಿಒ ನಾಗರಾಜ್, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಶಿವು ಸ್ನೇಹಪ್ರಿಯ, ಸದಸ್ಯ ಶಿವಕುಮಾರ ನಾಯಕ, ಮದ್ದಕ್ಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ಮುದ್ದೇನಹಳ್ಳಿ ಗೊಲ್ಲರಹಟ್ಟಿ ಕರಿಯಪ್ಪ, ಚೇತನ್ ಪಟೇಲ್, ಬಲರಾಮ್, ಕೆ ರಂಗನಹಳ್ಳಿ ಈರಮುದ್ದಯ್ಯ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ
ಚಳಿ ಹೆಚ್ಚಿದಂತೆ ಏರುತ್ತಿದೆ ಮೊಟ್ಟೆ ದರ