ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ

KannadaprabhaNewsNetwork |  
Published : Feb 27, 2024, 01:31 AM IST
ಶ್ರೀ ಜಯಶಾಂತಲಿಂಗೇಶ್ವರ ತೇರು ಎಳೆದ ಭಕ್ತರು | Kannada Prabha

ಸಾರಾಂಶ

ವಿಜಯಪುರ: ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ ಅದ್ಧೂರಿ ರಥ ಎಳೆಯುವುದರ ಮೂಲಕ ಸಂಪನ್ನಗೊಂಡಿತು. ನಗರದ ಉಕ್ಕಲಿ ರಸ್ತೆಯಲ್ಲಿನ ಜಯಶಾಂತಲಿಂಗೇಶ್ವರ ಬೃಹನ್ಮಠ, ವಿಶ್ವಶಾಂತಿ ಪೀಠದಲ್ಲಿ ಫೆ.22 ರಿಂದ ಫೆ.25ರ ವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳು, ಪ್ರವಚನ, ಉಪನ್ಯಾಸ ಗೋಷ್ಠಿಗಳು ಸೇರಿದಂತೆ ಅನೇಕ ಧಾರ್ಮಿಕ ಚಟುವಟಿಕೆಗಳಿಗೆ ಸಾಕ್ಷಿಯಾಯಿತು.

ವಿಜಯಪುರ: ಜಗದಾರಾಧ್ಯ ಜಯಶಾಂತಲಿಂಗೇಶ್ವರ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಜಾತ್ರಾ ಮಹೋತ್ಸವ ಅದ್ಧೂರಿ ರಥ ಎಳೆಯುವುದರ ಮೂಲಕ ಸಂಪನ್ನಗೊಂಡಿತು. ನಗರದ ಉಕ್ಕಲಿ ರಸ್ತೆಯಲ್ಲಿನ ಜಯಶಾಂತಲಿಂಗೇಶ್ವರ ಬೃಹನ್ಮಠ, ವಿಶ್ವಶಾಂತಿ ಪೀಠದಲ್ಲಿ ಫೆ.22 ರಿಂದ ಫೆ.25ರ ವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳು, ಪ್ರವಚನ, ಉಪನ್ಯಾಸ ಗೋಷ್ಠಿಗಳು ಸೇರಿದಂತೆ ಅನೇಕ ಧಾರ್ಮಿಕ ಚಟುವಟಿಕೆಗಳಿಗೆ ಸಾಕ್ಷಿಯಾಯಿತು. ಫೆ.25 ರಂದು ಬೆಳಿಗ್ಗೆ 7 ಗಂಟೆಗೆ ವಿದ್ಯಾಮಾನ್ಯ ಶಿವಾಭಿನವ ಜಯಶಾಂತಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಜಿಗಳಿಂದ ಇಷ್ಟಲಿಂಗ ಪೂಜೆ, 7.30ಕ್ಕೆ ವೇದಮೂರ್ತಿ ಪಂಡಿತ ಶಿವಯೋಗಿ ಶರ್ಮಾ ಹಾಗೂ ವೃಂದದಿಂದ ಮಹಾರುದ್ರಯಜ್ಞ ನಡೆಯಿತು. ಬೆಳಿಗ್ಗೆ ಜಂಗಮ ವಟುಗಳಿಗೆ ಅಯ್ಯಾಚಾರ ಮತ್ತು ದೀಕ್ಷೆ, 10ಕ್ಕೆ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾರುದ್ರ ಯಜ್ಞದ ಪೂರ್ಣಾಹುತಿ, ಶಿವಾನುಭವಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಿತು ನಡೆಸಲಾಯಿತು.

ಸಂಜೆ ಭವ್ಯ ರಥೋತ್ಸವ ಕಾರ್ಯಕ್ರಮ ಜರುಗಿದ್ದು, ಸಾವಿರಾರು ಭಕ್ತರು ಜಯಶಾಂತಲಿಂಗೇಶ್ವರ ರಥ ಎಳೆದು ಪುನಿತರಾದರು. ಈ ಸಂದರ್ಭದಲ್ಲಿ ವಿಭೂತಿಪೂರಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಶ್ರೀ, ಕೊಟ್ಟೂರು ಹಾಗೂ ಡೋಣೂರ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ನವಲಗುಂದ ವಿರಕ್ತಮಠದ ಬಸವಲಿಂಗ ಸ್ವಾಮೀಜಿ, ಹಿರೂರು ಅನ್ನದಾನೇಶ್ವರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಜಿಗಳು ಸಾನಿಧ್ಯ ವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌
ಕರಗಕ್ಕೆ ವಿಶ್ವಪ್ರಸಿದ್ಧಿ ಪಡೆದ ಧರ್ಮರಾಯ ದೇಗುಲ ಚಿನ್ನ ಕಳವು