ಆಧುನಿಕ ಭಾರತ ನಿರ್ಮಾಣಕ್ಕೆ ನೆಹರೂ ಬುನಾದಿ ಹಾಕಿದವರು: ರಮಾನಾಥ ರೈ

KannadaprabhaNewsNetwork |  
Published : May 29, 2026, 02:45 AM IST
ಪಂಡಿತ್‌ ಜವಾಹರಲಾಲ್‌ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಜವಾಹರಲಾಲ್ ನೆಹರೂ ಅವರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದು ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಮಾಜಿ ಸಚಿವ ಬಿ.ರಮನಾಥ ರೈ ಹೇಳಿದರು.

ಮಂಗಳೂರು: ಜವಾಹರಲಾಲ್ ನೆಹರೂ ಅವರು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದು ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಮಾಜಿ ಸಚಿವ ಬಿ.ರಮನಾಥ ರೈ ಹೇಳಿದರು.ಅವರು ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನೆಹರೂ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಅವರು ಮಾತನಾಡಿದರು.

ನೆಹರೂ ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳು, ವಿಜ್ಞಾನ-ಸಂಶೋಧನಾ ಸಂಸ್ಥೆಗಳು, ತಾಂತ್ರಿಕ ಕಾಲೇಜುಗಳು, ವೈದ್ಯಕೀಯ ಅಧ್ಯಯನ ಸಂಸ್ಥೆಗಳು, ಅಣೆಕಟ್ಟುಗಳು, ಆಸ್ಪತ್ರೆಗಳು, ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸಿ ಸಾಮಾಜಿಕ ಕ್ರಾಂತಿಯ ಹರಿಕಾರರೆನಿಸಿದರು. ಭಾರತ ವಿಶ್ವದ ಪ್ರಮುಖ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ನೆಹರೂ ಅವರು ಜಾರಿಗೆ ತಂದ ಪಂಚವಾರ್ಷಿಕ ಯೋಜನೆಗಳೇ ಕಾರಣ ಎಂದು ಸ್ಮರಿಸಿದರು.

ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಮುಖಂಡರಾದ ಸುರೇಂದ್ರ ಕಂಬಳಿ, ಆರ್.ಕೆ.ಪೃಥ್ವಿರಾಜ್, ಅಬ್ದುಲ್ ರವೂಫ್, ಜಯಶೀಲ ಅಡ್ಯಂತಾಯ, ಅಬ್ಬಾಸ್ ಅಲಿ, ಎಸ್.ಅಪ್ಪಿ, ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಟಿ.ಕೆ.ಸುಧೀರ್, ಭಾಸ್ಕರ್ ರಾವ್, ವಿಕಾಸ್ ಶೆಟ್ಟಿ, ಶಬೀರ್.ಎಸ್, ಗಣೇಶ್ ಪೂಜಾರಿ, ಯೋಗಿಶ್ ಕುಮಾರ್, ಆರಿಫ್ ಬಾವಾ ಬಂದರ್, ದಿನೇಶ್ ಕುಂಪಲ, ರಮಾನಂದ ಪೂಜಾರಿ, ಸಬಿತಾ ಮಿಸ್ಕಿತ್, ನಮಿತಾ ಡಿ.ರಾವ್, ಮಂಜುಳಾ ನಾಯಕ್, ಚಂದ್ರಕಲಾ ಜೋಗಿ, ಚಂದ್ರಹಾಸ ಪೂಜಾರಿ, ಮಲ್ಲಿಕಾರ್ಜುನ ಕೋಡಿಕಲ್, ರವಿರಾಜ್ ಪೂಜಾರಿ, ಸಮರ್ಥ್ ಭಟ್, ನಝೀರ್ ಬಜಾಲ್ ಮತ್ತಿತರರು ಇದ್ದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಜೋಕಿಂ ಡಿಸೋಜಾ ವಂದಿಸಿದರು.-----------------------------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂತ್ರಿಗಿರಿ ಲಾಬಿಗೆ ಅವಕಾಶ ಕೊಡಬೇಡಿ : ಡಿಕೆಗೆ ವರಿಷ್ಠರು
ಜು.1ರಿಂದ ರಾಜ್ಯದಲ್ಲಿ ಜಿ ರಾಮ್‌ ಜಿ