ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ತಾಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜವಾಹರ ಲಾಲ್ ನೆಹರು 62ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ. ದೇಶಕ್ಕೆ ನೆಹರು ಕೊಡುಗೆ ಅಪಾರ. ದೇಶ ಸಂಕಷ್ಟ ಎದುರಿಸುತ್ತಿದ್ದ ಸಂದರ್ಭದಲ್ಲಿ ಡ್ಯಾಂಗಳ ನಿರ್ಮಾಣ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಮುಂದಾಲೋಚನೆ ಮಾಡಿ ಸಾವಿರಾರು ಡ್ಯಾಂ ನಿರ್ಮಿಸಿ ಅನುಕೂಲ ಮಾಡಿಕೊಟ್ಟರು. ನೂರಾರು ವಿವಿಗಳನ್ನು ದೇಶದ ಉದ್ದಗಲಕ್ಕೂ ಸ್ಥಾಪಿಸಿದ ಕೀರ್ತಿ ನೆಹರುರವರಿಗೆ ಸೇರುತ್ತದೆ. ಆದರೆ, ಇಂದಿನ ಕೇಂದ್ರದ ಬಿಜೆಪಿ ಸರ್ಕಾರ ವಿವಿಗಳಿಗೆ ಸಿಗಬೇಕಾದ ಸೌಲಭ್ಯ ಕಡಿತಗೊಳಿಸುವ ಮೂಲಕ ಯುವ ಜನರಿಗೆ ದ್ರೋಹ ಬಗೆಯುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಹಾಗೂ ನೆಹರು ಅವರನ್ನು ಟೀಕಿಸುವ ಕೆಲಸ ಬಿಜೆಪಿ ಮಾಡುತ್ತ ಬರುತ್ತಿದೆ. ನೆಹರು ವಿಚಾರಧಾರೆ, ಅವರ ಸಿದ್ಧಾಂತವನ್ನು ಜನರ ಮನಸ್ಸಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ. ಇಲ್ಲವಾದಲ್ಲಿ ಬಿಜೆಪಿ ಅಪಪ್ರಚಾರ ವನ್ನೇ ಜನರು ನಂಬುವ ಸ್ಥಿತಿ ನಿರ್ಮಾಣವಾಗುತ್ತದೆ. ನೆಹರು ಅವರು ಪ್ರಧಾನಿಯಾಗಿ ನೀಡಿದ ಜನಪರ ಕಾಳಜಿ ಕಾರ್ಯಕ್ರಮಗಳು ಇಂದಿಗೂ ಅನುಕರಣೀಯ ಎಂದರು.ತಾಲೂಕು ಬಗರ್ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ ಮಾತನಾಡಿ, ದೇಶ ಕಂಡ ಮಹಾನ್ ವ್ಯಕ್ತಿಗಳಲ್ಲಿ ಜವಹರಲಾಲ್ ನೆಹರುರವರು ಒಬ್ಬರಾಗಿದ್ದಾರೆ. ದೇಶದ ಮೊದಲನೇ ಪ್ರಧಾನಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ನೆಹರು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಿ ಭಾರತಕ್ಕೆ ಮರಳಿ ವಕೀಲ ವೃತ್ತಿಯನ್ನು ಮಾಡುತ್ತಾ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ನೆಹರು ಪ್ರಮುಖ ಪಾತ್ರವಹಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.