ಮರುಹರಾಜು: 4ನೇ ದಿನವೂ ಜಯಕರ್ನಾಟಕ ಸಂಘಟನೆ ಧರಣಿ

KannadaprabhaNewsNetwork |  
Published : Oct 09, 2024, 01:36 AM IST
 8ಎಚ್‍ಆರ್‍ಆರ್1-2ಹರಿಹರದ ಗಾಂಧಿ ಮೈದಾನದ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಬಾಡಿಗೆ ಕರಾರು ಅವಧಿ ಮುಗಿದ್ದಿದ್ದು, ತಕ್ಷಣ ಅವುಗಳನ್ನು ಖಾಲಿ ಮಾಡಿಸಿ ಹೊಸದಾಗಿ ಹರಾಜು ಪ್ರಕ್ರಿಯ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಯುವ ಸಬಲೀಕರಣ ಕ್ರೀಡಾ ಇಲಾಖೆಯ ನಾಮ ಫಲಕಕ್ಕೆ ಹೂವಿನ ಹಾರ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಮಾಡಿ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. | Kannada Prabha

ಸಾರಾಂಶ

ಹರಿಹರ ನಗರದ ಗಾಂಧಿ ಮೈದಾನದ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಬಾಡಿಗೆ ಕರಾರು ಅವಧಿ ಮುಗಿದ್ದಿದ್ದು, ತಕ್ಷಣ ಅವುಗಳನ್ನು ಖಾಲಿ ಮಾಡಿಸಿ ಹೊಸದಾಗಿ ಹರಾಜು ಪ್ರಕ್ರಿಯ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಧರಣಿ ಸತ್ಯಾಗ್ರಹ 4ನೇ ದಿನವೂ ಮುಂದುವರಿಯಿತು.

- ಕ್ರೀಡಾಂಗಣ ಮಳಿಗೆಗಳ ಖಾಲಿ ಮಾಡಿಸುವಂತೆ ಆಗ್ರಹ - - - ಕನ್ನಡಪ್ರಭ ವಾರ್ತೆ ಹರಿಹರ ನಗರದ ಗಾಂಧಿ ಮೈದಾನದ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಬಾಡಿಗೆ ಕರಾರು ಅವಧಿ ಮುಗಿದ್ದಿದ್ದು, ತಕ್ಷಣ ಅವುಗಳನ್ನು ಖಾಲಿ ಮಾಡಿಸಿ ಹೊಸದಾಗಿ ಹರಾಜು ಪ್ರಕ್ರಿಯ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಧರಣಿ ಸತ್ಯಾಗ್ರಹ 4ನೇ ದಿನವೂ ಮುಂದುವರಿಯಿತು.

ಮಂಗಳವಾರ ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಮಹಾತ್ಮಾ ಗಾಂಧಿ ವೃತ್ತದಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಕ್ರೀಡಾ ಇಲಾಖೆ ನಾಮಫಲಕಕ್ಕೆ ಹೂವಿನ ಹಾರ ಹಾಕಿ, ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ವಿನೂತನವಾಗಿ ಪ್ರತಿಭಟಿಸಿ, ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಂಘಟನೆ ತಾಲೂಕು ಅಧ್ಯಕ್ಷ ಎಸ್. ಗೋವಿಂದ ಮಾತನಾಡಿ, ಇಲಾಖೆ ಗಾಂಧಿ ಮೈದಾನದಲ್ಲಿ ನಿರ್ಮಿಸಿರುವ 42 ಮಳಿಗೆಗಳ ಬಾಡಿಗೆ ವಾಯಿದೆ ಮುಗಿದು ಅನೇಕ ತಿಂಗಳಾಗಿವೆ. ಈ ಹಿಂದೆ ಮರುಹರಾಜು ಮಾಡುವುದಾಗಿ ಪ್ರಕಟಣೆ ಕರೆದಿದ್ದರು. ತಲಾ ₹500 ರಂತೆ ಹಣ ಪಡೆದು ಅರ್ಜಿ ವಿತರಿಸಿದ್ದರು. ಆದರೆ, ನ್ಯಾಯಾಲಯದ ಕಾರಣ ಹೇಳಿ ಹರಾಜು ಪ್ರಕ್ರಿಯೆ ಮುಂದೂಡಿದ್ದರು ಎಂದು ಕಿಡಿಕಾರಿದರು.

ಈ ಬಗ್ಗೆ ಜಿಲ್ಲಾಧಿಕಾರಿ ಸಮಕ್ಷಮ ಮರುಹರಾಜು ಮಾಡುವ ಮೊದಲು ಪ್ರಸ್ತುತ ಈಗ ಇರುವ ಬಾಡಿಗೆದಾರರನ್ನು ಖಾಲಿ ಮಾಡಿಸಿ ಮರುಹರಾಜು ಮಾಡಲು ಇಲಾಖೆಯವರು ಒಪ್ಪಿಕೊಂಡಿದ್ದರು. ಕಳೆದ ಸೆ.27ರಂದು ಮರುಹರಾಜು ಪ್ರಕಟಣೆ ಹೊರಡಿಸಿರುವ ಇಲಾಖೆಯವರು ನ.1ರಿಂದ ನ.5ರವರೆಗೆ ಅರ್ಜಿ ವಿತರಿಸುವುದಾಗಿ ತಿಳಿಸಿದ್ದರು. ಈಗ ಆ ಪ್ರಕ್ರಿಯೆ ಸಹ ನಡೆಯುತ್ತಿಲ್ಲ ಎಂದರು.

ಈ ಹಿಂದೆ ಮರುಹರಾಜು ಮಾಡುವುದಾಗಿ ಪ್ರಕಟಿಸಿದಾಗ ಅನೇಕರು ಅರ್ಜಿಗಳನ್ನು ತಲಾ ₹500ರಂತೆ ನೀಡಿ ಅರ್ಜಿ ಪಡೆದಿದ್ದರು. ಅವೇ ಅರ್ಜಿಗಳನ್ನು ಮಾನ್ಯ ಮಾಡಬೇಕು. ಜಿಲ್ಲಾಧಿಕಾರಿ ಖುದ್ದು ಭೇಟಿ ನೀಡಿ ಸಮಸ್ಯೆ ಬಗೆಹರಿಸುವವರೆಗೆ ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಬಿ.ಮಲ್ಲೇಶ್ ಮಾತನಾಡಿ ಕ್ರೀಡಾಪಟುಗಳಿಗೆ ಇಂತಿಷ್ಟು ಮಳಿಗೆಗಳು ಮೀಸಲಿಡಬೇಕು ಎಂದರು.

ಉಪಾಧ್ಯಕ್ಷ ಎಂ.ಆರ್. ಆನಂದ್, ಪ್ರಧಾನ ಕಾರ್ಯದರ್ಶಿ ಸಿ.ಎಚ್. ಸುನೀಲ್ ಕುಮಾರ್, ಖಜಾಂಚಿ ಶಬ್ರೀಶ್, ಸಹ ಕಾರ್ಯದರ್ಶಿ ಭರತ್, ಮಧು, ಶ್ರೀನಿವಾಸ್, ಬಿ.ವಿಕ್ರಂ, ನವೀನ್, ಸಂಜಯ್, ಆತ್ಮಾನಂದ್ ಇತರರು ಭಾಗವಹಿಸಿದ್ದರು.

- - - -8ಎಚ್‍ಆರ್‍ಆರ್1-2:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ
ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?