ಕನ್ನಡಪ್ರಭ ವಾರ್ತೆ ಉಡುಪಿ
ಬೆಳಗ್ಗೆ ಬಾರ್ಕೂರು ಸಮೀಪದ ಕಚ್ಚೂರು ಶ್ರೀ ಮಾಲ್ತೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಗ್ಡೆ, ಅಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ಗೋಕುಲ್ ದಾಸ್, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ, ಪ್ರವೀಣ್ ಬಾರ್ಕೂರು, ಶಿವರಾಜ್ ಮಲ್ಲಾರ್ ಮೊದಲಾದವರು ಉಪಸ್ಥಿತರಿದ್ದರು.
ನಂತರ ಕೆಮ್ಮಣ್ಣು ಗ್ರಾಮದ ಹಂಪನಕಟ್ಟೆ, ನೇಜಾರು ಮತ್ತಿತರ ಭಾಗದಲ್ಲಿ ಮತ ಪ್ರಚಾರ ನಡೆಸಿ ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.ಮಧ್ಯಾಹ್ನ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ವಿಶ್ವವಿದ್ಯಾನಿಲಯ)ದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿನ ಉಪಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ನಡೆಸಿದರು. ನಂತರ ಕಸ್ತೂರ್ಬಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಉದ್ಯೋಗಿ ಸಿಬ್ಬಂದಿಯನ್ನು ಕಂಡು ಅಭಿವೃದ್ಧಿಯ ಬಗೆಗಿನ ತಮ್ಮ ಆಶಯಗಳನ್ನು ಹಂಚಿಕೊಂಡು ಮತಯಾಚಿಸಿದರು.