ಜಯತೀರ್ಥರ ಆರಾಧಾನಾ ಮಹೋತ್ಸವ

KannadaprabhaNewsNetwork |  
Published : Jul 16, 2025, 12:45 AM IST
15ಕೆಪಿಎಲ್27 ಕೊಪ್ಪಳ ನಗರದ  ಶ್ರೀ ರಾಘವೇಂದ್ರಸ್ವಾಮೀಜಿ ಮಠದಲ್ಲಿ  ಶ್ರೀ ಜಯತೀರ್ಥರ ಆರಾಧನಾ ಮಹೋತ್ಸವ ನಿಮಿತ್ಯ ರಥೋತ್ಸವ ವಿಜೃಂಭಣೆಯಿಂದ  ಜರುಗಿತು.  | Kannada Prabha

ಸಾರಾಂಶ

ನೂರಾರು ಸಂಖ್ಯೆಯ ಭಕ್ತರು ಕೊಪ್ಪಳದ ರಾಯರ ಮಠಕ್ಕೆ ಭೇಟಿ ನೀಡಿ, ಬೃಂದಾವನದ ದರ್ಶನ ಪಡೆದರು. ಮಠದ ವತಿಯಿಂದ ಸುಪ್ರಭಾತ, ಜಯತೀರ್ಥ ಸ್ತುತಿ ಪಾರಾಯಣ, ಅಷ್ತೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ ಅಲಂಕಾರ, ತೀರ್ಥಪ್ರಸಾದ ಕಾರ್ಯಕ್ರಮ ನಡೆದವು.

ಕೊಪ್ಪಳ:

ನಗರದ ಶ್ರೀರಾಘವೇಂದ್ರ ಸ್ವಾಮೀಜಿಗಳ ಮಠದಲ್ಲಿ ಶ್ರೀಜಯತೀರ್ಥರ (ಟೀಕಾರಾಯರ) ಆರಾಧನಾ ಮಹೋತ್ಸವದ ನಿಮಿತ್ತ ಮಂಗಳವಾರ ವಿವಿಧ ಧಾರ್ಮಿಕ ಹಾಗೂ ಸಂಗೀತ ಕಾರ್ಯಕ್ರಮ ನಡೆದವು. ಮಧ್ಯಾಹ್ನ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಬೆಳಗ್ಗೆ ನೂರಾರು ಸಂಖ್ಯೆಯ ಭಕ್ತರು ರಾಯರ ಮಠಕ್ಕೆ ಭೇಟಿ ನೀಡಿ, ಬೃಂದಾವನದ ದರ್ಶನ ಪಡೆದರು. ಮಠದ ವತಿಯಿಂದ ಸುಪ್ರಭಾತ, ಜಯತೀರ್ಥ ಸ್ತುತಿ ಪಾರಾಯಣ, ಅಷ್ತೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ ಅಲಂಕಾರ, ತೀರ್ಥಪ್ರಸಾದ ಕಾರ್ಯಕ್ರಮ ನಡೆದವು.ರಾಯರ ಬೃಂದಾವನ ಹಾಗೂ ಎದುರು ಇರುವ ಆಂಜನೇಯನ ದೇವಸ್ಥಾನದಲ್ಲಿ ತರಹೇವಾರಿ ಹೂಗಳಿಂದ ಹೂವಿನ ಅಲಂಕಾರ ಮಾಡಲಾಗಿತ್ತು. ಮಠದ ಪ್ರಧಾನ ಅರ್ಚಕ ಪಂಡಿತ್‌ ರಘುಪ್ರೇಮಾಚಾರ್ ಮುಳಗುಂದ ಅವರು ಪೂಜಾ ಕೈಂಕರ್ಯ ನೆರವೇರಿಸಿದರು. ವ್ಯವಸ್ಥಾಪಕ ಜಗನ್ನಾಥ ಹುನಗುಂದ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಸಂಜೆ ಪಂಡಿತ್‌ ಹನುಮೇಶಚಾರ್ಯ ಗಂಗೂರ ಅವರಿಂದ ಉಪನ್ಯಾಸ ಮತ್ತು ಆಕಾಶವಾಣಿ ಕಲಾವಿದೆ ಕಲಬುರಗಿಯ ಶ್ರುತಿ ವಿಜಯೀಂದ್ರ ಸಗರ ಅವರ ಭಕ್ತಿ ಸಂಗೀತ ಜರುಗಿದವು. ರಾತ್ರಿ ಕೂಡ ಭಕ್ತರು ಮಠಕ್ಕೆ ಭೇಟಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ