ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದಿಂದ ಯೋಜನೆಯಡಿ ರೈತರು ಭೂ ಮಾಲೀಕರ ಸಹಕಾರ ಸಂಘ ಸ್ಥಾಪಿಸಿ, ಅದರ ಮೂಲಕ ಆಧುನಿಕ ಯಂತ್ರಗಳನ್ನು ಬಳಸಿ ಸಾಮೂಹಿಕ ಕೃಷಿ ಪದ್ಧತಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
ಮಾಜಿ ಶಾಸಕರು ರೈತರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುವುದು ಸರಿಯಲ್ಲ. ಫಲಾನುಭವಿ ಆಯ್ಕೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಸಾಬೀತು ಪಡಿಸಿದರೆ ಬಹಿರಂಗ ಕ್ಷಮೆಯಾಚಿಸುತ್ತೇವೆ. ಇಲ್ಲದಿದ್ದರೆ ಅವರು ಕ್ಷಮೆಯಾಚಿಸಬೇಕೆಂದು ತಿಳಿಸಿದರು.ಟಿಎಪಿಸಿಎಂಎಸ್ ನಿರ್ದೇಶಕ ದೇವರಾಜು, ಲಿಂಗರಾಜು ಮಾತನಾಡಿ, ವಿಪಕ್ಷಗಳು ವೈಯುಕ್ತಿಕ ಟೀಕೆ, ಸುಳ್ಳು ಹೇಳುವುದು, ಬಾಯಿಗೆ ಬಂದಂತೆ ಮಾತನಾಡುವುದು ಮಾಜಿ ಶಾಸಕರಿಗೆ ಶೋಭೆ ತರುವುದಿಲ್ಲ. ಡಾ.ಅನ್ನದಾನಿ ಅವರು ಗೌರವಯುತವಾಗಿ ಮಾತನಾಡುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ, ಕೆಡಿಪಿ ಸದಸ್ಯ ಶಶಿ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕನಕಭವನ ನಿರ್ಮಾಣಕ್ಕೆ ಅನುದಾನ ನೀಡಿದ್ದರು. ನಿವೇಶನ ಗೊಂದಲದಿಂದ ಪಿ.ಎಂ.ನರೇಂದ್ರಸ್ವಾಮಿ ಅವರು ಕಾಮಗಾರಿ ಆರಂಭಿಸಲು ಸಾಧ್ಯವಾಗಿರಲಿಲ್ಲ. ನಂತರ ಬಂದ ಅನ್ನದಾನಿ ವಿಧಾನಸಭೆ ಚುನಾವಣೆ ಸಮೀಪಿಸುವಾಗ ಕಾಮಗಾರಿಗೆ ಚಾಲನೆ ನೀಡಿದ ಪರಿಣಾಮ ಅರ್ಧಕ್ಕೆ ನಿಂತಿದೆ. ಭವನ ನಿರ್ಮಾಣಕ್ಕೆ ಹಲವು ನಾಯಕರಿಂದ ದೇಣಿಗೆ ಸಂಗ್ರಹಿಸಲಾಗಿದೆ. ಇದರ ಲೆಕ್ಕ ನೀಡಬೇಕೆಂದು ಆಗ್ರಹಿಸಿದರು.
ಸುದ್ಧಿಗೋಷ್ಠಿಯಲ್ಲಿ ಮನ್ಮುಲ್ ನಿರ್ದೇಶಕ ಕೃಷ್ಣೇಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ಚೌಡಯ್ಯ, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಶಿವಮಾದೇಗೌಡ, ಅಯ್ಯೂಬ್ ಪಾಷಾ, ಕೃಷ್ಣಮೂರ್ತಿ, ಚಂದ್ರಕುಮಾರ್, ದಿಲೀಪ್ಕುಮಾರ್, ಶ್ರೀಕಾಂತ್, ರಾಜೇಶ್, ಅಜೀಜ್ಪಾಷ, ಕರಿಯಪ್ಪ, ವೆಂಕಟರಾಜು, ಗುರುಸ್ವಾಮಿ ಸೇರಿದಂತೆ ಇತರರು ಇದ್ದರು.