ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿವರ್ಧನೆಯ ಗುರಿ: ಸೂರಜ ನಾಯ್ಕ

KannadaprabhaNewsNetwork |  
Published : Feb 14, 2026, 03:00 AM IST
ಸುದ್ದಿಗೋಷ್ಠಿಯಲ್ಲಿ ಸೂರಜ ನಾಯ್ಕ ಮಾತನಾಡಿದರು. | Kannada Prabha

ಸಾರಾಂಶ

ಮುಂದಿನ ಒಂದು ತಿಂಗಳು ಸಂಘಟನಾ ಪರ್ವವಾಗಿ ಜಿಲ್ಲಾದ್ಯಂತ ಪ್ರತಿ ತಾಲೂಕಿಗೆ ಪ್ರವಾಸ ಕೈಗೊಂಡು ಪಕ್ಷದ ಶಕ್ತಿಯನ್ನು ಪುನಶ್ಚೇತನಗೊಳಿಸಿ ಸಂಚಲನ ಮೂಡಿಸುವ ಪ್ರಯತ್ನ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಕುಮಟಾ

ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡರ ನಿರ್ದೇಶನದಂತೆ, ಕುಮಾರಸ್ವಾಮಿಯವರು ನನ್ನನ್ನು ಜಿಲ್ಲಾಧ್ಯಕ್ಷನಾಗಿ ನೇಮಕ ಮಾಡಿದ್ದಾರೆ. ಮುಂದಿನ ಒಂದು ತಿಂಗಳು ಸಂಘಟನಾ ಪರ್ವವಾಗಿ ಜಿಲ್ಲಾದ್ಯಂತ ಪ್ರತಿ ತಾಲೂಕಿಗೆ ಪ್ರವಾಸ ಕೈಗೊಂಡು ಪಕ್ಷದ ಶಕ್ತಿಯನ್ನು ಪುನಶ್ಚೇತನಗೊಳಿಸಿ ಸಂಚಲನ ಮೂಡಿಸುವ ಪ್ರಯತ್ನ ನಡೆಯಲಿದೆ ಎಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸೂರಜ ನಾಯ್ಕ ಹೇಳಿದರು.

ಪಟ್ಟಣದ ನಾದಶ್ರೀ ಕಲಾಕೇಂದ್ರದಲ್ಲಿ ಜಿಲ್ಲಾಮಟ್ಟದ ಪಕ್ಷದ ಪ್ರಮುಖರ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನಾ ಪರ್ವದ ಬಳಿಕ ಪದಗ್ರಹಣ ಸಮಾರಂಭ ಆಯೋಜಿಸಲಾಗುವುದು ಎಂದರು.

ಜೆಡಿಎಸ್ ರಜತ ಸಂಭ್ರಮ ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಕ್ಷನಾಗಿ ನೇಮಕಗೊಂಡಿದ್ದು ವಿಶೇಷ. ಜಿಲ್ಲೆಯಲ್ಲಿ ಕಾರವಾರ, ಕುಮಟಾ, ಭಟ್ಕಳ, ಶಿರಸಿ, ಹಳಿಯಾಳ ಮುಂತಾದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವಿನ ಹತ್ತಿರ ಬಂದು ಅಲ್ಪ ಅಂತರದಿಂದ ಸೋತಿದೆ ಅಷ್ಟೇ. ೨೦೨೮ರ ರಾಜ್ಯ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಹೆಚ್ಚಿಸಿಕೊಂಡು ಕಾರ್ಯಕರ್ತರಲ್ಲಿ ಶಕ್ತಿ ತುಂಬಬೇಕಿದೆ.

ಉಳಿದಂತೆ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ, ಶರಾವತಿ ಪಂಪ್ಡ್‌ ಸ್ಟೋರೇಜ್, ಅಘನಾಶಿನಿ-ಬೇಡ್ತಿ ನದಿ ತಿರುವು ಯೋಜನೆ ಅನುಷ್ಠಾನದ ವಿರುದ್ಧ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಹೆದ್ದಾರಿ ಸಮಸ್ಯೆಗಳ ಕುರಿತು ಹೋರಾಟ ನಡೆಸಲಾಗುವುದು. ಪರಿಸರ ಪೂರಕ ಯೋಜನೆ, ಉದ್ಯಮ ಬರಬೇಕು ಎಂಬ ನಿಟ್ಟಿನಲ್ಲಿ ಹೋರಾಡಲಿದ್ದೇವೆ. ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ತೋರಿಸುತ್ತೇವೆ. ರೈತರು, ಮೀನುಗಾರರು, ಯುವಜನತೆಯ ಸಬಲೀಕರಣಕ್ಕೆ ಕೆಲಸ ಮಾಡುತ್ತೇವೆ. ಜೆಡಿಎಸ್‌ನ್ನು ಸಮೃದ್ಧವಾಗಿ ಬೆಳೆಸಲು ಮತ್ತು ಎನ್‌ಡಿಎ ಅಧಿಕಾರಕ್ಕೆ ತರಲು ಪಕ್ಷ ಕಟ್ಟುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಪೈ, ತಾಲೂಕಾಧ್ಯಕ್ಷ ಸಿ.ಜಿ. ಹೆಗಡೆ, ಹೊನ್ನಾವರ ತಾಲೂಕಾಧ್ಯಕ್ಷ ಟಿ.ಟಿ. ನಾಯ್ಕ, ರಾಜೇಶ್ವರಿ ಹೆಗಡೆ, ಸತೀಶ ಹೆಗಡೆ ಸಿದ್ದಾಪುರ, ಅಜಿತ ಜೊಯಿಡಾ, ಹರೀಶ ಗೌಡ ಅಂಕೋಲಾ, ಕುಸುಮಾ ಗೌಡ, ಮಂಜುನಾಥ ಗೌಡ, ಪಿ.ಎನ್. ನಾಥೋಡ, ದತ್ತ ಪಟಗಾರ, ಜಿಲ್ಲೆಯ ಎಲ್ಲ ತಾಲೂಕುಗಳ ಜೆಡಿಎಸ್ ಪ್ರಮುಖರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತನ ಹಂತಕ್ಕೆ ತಲುಪಿದ ರಾಜ್ಯ ಸರ್ಕಾರ: ಯತ್ನಾಳ್‌
ನೊಂದವರ ಸೇವೆ ಮಾಡಲು ಯುವಜನರು ಮುಂದೆ ಬರಲಿ