ಕೋಡಾಲ ಡೈರಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರಾಮೇಗೌಡ ಆಯ್ಕೆ

KannadaprabhaNewsNetwork |  
Published : Jun 01, 2025, 02:27 AM IST
31ಕೆಎಂಎನ್ ಡಿ17 | Kannada Prabha

ಸಾರಾಂಶ

ಡೈರಿಗಳು ಅಭಿವೃದ್ಧಿ ಹೊಂದಲು ರೈತರು ಗುಣಮಟ್ಟದ ಹಾಲು ಪೂರೈಸಬೇಕು. ಕಾರ್‍ಯದರ್ಶಿಗಳು-ರೈತರು ಜತೆಗೂಡಿ ಕೆಲಸ ಮಾಡಬೇಕು. ಆಡಳಿತ ಮಂಡಳಿ ಮತ್ತು ಷೇರುದಾರು ನನ್ನನ್ನು ಆಹ್ವಾನಿಸಿ ಪ್ರೀತಿಯಿಂದ ಅಭಿನಂದಿಸುವ ಮೂಲಕ ಜವಾಬ್ದಾರಿ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುತ್ತೇನೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಕೋಡಾಲ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರಾಮೇಗೌಡ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಹಿಂದಿನ ಅಧ್ಯಕ್ಷ ದೇವರಾಜು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಾಮೇಗೌಡ ಹೊರತು ಪಡಿಸಿ ಬೇರೆ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಆರ್.ನಿರ್ಮಲಾ ಘೋಷಿಸಿದರು.

ಸಂಘದ ನೂತನ ಅಧ್ಯಕ್ಷ ರಾಮೇಗೌಡರನ್ನು ಎಲ್ಲಾ ನಿರ್ದೇಶಕರು, ಮುಖಂಡರು ಅಭಿನಂದಿಸಿದರು. ಇದೇ ವೇಳೆ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್, ಚಿನಕುರಳಿ ಸೊಸೈಟಿ ಅಧ್ಯಕ್ಷ ಸಿ.ಎಸ್.ಗೋಪಾಲಗೌಡ, ಪಿಎಲ್‌ಡಿ ನಿರ್ದೇಶಕ ಕುಮಾರ್ ಅವರನ್ನು ಡೈರಿ ವತಿಯಿಂದ ಅಭಿನಂದಿಸಲಾಯಿತು.

ಈ ವೇಳೆ ಸಿ.ಶಿವಕುಮಾರ್ ಮಾತನಾಡಿ, ಡೈರಿಗಳು ಅಭಿವೃದ್ಧಿ ಹೊಂದಲು ರೈತರು ಗುಣಮಟ್ಟದ ಹಾಲು ಪೂರೈಸಬೇಕು. ಕಾರ್‍ಯದರ್ಶಿಗಳು-ರೈತರು ಜತೆಗೂಡಿ ಕೆಲಸ ಮಾಡಬೇಕು. ಆಡಳಿತ ಮಂಡಳಿ ಮತ್ತು ಷೇರುದಾರು ನನ್ನನ್ನು ಆಹ್ವಾನಿಸಿ ಪ್ರೀತಿಯಿಂದ ಅಭಿನಂದಿಸುವ ಮೂಲಕ ಜವಾಬ್ದಾರಿ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಒಕ್ಕೂಟದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.

ಈ ವೇಳೆ ಗ್ರಾಪಂ ಅಧ್ಯಕ್ಷ ಕೆ.ಕೆ.ಪ್ರಕಾಶ್, ಉಪಾಧ್ಯಕ್ಷ ನವೀನ ಯೋಗಶೆಟ್ಟಿ, ಗ್ರಾಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ, ಡೇರಿ ಉಪಾಧ್ಯಕ್ಷೆ ಸುಜಾತ, ನಿರ್ದೇಶಕರಾದ ಕೆ.ಕುಮಾರ್, ಕೆ.ಎನ್.ಲೋಕೇಶ್, ಕುಮಾರ, ಕೆ.ಸ್ವಾಮೀಗೌಡ, ರಾಮಗೂಳಿಗೌಡ, ಶಿವರಾಜು, ದಳವಾಯಿಗೌಡ, ಲೋಕಾಮಣಿ, ನರಸಿಂಹೇಗೌಡ, ಕಾರ್ಯದರ್ಶಿ ಶಂಕರ್, ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕ ಕರೀಗೌಡ, ಉಪನ್ಯಾಸಕ ಸುಧಾಕರ್, ವಕೀಲ ರಾಮೇಗೌಡ, ಶಿಂಢಬೋಗನಹಳ್ಳಿ ನಾಗಣ್ಣ, ಬೆಟ್ಟೇಗೌಡ ಸೇರಿದಂತೆ ಗ್ರಾಮಸ್ಥರು, ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ