ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಮ್ಮ ನಿವಾಸದಲ್ಲಿ ನೂತನವಾಗಿ ಆಯ್ಕೆಯಾದ ಜೆಡಿಎಸ್ ತಾಲೂಕು ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿ, ಅನೇಕ ಕಾರಣಗಳಿಂದ ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು. ಮತ್ತೆ ಅಂತಹ ತಪ್ಪುಗಳು ಆಗದ ರೀತಿ ನೋಡಿಕೊಂಡು ಪಕ್ಷದ ಬಲವರ್ದನೆಗೆ ಎಲ್ಲರೂ ಮುಂದಾಗಬೇಕು ಎಂದರು.
ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದು ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದೀರಿ. ಪಕ್ಷ ಹಳೆಯದಾದರೂ ಸಹ ಪಕ್ಷದಲ್ಲಿ ಹಲವು ಸ್ಥಾನ ಮಾನಗಳನ್ನು ಅಧಿಕೃತವಾಗಿ ಕುಮಾರಣ್ಣ ಅವರ ಮಾರ್ಗದರ್ಶನದಲ್ಲಿ ಆಯ್ಕೆ ಮಾಡಲಾಗಿದೆ. ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಗೆ ಜೊತೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ 3ರಿಂದ 4 ಸ್ಥಾನ ನೀಡುವುದಾಗಿ ಮಾತುಕತೆ ನಡೆಸಲಾಗಿದೆ. ಮಂಡ್ಯ, ಹಾಸನ, ಕೋಲಾರ, ತುಮಕೂರು ಅಥವಾ ದೊಡ್ಡಬಳ್ಳಾಪುರ ನೀಡುವುದಾಗಿ ಚರ್ಚಿಸಲಾಗಿದೆ. ಬಹುತೇಕ ಮಂಡ್ಯ ಜಿಲ್ಲೆಯನ್ನು ಜಿಡಿಎಸ್ ಪಕ್ಷಕ್ಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.