ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಮಾಜಿ ಶಾಸಕರಾದ ಎ.ಮಂಜುನಾಥ್ ಮತ್ತು ಡಾ.ಶ್ರೀನಿವಾಸಮೂರ್ತಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ಮನವಿ ರದ್ದುಗೊಳಿಸಿ ಮತ್ತು ವಜಾ ಮಾಡಿ ನೋಟಿಸ್ ಅನ್ನು ಮುಕ್ತಾಯಗೊಳಿಸಬೇಕೆಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಶ್ರೀನಿವಾಸಮೂರ್ತಿ, ಸೋಲೂರು ಗ್ರಾಪಂಗೆ ಸದಸ್ಯರಾಗಿ ರಾಘವೇಂದ್ರ ಮೂರು ಬಾರಿ ಆಯ್ಕೆಯಾಗಿದ್ದಾರೆ. ಸೋಲೂರು ಸುತ್ತಮುತ್ತ ಸಮಾಜ ಸೇವೆಯಲ್ಲಿ ನಿರತರಾಗಿದ್ದು, ಎಲ್ಲರ ಕಷ್ಟಗಳಿಗೆ ಸ್ಪಂದಿಸುವಂತಹ ಮನಸ್ಸುಳ್ಳವರಾಗಿದ್ದಾರೆ. ಅವರು ಕೈಗೊಳ್ಳುತ್ತಿರುವ ಸಾಮಾಜಿಕ ಕೆಲಸ ಕಾರ್ಯಗಳನ್ನು ಸಹಿಸದ ಕೆಲವೊಂದು ಸ್ಥಳೀಯ ರಾಜಕೀಯ ಪ್ರೇರಿತ ವ್ಯಕ್ತಿಗಳು ಇವರ ವಿರುದ್ಧ ಸುಳ್ಳು ಆಪಾದನೆ ಎಸಗಿ ದೂರು ನೀಡುವುದು ಮತ್ತು ಅವರನ್ನು ಅನೇಕ ವರ್ಷಗಳಿಂದ ತೇಜೋವಧೆ ಮಾಡುತ್ತಿದ್ದಾರೆ ಎಂದು ದೂರಿದರು.ಸದಸ್ಯ ರಾಘವೇಂದ್ರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಗ್ರಾಮದಲ್ಲಿ ಗುಂಪುಗಾರಿಕೆ ಮಾಡುವುದು ಗಲಾಟೆ ಮಾಡಿಸುವುದು ಸಹಚರರೊಂದಿಗೆ ಸೇರಿಕೊಂಡು ಬೆದರಿಕೆ ಹಾಕುವುದು ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಧಕ್ಕೆ ಮತ್ತು ನಷ್ಟ ಉಂಟು ಮಾಡುತ್ತಿದ್ದಾರೆ ಎಂಬುದೆಲ್ಲ ಸುಳ್ಳು ಎಂದು ದೂರಿದರು.
ಈ ಹಿಂದೆ ರಾಘವೇಂದ್ರರ ಮೇಲೆ ಅನೇಕ ದೂರುಗಳು ಬಂದಾಗ ಅಂತಹ ಪ್ರಕರಣಗಳು ಈಗಾಗಲೇ ನ್ಯಾಯಾಲಯದಿಂದ ವಜಾಗೊಂಡಿವೆ. ಈಗಿನ ಎಲ್ಲಾ ಆರೋಪ ಮತ್ತು ಆಪಾದನೆಗಳು ಸುಖಾ ಸುಮ್ಮನೆ ಅವರನ್ನು ತೇಜೋವಧೆ ಮಾಡಿ ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಹೂಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ಟಿ.ತಿಮ್ಮರಾಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಮುಖಂಡರಾದ ಗೋವಿಂದರಾಜು, ಅಂಜನಾಪುರ ವಾಸು, ದೊಡ್ಡಿ ಉಮೇಶ್ ಮತ್ತಿತರರಿದ್ದರು.
ಕಾಂಗ್ರೆಸ್ ನಾಯಕರು ಜೆಡಿಎಸ್ ಮುಖಂಡರಿಗೆ ಪೊಲೀಸರಿಂದ ಕಿರುಕುಳ ಕೊಡಿಸುವ ದ್ವೇಷದ ರಾಜಕಾರಣ ನಿಲ್ಲಿಸಬೇಕು. ಅಧಿಕಾರ ದುರ್ಬಳಸಿಕೊಂಡು ಗಡಿಪಾರು ಮಾಡಿಸುವ ಮಟ್ಟಿಗೆ ದ್ವೇಷದ ಸಾಧಿಸುತ್ತಿದ್ದಾರೆ. ಅಧಿಕಾರ ಶಾಶ್ವತ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಸೋಲೂರು ಗ್ರಾಪಂ ಸದಸ್ಯ ರಾಘವೇಂದ್ರ ಗಡಿಪಾರು ಆದೇಶ ರದ್ದು ಪಡಿಸುವಂತೆ ಎಸ್ಪಿ ಅವರನ್ನು ಮನವಿ ಮಾಡಿದ್ದು, ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ.
6ಕೆಆರ್ ಎಂಎನ್ 1.ಜೆಪಿಜಿ