ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದಾಗಿ ತೀವ್ರ ಬರಗಾಲ ಆವರಿಸಿದೆ. ರಾಜ್ಯದಲ್ಲಿ ಒಟ್ಟು 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲ 7 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಮಳೆ ಬಾರದೇ ಮೆಕ್ಕೆಜೋಳ, ರಾಗಿ, ಜೋಳ, ಭತ್ತದ ಬೆಳೆ ಬಹುತೇಕ ನಾಶವಾಗಿದೆ. ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಇಷ್ಟಾದರೂ ರಾಜ್ಯ ಸರ್ಕಾರ ಬರ ಪರಿಹಾರವನ್ನು ನೀಡಿಲ್ಲ ಎಂದು ಮುಖಂಡರು ಆರೋಪಿಸಿದರು.
ಬರ ಹಿನ್ನೆಲೆ ಕುಡಿಯುವ ನೀರಿಗೆ ಹಾಹಾಕಾರವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ತಂಡ ಬರಪೀಡಿತ ಪ್ರದೇಶಗಳಲ್ಲಿ ನಷ್ಟದ ಬಗ್ಗೆ ಅಧ್ಯಯನ ನಡೆಸಿ, ವರದಿ ನೀಡಿದ್ದರೂ ಇದುವರೆಗೆ ಬರ ಪರಿಹಾರದ ಹಣ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ದನ, ಕರು, ಜಾನುವಾರುಗಳು ನೀರು ಹಾಗೂ ಮೇವಿನ ಕೊರತೆಯಿಂದಾಗಿ ಸಾವು-ಬದುಕಿನ ಹೋರಾಟದಲ್ಲಿ ನರಳುತ್ತಿವೆ. ಸಾಲ ಮಾಡಿ ಬಿತ್ತಿದ ಬೆಳೆಗಳು ನಾಶವಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕೂಲಿ ಕಾರ್ಮಿಕರು ಬದುಕಿಗಾಗಿ ಬೇರೆ ಪ್ರದೇಶಗಳಿಗೆ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳ ತಂಡ ಬರಪೀಡಿತ ಪ್ರದೇಶಗಳಲ್ಲಿ ನಷ್ಟದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಆದರೂ, ಇದುವರೆಗೆ ಬರ ಪರಿಹಾರದ ಹಣ ಬಿಡುಗಡೆಯಾಗಿಲ್ಲ ಎಂದು ದೂರಿದರು.
- - - ಬಾಕ್ಸ್ ಬೇಡಿಕೆಗಳೇನು? - ರೈತರಿಗೆ ಕನಿಷ್ಠ 7 ಗಂಟೆ ವಿದ್ಯುತ್ ಒದಗಿಸಬೇಕು
- ಕುಡಿಯುವ ನೀರಿನ ಬವಣೆ ನೀಗಿಸಲು ಕೊಳವೆಬಾವಿ ತೋಡಿಸಲು ಅನುದಾನ ಬಿಡುಗಡೆ ಮಾಡಬೇಕು
- ಬೆಳೆ ವಿಮೆ ಪರಿಹಾರದ ಹಣವನ್ನು ಕೂಡಲೇ ರೈತರಿಗೆ ನೀಡಬೇಕು
- - - -22ಎಸ್ಎಂಜಿಕೆಪಿ04: