ಕೆಂಪೇಗೌಡರ ಪ್ರತಿಮೆ ತೆರವು ಮಾಡದಂತೆ ಜೆಡಿಎಸ್‌ ಪ್ರತಿಭಟನೆ

KannadaprabhaNewsNetwork |  
Published : Oct 16, 2025, 02:00 AM IST
ಮಾಗಡಿ ಪಟ್ಟಣದ ಕೆಂಪೇಗೌಡ ಪ್ರತಿಮೆ ಮುಂಭಾಗದಲ್ಲಿ ಮಂಗಳವಾರ ಜೆಡಿಎಸ್ ಪಕ್ಷದ ವತಿಯಿಂದ ಕೆಂಪೇಗೌಡ ಪ್ರತಿಮೆಯನ್ನು ಸ್ಥಳಾಂತರ ವಿರೋದಿಸಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಮಾಗಡಿ: ಬಡವರಿಗೆ ಅನುಕೂಲವಾಗುವ ಸರ್ಕಾರಿ ಆಸ್ಪತ್ರೆಯನ್ನು ಶಾಸಕ ಬಾಲಕೃಷ್ಣ ನಿರ್ಮಾಣ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ನಾವೆಂದೂ ಅಭಿವೃದ್ಧಿಗೆ ವಿರೋಧ ಮಾಡುವುದಿಲ್ಲ. ಆದರೆ, ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರ ಮಾಡದೆ ಅಭಿವೃದ್ಧಿ ಮಾಡಬೇಕು ಎಂದು ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಒತ್ತಾಯಿಸಿದರು.

ಮಾಗಡಿ: ಬಡವರಿಗೆ ಅನುಕೂಲವಾಗುವ ಸರ್ಕಾರಿ ಆಸ್ಪತ್ರೆಯನ್ನು ಶಾಸಕ ಬಾಲಕೃಷ್ಣ ನಿರ್ಮಾಣ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ನಾವೆಂದೂ ಅಭಿವೃದ್ಧಿಗೆ ವಿರೋಧ ಮಾಡುವುದಿಲ್ಲ. ಆದರೆ, ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರ ಮಾಡದೆ ಅಭಿವೃದ್ಧಿ ಮಾಡಬೇಕು ಎಂದು ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್ ಒತ್ತಾಯಿಸಿದರು.

ಪಟ್ಟಣದ ಕೆಂಪೇಗೌಡ ಪ್ರತಿಮೆ ಮುಂಭಾಗದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಾವು ಅಭಿವೃದ್ಧಿ ವಿಚಾರವಾಗಿ ವಿರೋಧ ಮಾಡುವುದಿಲ್ಲ. ಈಗ ಇರುವ ಜಾಗ ಸಾರ್ವಜನಿಕರಿಗೆ ಅನುಕೂಲವಾಗುತ್ತಿದ್ದು, ವಿಶ್ರಾಂತಿ ಪಡೆಯಲು ನೂರಾರು ಸಾರ್ವಜನಿಕರು ಇಲ್ಲಿಗೆ ಆಗಮಿಸುತ್ತಾರೆ. ಕೆಂಪೇಗೌಡರ ನಾಡಾಗಿರುವ ಮಾಗಡಿಯಲ್ಲಿ ಕೆಂಪೇಗೌಡರ ಪ್ರತಿಮೆಯನ್ನು ತೆರವುಗೊಳಿಸುವುದು ಏಕೆ? ಶಾಸಕ ಬಾಲಕೃಷ್ಣ ಈಗ ಇರುವ ಜಾಗವನ್ನು ಪಾರ್ಕಿಂಗ್ ಹಾಗೂ ಸುಂದರ ಉದ್ಯಾನವನವಾಗಿ ಪರಿವರ್ತನೆ ಮಾಡಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲಿ ಬಡವರಿಗೆ ಅನುಕೂಲವಾಗುತ್ತದೆ. ಅದನ್ನು ಬಿಟ್ಟು ಕೆಂಪೇಗೌಡರ ಪ್ರತಿಮೆಯನ್ನು ತೆರವು ಮಾಡಿ ಯಾವ ಜಾಗದಲ್ಲಿ ಮತ್ತೆ ಇಡುತ್ತಾರೆ ಎಂಬುದನ್ನು ತಿಳಿಸಿಲ್ಲ. ಏಕಾಏಕಿ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ. ಕೆಂಪೇಗೌಡರ ಪ್ರತಿಮೆಯನ್ನು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಸ್ವಂತ ಹಣದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿದ್ದು ಅವರ ಜೊತೆ ಚರ್ಚೆ ಮಾಡಿ ತೆರವಿನ ಬಗ್ಗೆ ನಿರ್ಧಾರ ಮಾಡಬೇಕಿತ್ತು. ಈಗ ಯಾರ ಮಾತು ಕೇಳದೆ ಕೆಂಪೇಗೌಡರ ಪ್ರತಿಮೆ ತೆರವು ಮಾಡುತ್ತೇವೆ ಎಂದು ಹೇಳುತ್ತಿರುವುದು ಶಾಸಕರಿಗೆ ಸರಿ ಬರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮತ್ತೊಮ್ಮೆ ಸಾರ್ವಜನಿಕರ ಸಭೆ ಕರೆಯಿರಿ:

ಪುರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಬಾಲಕೃಷ್ಣಗೆ ನಾನು ಕೆಂಪೇಗೌಡ ಪ್ರತಿಮೆಯನ್ನು ಏಕಾಏಕಿ ಬೇರೆಡೆ ಸ್ಥಳಾಂತರ ಮಾಡಬೇಡಿ ಎಚ್.ಎಂ.ಕೃಷ್ಣಮೂರ್ತಿ ಅವರೊಂದಿಗೆ ಚರ್ಚಿಸಿ ನಂತರ ಸಾಧಕ ಬಾಧಕಗಳ ಬಗ್ಗೆ ಮಾತನಾಡೋಣ. ಶಾಸಕ ಬಾಲಕೃಷ್ಣ ಏಕಾಏಕಿ ತೆರವು ಮಾಡಲು ಮುಂದಾಗಿದ್ದು, ಈಗಲೂ ಸಾರ್ವಜನಿಕರ ಸಭೆಯನ್ನು ಕರೆದು ಜನಗಳ ಅಭಿಪ್ರಾಯವನ್ನು ಸಂಗ್ರಹಿಸಿ ಅಭಿವೃದ್ಧಿ ಕಾರ್ಯ ಮಾಡಲಿ. ಯಾವುದೇ ಕಾರಣಕ್ಕೂ ಕೆಂಪೇಗೌಡರ ಪ್ರತಿಮೆ ಸ್ಥಳಾಂತರಕ್ಕೆ ನಮ್ಮ ವಿರೋಧವಿದೆ ಎಂದು ಮಂಜುನಾಥ್ ಹೇಳಿದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಬಾಲಕೃಷ್ಣ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಕೆಂಪೇಗೌಡರ ಪ್ರತಿಮೆ ಯಾರಿಗೂ ತೊಂದರೆ ಕೊಡುತ್ತಿಲ್ಲ. ಈ ಹಿಂದೆ ಕೂಡ ಎನ್ಇಎಸ್ ವೃತದಲ್ಲಿ ಗಾಂಧಿ‌ ಪುತ್ಥಳಿಯನ್ನು ವಿರೋಧದ ನಡುವೆಯೂ ತೆರವು ಮಾಡಿದರು. ಈಗ ಕೆಂಪೇಗೌಡರ ಪ್ರತಿಮೆ ತೆರವು ಮಾಡಿ ನಂತರ ಅಭಿವೃದ್ಧಿ ಮಾಡದೆ ಹಾಗೆ ಬಿಡುತ್ತಾರೆ. ಯಾವುದೇ ಕಾರಣಕ್ಕೂ ಈ ಪ್ರತಿಮೆ ಸ್ಥಳಾಂತರ ಮಾಡಲು ಬಿಡುವುದಿಲ್ಲ ಎಂದು ಹೇಳಿದರು.

ಗ್ರಾಪಂ ಸದಸ್ಯ ಮರೂರು ಸಾಗರ್ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಳಾಂತರ ಮಾಡುವುದರಿಂದ ಅವರಿಗೆ ಗೌರವ ಬರುವುದಿಲ್ಲ. ಯಾವುದೇ ಕಾರಣಕ್ಕೂ ಕೆಂಪೇಗೌಡರ ಪ್ರತಿಮೆಯನ್ನು ಸ್ಥಳಾಂತರ ಮಾಡಬಾರದು. ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಹೆಚ್ಚಿನ ಜಾಗ ಇರುವುದರಿಂದ ಈ ಜಾಗವನ್ನು ಕೆಂಪೇಗೌಡರ ಪ್ರತಿಮೆಗೆ ಮೀಸಲಾಗಿ ಇಡುವ ಕೆಲಸ ಆಗಬೇಕು. ಇಲ್ಲವಾದರೆ ಜೆಡಿಎಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಶಿವಕುಮಾರ್, ಕೆಂಪೇಗೌಡ, ಬಾಲಕೃಷ್ಣ, ಮಹೇಶ್, ಕೆ.ವಿ.ಬಾಲು, ಹೊಸಹಳ್ಳಿ ರಂಗಣಿ, ಬುಡನ್ ಸಾಬ್, ಸ್ವಾಮಿ, ಆನಂದ್, ರಾಮಣ್ಣ, ಜಯರಾಂ, ಪಂಚೆ ರಾಮಣ್ಣ, ಬೆಳಗುಂಬ ಕೋಟಪ್ಪ ಮತ್ತಿತರರು ಭಾಗವಹಿಸಿದ್ದರು.

(ಫೋಟೋ ಕ್ಯಾಪ್ಷನ್‌)

ಮಾಗಡಿ ಪಟ್ಟಣದಲ್ಲಿ ಕೆಂಪೇಗೌಡರ ಪ್ರತಿಮೆ ಮುಂದೆ ಪುರಸಭಾ ಸದಸ್ಯ ಎಂ.ಎನ್.ಮಂಜುನಾಥ್‌ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸೇರಿ ಕೆಂಪೇಗೌಡರ ಪ್ರತಿಮೆ ಸ್ಥಳಾಂತರವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವಿ ಅಧಿವೇಶನಕ್ಕೆ ಪೊಲೀಸರ ಸರ್ಪಗಾವಲು
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ