ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸದನದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಹೋರಾಟ ನಡೆಸಲಾಗುತ್ತಿದೆ. ಭ್ರಷ್ಟಾಚಾರ ಮಾಡಿರುವ ರಾಜ್ಯ ಸರ್ಕಾರವನ್ನು ವಜಾ ಮಾಡಲು ರಾಜ್ಯಪಾಲ, ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಎಂದು ಹೆಸರು ಕಟ್ಟಿಕೊಂಡು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರಿಗೆ ಮೋಸ ಮಾಡಿ ದಲಿತರ ಹಣವನ್ನು ನುಂಗುತ್ತಿರುವ ಅವರಿಗೆ ಅಹಿಂದ ನಾಯಕ ಎಂದು ಹೆಸರೇಳಲು ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.
ಮಳವಳ್ಳಿಯಲ್ಲಿ ಸಾವಿರಾರು ಎಕರೆ ಭೂಮಿ ಭ್ರಷ್ಟಚಾರ ನಡೆದೆ ಎಂದು ಹೇಳುವ ಶಾಸಕರು ಅಕ್ರಮ ಆರ್ಟಿಸಿ ಮತ್ತು ಖಾತೆಗಳನ್ನು ಎಷ್ಟು ರದ್ದು ಮಾಡಿದ್ದಾರೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. ಅಕ್ರಮ ಮರಳು ಮತ್ತು ಮಣ್ಣು ಸಾಕಾಣಿಕೆಯಲ್ಲಿ ಪೊಲೀಸರು ಶಾಮೀಲಾಗಿದ್ದಾರೆ. ತಾಲೂಕಿನಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.
ಎಂಜಿನಿಯರಿಂಗ್ ಮಾಡಿರುವವರಿಗೆ ಎಷ್ಟು ಮರಳು, ಸಿಮೆಂಟ್ ಹಾಕಬೇಕು. ಗುತ್ತಿಗೆ ಕೆಲಸದಲ್ಲಿ ಎಷ್ಟು ಕಮಿಷನ್ ಪಡೆಯಬೇಕು ಎನ್ನುವುದು ಮಾತ್ರ ಅವರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಬಿ.ರವಿ ಕಂಸಾಗರ, ತಾಲೂಕು ಅಧ್ಯಕ್ಷ ವಿ.ಎಂ.ವಿಶ್ವನಾಥ್, ಪುರಸಭೆ ಸದಸ್ಯ ಟಿ.ನಂದಕುಮಾರ್, ಪಿಎಲ್ಡಿ ಬ್ಯಾಂಕ್ ನಿರ್ದೆಶಕ ನಿಂಗಣ್ಣ ಮುಖಂಡರಾದ ಡಿ.ಜಯರಾಮು, ಕಾಂತರಾಜು, ಬೂವಳ್ಳಿ ಸದಾನಂದ, ಪುಟ್ಟರಾಮು, ಸಿದ್ದಾಚಾರಿ, ಪುಟ್ಟಬುದ್ಧಿ, ಕಿಟ್ಟಿ, ಮೆಹಬೂಬ್ ಪಾಷಾ, ಆನಂದ್, ಗುರುಪ್ರಸಾದ್, ಜಯರಾಮು ಸೇರಿದಂತೆ ಇತರರು ಇದ್ದರು.