ಜೆಡಿಯು ಸಂಘಟನೆಗೆ ರಾಜ್ಯಾದ್ಯಂತ ಸಂಚಾರ

KannadaprabhaNewsNetwork |  
Published : Jul 04, 2025, 11:46 PM ISTUpdated : Jul 04, 2025, 11:47 PM IST
 01ಜೆಎಲ್ಆರ್ 2: ಜಗಳೂರು ಪಟ್ಟಣದಲ್ಲಿ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ಮತ್ತು ಡಾ.ಕೆ.ನಾಗರಾಜ್ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ರಾಜ್ಯದಲ್ಲಿ ತನ್ನದೇ ಆದ ವರ್ಚಸ್ಸು ಉಳಿಸಿಕೊಂಡಿರುವ ಜೆಡಿಯು ೨೦೨೬ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಡಾ. ಕೆ.ನಾಗರಾಜ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಎಲ್ಲರ ಮನಗೆದ್ದು ಎಂಎಲ್ಸಿ ಮಾಡಲು ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಂಘಟನೆ ಆರಂಭಿಸಿದ್ದೇವೆ ಎಂದು ಮಾಜಿ ಸಿಎಂ ಜೆ.ಎಚ್. ಪಟೇಲ್ ಪುತ್ರ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ಹೇಳಿದ್ದಾರೆ.

- ಜಗಳೂರಲ್ಲಿ ಸಂಯುಕ್ತ ಜನತಾದಳ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಹೇಳಿಕೆ

- - -

ಕನ್ನಡಪ್ರಭ ವಾರ್ತೆ ಜಗಳೂರು

ರಾಜ್ಯದಲ್ಲಿ ತನ್ನದೇ ಆದ ವರ್ಚಸ್ಸು ಉಳಿಸಿಕೊಂಡಿರುವ ಜೆಡಿಯು ೨೦೨೬ರಲ್ಲಿ ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಡಾ. ಕೆ.ನಾಗರಾಜ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿ ಅತ್ಯಂತ ಕಡಿಮೆ ಖರ್ಚಿನಲ್ಲಿ ಎಲ್ಲರ ಮನಗೆದ್ದು ಎಂಎಲ್ಸಿ ಮಾಡಲು ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಂಘಟನೆ ಆರಂಭಿಸಿದ್ದೇವೆ ಎಂದು ಮಾಜಿ ಸಿಎಂ ಜೆ.ಎಚ್. ಪಟೇಲ್ ಪುತ್ರ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್, ರಾಮಕೃಷ್ಣ ಹೆಗಡೆ ಆಡಳಿತ ರಾಜ್ಯದಲ್ಲಿ ಭರವಸೆಯ ಸೆಲೆಯಾಗಿತ್ತು. ಹೀಗಾಗಿ ರಾಜ್ಯಾದ್ಯಂತ ಜೆಡಿಯು ಬಲವರ್ದನೆಗೆ ಟೊಂಕಟ್ಟಿ ಸಂಘಟಿಸಲು ಮುಂದಾಗಿದ್ದೇವೆ. ನಿರಾಸೆ ರಾಜಕಾರಣದಲ್ಲಿ ಭರವಸೆಯ ಸೆಲೆ ಹುಡುಕಾಟ ಅಗತ್ಯವಾಗಿದೆ ಎಂದರು.

ಸಂಯುಕ್ತ ಜನತಾದಳ ರಾಷ್ಟ್ರಮಟ್ಟದಲ್ಲಿ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಜೊತೆ ಕೈ ಜೋಡಿಸಿದೆ. ಜೆಡಿಯು ಪಕ್ಷದಿಂದ ಎಂಎಲ್‌ಸಿ ಅಭ್ಯರ್ಥಿಯಾಗಿ ವೈದ್ಯರಾದ ಡಾ.ನಾಗರಾಜ್ ಆಯ್ಕೆ ಮಾಡಿದ್ದೇವೆ. ಅವರು ಆಗ್ನೇಯ ಪದವೀಧರ ಕ್ಷೇತ್ರದಿಂದ ಗೆಲ್ಲುತ್ತಾರೆ. ಸಾರ್ವತ್ರಿಕ ಚುನಾವಣೆಗೆ ಪಕ್ಷ ಸಂಘಟಿಸಿ ಎಲ್ಲ ಕ್ಷೇತ್ರಗಳಲ್ಲೂ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಮುಂದಿನ ದಿನಗಳನ್ನಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಜೆ.ಡಿ.ಯು ಅಭ್ಯರ್ಥಿಯಾಗಿ ನಿಲ್ಲುವುದಿಲ್ಲ ಎಂದ ಅವರು, ರಾಜ್ಯದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಆಗ್ನೇಯ ಪದವೀಧರರ ಕ್ಷೇತ್ರದ ಜೆ.ಡಿ.ಯು. ಅಭ್ಯರ್ಥಿ ಡಾ. ಕೆ.ನಾಗರಾಜ್ ಮಾತನಾಡಿ, ಈ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಪಧವೀಧರ, ಶಿಕ್ಷಕರ ಸಮಸ್ಯೆಗಳ ತಿಳಿದಿದ್ದೇನೆ. ಪರಿಷತ್ ಸದಸ್ಯನಾದರೆ ಎಲ್ಲ ಇಲಾಖೆಗಳ ಖಾಲಿ ಹುದ್ದೆಗಳಿಗೆ ನೇಮಕಾತಿ, ಎನ್‌ಪಿಎಸ್, ಒಪಿಎಸ್ ಪದ್ಧತಿ ಜಾರಿ, ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸೇವಾಭದ್ರತೆ, ಜ್ಯೋತಿ ಸಂಜೀವಿ ಸೇರಿದಂತೆ ಗ್ರಾಮೀಣ ಪದವೀಧರರಿಗೆ ಸ್ವಉದ್ಯೋಗಕ್ಕೆ ಆದ್ಯತೆ ಬಗ್ಗೆ ಪರಿಷತ್‌ನಲ್ಲಿ ಚರ್ಚೆ ಮಾಡಿ ಜಾರಿಗೆ ಶ್ರಮಿಸುತ್ತೇನೆ ಎಂದರು.

ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ರಂಗನಾಥ್, ಚಂದ್ರಶೇಖರ್, ರಾಜ್ಯ ಕಾರ್ಯದರ್ಶಿ ಪ್ರಕಾಶ್, ಜಿಲ್ಲಾ ಜೆಡಿಯು ಅಧ್ಯಕ್ಷ ಜಯಣ್ಣ, ಜಿಲ್ಲಾ ಸಂಚಾಲಕ ನೀಲಗಿರಿಯಪ್ಪ, ಮುಖಂಡರಾದ ಶಿವಯೋಗಿ, ಚಂಪಾವತಿ, ಪ್ರದೀಪ್, ಅಂಬರೀಷ್, ಮನೋಜ್ ಸೇರಿದಂತೆ ಅನೇಕರು ಇದ್ದರು.

- - -

-01ಜೆಎಲ್ಆರ್ 2:

ಜಗಳೂರು ಪಟ್ಟಣದಲ್ಲಿ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್ ಮತ್ತು ಡಾ. ಕೆ.ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.

PREV