ಕೂಡ್ಲಿಗಿ: ಪಟ್ಟಣದ ಬಾಪೂಜಿ ನಗರದ ಎರಡು ಮನೆಗಳಲ್ಲಿ ಪ್ರತ್ಯೇಕವಾಗಿ ಕಳ್ಳರು ಮನೆ ಬೀಗ ಮುರಿದು ಒಟ್ಟು ₹5.78 ಲಕ್ಷ ಮೌಲ್ಯದ ಆಭರಣಗಳು ಹಾಗೂ ₹1.50 ಲಕ್ಷ ನಗದು ಹಣ ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದ್ದು, ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.
ಇನ್ನೊಂದು ಘಟನೆಯಲ್ಲಿ ತಾಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಫಾರ್ಮಸಿ ಆಫೀಸರ್ ಆಗಿರುವ ಹನುಮಂತಪ್ಪ ಅವರ ಮನೆಯಲ್ಲಿ ಕಳ್ಳರು ಮನೆ ಬಾಗಿಲು ಮುರಿದು ಗಾಡ್ರೆಜ್ನಲ್ಲಿದ್ದ ₹3.44 ಲಕ್ಷ ಮೌಲ್ಯದ ಬಂಗಾರದ ಆಭರಣ, ₹50 ಸಾವಿರ ನಗದು ಸೇರಿ ಒಟ್ಟು ₹3.94 ಲಕ್ಷ ಮೌಲ್ಯದ ಆಭರಣ ಕಳುವು ಮಾಡಿಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಎರಡು ಪ್ರತ್ಯೇಕ ಘಟನೆಯ ಕಳವು ಪ್ರಕರಣಗಳು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರೆ, ಸಿಪಿಐ ಸುರೇಶ ತಳವಾರ ಹಾಗೂ ಪಿಎಸ್ಐ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪಪಂ ಹೊರಗುತ್ತಿಗೆ ನೌಕರೆ ಯುವತಿ ಆತ್ಮಹತ್ಯೆಕೊಟ್ಟೂರು: ಇಲ್ಲಿನ ತಾಲೂಕು ಪಂಚಾಯಿತಿ ಹೊರಗುತ್ತಿಗೆ ನೌಕರರಾಗಿದ್ದ ಯುವತಿಯೊಬ್ಬರು ಮಂಗಳವಾರ ತಮ್ಮ ಬಾಡಿಗೆ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರೂಪಾ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪಟ್ಟಣದ ಆಂಜನೇಯ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸಿಯಾಗಿದ್ದ ರೂಪಾ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆಂದು ಹೇಳಲಾಗಿದೆ. ಈ ಕಾರಣದಿಂದ ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಲಾಗಿದೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.